ಟೆಂಪೋದಲ್ಲಿ ಕಾಂಗ್ರೆಸ್‌ಗೆ ಹಣ: ‘ನಿಮ್ಮ ಸ್ವಂತ ಅನುಭವವೇ ಮೋದೀಜಿ’ ಎಂದು ಕೇಳಿದ ರಾಹುಲ್ ಗಾಂಧಿ

Date:

ತೆಲಂಗಾಣದ ವೇಮುಲವಾಡದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, “ಕಳೆದ ಐದು ವರ್ಷಗಳಿಂದ ಅಂಬಾನಿ–ಅದಾನಿಯನ್ನು ಗುರಿಯಾಗಿಸಿಕೊಂಡು ಪ್ರಶ್ನೆ ಮಾಡುತ್ತಿದ್ದ ಶೆಹಜಾದಾ (ರಾಹುಲ್‌ ಗಾಂಧಿ), ಇದೀಗ ಏಕಾಏಕಿ ಅಂಬಾನಿ-ಅದಾನಿ ವಿರುದ್ಧ ಪ್ರಶ್ನಿಸುವುದನ್ನು ನಿಲ್ಲಿಸಿದ್ದಾರೆ. ಅವರು ಟೆಂಪೋದಲ್ಲಿ ಕಪ್ಪು ಹಣ ಕಳುಹಿಸಿದ್ದಾರಾ” ಎಂದು ಪ್ರಶ್ನಿಸಿದ್ದರು.

ಇದಕ್ಕೆ ವಿಡಿಯೋ ಹೇಳಿಕೆಯ ಮೂಲಕ ಉತ್ತರ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ನಮಸ್ಕಾರ ಮೋದಿ ಅವರೇ, ಏನು ಭಯಗೊಂಡಿದ್ದೀರಾ? ಸಾಮಾನ್ಯವಾಗಿ ನೀವು ಮುಚ್ಚಿದ ಕೋಣೆಯಲ್ಲಿ ಅಂಬಾನಿ, ಅದಾನಿ ಬಗ್ಗೆ ನೀವು ಮಾತನಾಡುತ್ತೀರಿ. ಆದರೆ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದೀರಿ. ಅವರು ಟೆಂಪೋದಲ್ಲಿ ಹಣ ಕೊಡ್ತಾರೆ ಅಂತಾ ನಿಮಗೆ ಗೊತ್ತು. ಇದು ನಿಮ್ಮ ಮಾತು ಸ್ವಂತ ಅನುಭವದಿಂದ ಬಂದಿದ್ದೇ?” ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಬಿಐ, ಇಡಿ ಕಳುಹಿಸಿ ಸಾಧ್ಯವಾದಷ್ಟು ಬೇಗ ವಿಚಾರಣೆ ನಡೆಸಿ. ಹೆದರಿಕೊಳ್ಳಬೇಡಿ. ನಾನು ಮತ್ತೆ ಹೇಳುತ್ತೇನೆ ಪ್ರಧಾನಿ ನರೇಂದ್ರ ಮೋದಿಯವರು ಅಂಬಾನಿ, ಅದಾನಿಗೆ ನೀಡಿದ್ದಾರೆ. ಅಷ್ಟೇ ಹಣವನ್ನು ನಾನು ಭಾರತದ ಬಡವರಿಗೆ ನೀಡುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

“ಮಹಾಲಕ್ಷ್ಮಿ ಹಾಗೂ ಉದ್ಯೋಗ ಯೋಜನೆ ಮೂಲಕ ಕೋಟ್ಯಂತರ ಜನರನ್ನು ಲಕ್ಷಾಧಿಪತಿಯನ್ನಾಗಿ ನಾವು ಮಾಡುತ್ತೇವೆ. ಮೋದಿ ಅವರು 22 ಜನರನ್ನು ಕೋಟ್ಯಾಧಿಪತಿ ಮಾಡಿದ್ದಾರೆ. ಆದರೆ ನಾವು ಕೋಟ್ಯಾಂತರ ಜನರನ್ನು ಲಕ್ಷಾಧಿಪತಿ ಮಾಡಲಿದ್ದೇವೆ” ಎಂದು ರಾಹುಲ್‌ ಗಾಂಧಿ ಪ್ರಧಾನಿಗೆ ತಿರುಗೇಟು ಕೊಟ್ಟಿದ್ದಾರೆ.

ರಾಹುಲ್ ಗಾಂಧಿ ಈ ವಿಡಿಯೋವನ್ನು ತಮ್ಮ ಸೋಷಿಯಲ್ ಮೀಡಿಯಾ ಪುಟಗಳಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ. ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದೊಂದಿಗೆ, “ಬಿಜೆಪಿಯ ಭ್ರಷ್ಟಾಚಾರದ ಟೆಂಪೋಗೆ ‘ಚಾಲಕ’ ಮತ್ತು ‘ಸಹಾಯಕ’ ಯಾರು ಎಂಬುದು ದೇಶಕ್ಕೇ ಗೊತ್ತಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ‘Yes’, ಮೋದಿ ಹೇಳಿದ್ದು ಸರಿ; ಚುನಾವಣೆ ವೇಳೆ ಅದಾನಿ-ಅಂಬಾನಿ ವಿಷಯ ಚರ್ಚೆಯಾಗಲೇಬೇಕು!

ರಾಹುಲ್ ಗಾಂಧಿ ಈ ವಿಡಿಯೋವನ್ನು ಎಕ್ಸ್‌ನಲ್ಲಿ ಈಗಾಗಲೇ 1.7 ಮಿಲಿಯನ್ ಜನ ನೋಡಿದ್ದರೆ, ಇನ್‌ಸ್ಟಾಗ್ರಾಂನಲ್ಲಿ ಸುಮಾರು 4 ಮಿಲಿಯನ್ ಜನ ವೀಕ್ಷಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...