ಜಾತಿ ತಾರತಮ್ಯ ಆರೋಪ: ಡಿಎಂಕೆ ದಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

Date:

ಜಾತಿ ತಾರತಮ್ಯದ ಆರೋಪದ ನಡುವೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಡಿಎಂಕೆಯ ಪಪ್ಪಕುಡಿ ಪಂಚಾಯತ್ ಯೂನಿಯನ್ ಅಧ್ಯಕ್ಷೆ ಪೂಂಗೋಥೈ ಶಶಿಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ.

ಅತ್ಯಂತ ಹಿಂದುಳಿದ ವರ್ಗ (ಎಂಬಿಸಿ) ಸಮುದಾಯಕ್ಕೆ ಸೇರಿದ ಪಂಚಾಯತ್ ಉಪಾಧ್ಯಕ್ಷ ಜಾತಿ ಆಧಾರಿತ ತಾರತಮ್ಯವನ್ನು ಮಾಡುತ್ತಾರೆ ಎಂಬ ಕಾರಣ ನೀಡಿ ಪೂಂಗೋಥೈ ಶಶಿಕುಮಾರ್ ಇತ್ತೀಚೆಗೆ ತಿರುನಲ್ವೇಲಿ ಕಲೆಕ್ಟರ್ ಡಾ ಕೆ ಪಿ ಕಾರ್ತಿಕೇಯನ್ ಮತ್ತು ಡಿಎಂಕೆ ನಾಯಕರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಪೂಂಗೋಥೈ ಶಶಿಕುಮಾರ್ ಅವರು ಎರಡು ವರ್ಷಗಳ ಹಿಂದೆ ತಮ್ಮ ಹುದ್ದೆಯನ್ನು ತ್ಯಜಿಸಲು ಮುಂದಾಗಿದ್ದರು. ಜಾತಿ ತಾರತಮ್ಯ ನಡೆಯುತ್ತಿರುವ ಬಗ್ಗೆ ಅಂದಿನ ಕಲೆಕ್ಟರ್ ವಿ ವಿಷ್ಣು ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಆದರೆ ಡಿಎಂಕೆ ನಾಯಕತ್ವವು ಹುದ್ದೆಯಲ್ಲಿ ಮುಂದುವರಿಯಲು ಆಕೆಯ ಮನವೊಲಿಸಿತ್ತು ಎಂದು ವರದಿಯಾಗಿದೆ. ಇಂದಿಗೂ ಜಾತಿ ತಾರತಮ್ಯ ನಡೆಯುತ್ತಲೇ ಇದೆ ಎಂದು ಆರೋಪಿಸಿ ಪೂಂಗೋಥೈ ಶಶಿಕುಮಾರ್ ರಾಜೀನಾಮೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಆಂಧ್ರಪ್ರದೇಶದಲ್ಲಿ ಜಾತಿ ತಾರತಮ್ಯಕ್ಕೆ ದಲಿತ ಸರ್ಕಾರಿ ವೈದ್ಯರ ಬಲಿ

ಈ ಬಗ್ಗೆ ಮಾಧ್ಯಮ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯೆ ನೀಡಿದ ಕಾರ್ತಿಕೇಯನ್ ಅಧ್ಯಕ್ಷೆ ಪೂಂಗೋಥೈ ಶಶಿಕುಮಾರ್ ಅವರು ರಾಜೀನಾಮೆ ನೀಡಿರುವುದನ್ನು ಖಚಿತಪಡಿಸಿದ್ದಾರೆ.

“ಅಧ್ಯಕ್ಷರು, ಅವರ ಪತಿ ಮತ್ತು ಉಪಾಧ್ಯಕ್ಷರ ನಡುವೆ ಜಗಳ ನಡೆದಿದೆ ಎಂದು ಆರೋಪಗಳಿವೆ. ವಿವರವಾದ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಪೂರ್ಣಗೊಂಡ ಬಳಿಕವಷ್ಟೇ ಅವರ ರಾಜೀನಾಮೆ ಕುರಿತು ನಿರ್ಧಾರ ಕೈಗೊಳ್ಳಬಹುದು” ಎಂದು ತಿಳಿಸಿದ್ದಾರೆ.

ಪೂಂಗೋಥೈ ಅವರ ಪತಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ” ಪಂಚಾಯತ್ ಉಪಾಧ್ಯಕ್ಷ ಮತ್ತು ಡಿಎಂಕೆ ಯೂನಿಯನ್ ಕಾರ್ಯದರ್ಶಿ ಮರಿವಣ್ಣಮುತ್ತು ಅವರು ಜಾತಿಯ ಕಾರಣಕ್ಕಾಗಿ ಪೂಂಗೋಥೈ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಆಕೆಗೆ ಕಚೇರಿಯಲ್ಲಿ ಕೆಲಸ ಮಾಡಲು ಸರಿಯಾದ ಕುರ್ಚಿ, ಮೇಜು ಕೂಡ ನೀಡಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಜಾತಿ ಆಧಾರದಲ್ಲಿ ಕೈದಿಗಳ ನಡುವೆ ತಾರತಮ್ಯ ಸಲ್ಲ: ಸುಪ್ರೀಂ ಕೋರ್ಟ್

“ಇತ್ತೀಚೆಗಷ್ಟೇ ಉಪಾಧ್ಯಕ್ಷರ ಬೆಂಬಲಿಗರೊಬ್ಬರು ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ತಾನೇ ಅಧ್ಯಕ್ಷೆ ಎಂದು ಹೇಳಿಕೊಂಡಿದ್ದರು. ನಮ್ಮ ಪಕ್ಷದ ಅಧ್ಯಕ್ಷ ಎಂಕೆ ಸ್ಟಾಲಿನ್, ಡಿಎಂಕೆ ಸಂಸದೆ ಕನಿಮೋಳಿ ಮತ್ತು ಪಕ್ಷದ ಜಂಟಿ ಸಂಘಟನಾ ಕಾರ್ಯದರ್ಶಿ ಅನ್ಬಗಂ ಕಲೈ ಅವರ ಬಳಿ ನಾವು ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...