ಕೇಂದ್ರದ ಐಟಿ ನಿಯಮಗಳ ತಿದ್ದುಪಡಿ ಸೆನ್ಸಾರ್‌ಶಿಪ್‌ಗೆ ಸಮಾನ: ಎಡಿಟರ್ಸ್‌ ಗಿಲ್ಡ್‌ ಕಳವಳ

Date:

  • ಐಟಿ ತಿದ್ದುಪಡಿ ವಿರೋಧಿಸಿ ಎಡಿಟರ್ಸ್‌ ಗಿಲ್ಡ್‌ ಕೇಂದ್ರ ಸರ್ಕಾರಕ್ಕೆ ಪತ್ರ
  • ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ ಐಟಿ ನಿಯಮಗಳ ತಿದ್ದುಪಡಿ ವಿರೋಧ

ಕೇಂದ್ರ ಸರ್ಕಾರ ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ತಿದ್ದುಪಡಿ ಮಾಡಿ ‘ಫ್ಯಾಕ್ಟ್‌ಚೆಕ್‌ ಸಂಸ್ಥೆ’ ರಚಿಸಲು ನಿರ್ಧರಿಸಿರುವುದು ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತದೆ. ಇಂಥ ನಡೆ ಸ್ವಾಭಾವಿಕ ನ್ಯಾಯಕ್ಕೆ ವಿರುದ್ಧ ಮತ್ತು ಸೆನ್ಸಾರ್‌ಶಿಪ್‌ಗೆ ಸಮಾನ ಎಂದು ಭಾರತದ ಸಂಪಾದಕರ ಒಕ್ಕೂಟ (ಎಡಿಟರ್ಸ್‌ ಗಿಲ್ಡ್‌ ಆಫ್‌ ಇಂಡಿಯಾ) ಶುಕ್ರವಾರ (ಏಪ್ರಿಲ್‌ 7) ಕಳವಳ ವ್ಯಕ್ತಪಡಿಸಿದೆ.

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಗುರುವಾರ (ಏಪ್ರಿಲ್‌ 6) ವಿವಾದಾತ್ಮಕ 2021ರ ಐಟಿ ನಿಯಮಗಳು ಕಾಯಿದೆಗೆ ಹೊಸ ತಿದ್ದುಪಡಿ ತಂದಿದೆ. ಈ ತಿದ್ದುಪಡಿಗೆ ಗಿಲ್ಡ್‌ ಆಕ್ಷೇಪ ವ್ಯಕ್ತಪಡಿಸಿದೆ.

ಸತ್ಯಶೋಧನಾ ಸಂಸ್ಥೆ ತಪ್ಪು ಮಾಹಿತಿಯನ್ನು ಪತ್ತೆಹಚ್ಚಲು ಉದ್ದೇಶಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ದುರುದ್ದೇಶಪೂರಿತವಾಗಿ ಸತ್ಯಶೋಧನೆಯ ಹೆಸರಿನಲ್ಲಿ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಕಿರುಕುಳ ನೀಡುವ ಸಾಧ್ಯತೆಯ ಬಗ್ಗೆ ಗಿಲ್ಡ್ ಕಳವಳ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಕುರಿತ ಸುದ್ದಿಗಳನ್ನು ಸ್ವತಃ ಸರ್ಕಾರವೇ ಪರಿಶೀಲಿಸಿ ‘ಸತ್ಯ’ ಅಥವಾ ‘ಸುಳ್ಳು’ ಎಂದು ನಿರ್ಧರಿಸಿ ಯಾವುದೇ ಮಾಧ್ಯಮ ಸಂಸ್ಥೆಯಿಂದ ಪ್ರಕಟವಾದ ಸುದ್ದಿ, ಲೇಖನಗಳು ಅಥವಾ ವಿಡಿಯೊಗಳನ್ನು ಪ್ರಕಟಣೆಯಲ್ಲಿ/ ಪ್ರಸಾರದಲ್ಲಿ ಉಳಿಸಿಕೊಳ್ಳದಂತೆ ಆದೇಶಿಸುವ ಹಕ್ಕನ್ನು ಸರ್ಕಾರ ತನಗೆ ದಯಪಾಲಿಸಿಕೊಂಡಿದೆ ಎಂದು ಎಡಿಟರ್ಸ್ ಗಿಲ್ಡ್ ಅಭಿಪ್ರಾಯಪಟ್ಟಿದೆ.

ಈ ಕುರಿತು ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಪತ್ರಬರೆದಿರುವ ಎಡಿಟರ್ಸ್‌ ಗಿಲ್ಡ್‌, ಪತ್ರವನ್ನು ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

“2021ರ ಐಟಿ ನಿಯಮಗಳು ಕಾಯಿದೆಗೆ ಸೂಚಿಸಲಾದ ಹೊಸ ತಿದ್ದುಪಡಿ ಮಾಧ್ಯಮ ಸ್ವಾತಂತ್ರ್ಯಕ್ಕೆ ಹಾನಿಯುಂಟು ಮಾಡಿದೆ. ತಿದ್ದುಪಡಿಯಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ‘ಸತ್ಯಶೋಧನಾ ಸಂಸ್ಥೆ’ ಸ್ಥಾಪನೆಗೆ ಅಧಿಕಾರ ನೀಡುತ್ತದೆ. ಈ ಸಂಸ್ಥೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಯಾವುದೇ ಬರಹವನ್ನು/ಪ್ರಸಾರವನ್ನು ‘ಸುಳ್ಳು ಅಥವಾ ನಕಲಿ’ ಎಂದು ನಿರ್ಧರಿಸುವ ಮತ್ತು ಅದನ್ನು ಅಳಿಸುವಂತೆ ಆದೇಶಿಸುವ ಹೆಚ್ಚಿನ ಅಧಿಕಾರವನ್ನು ಹೊಂದಿರುತ್ತದೆ” ಎಂದು ಗಿಲ್ಡ್‌ ಪತ್ರದಲ್ಲಿ ಹೇಳಿದೆ.

“ಯಾವುದು ‘ನಕಲಿ ಅಥವಾ ಅಲ್ಲ’ ಎಂಬುದನ್ನು ನಿರ್ಧರಿಸಲು ಸರ್ಕಾರ ಈ ಸತ್ಯಶೋಧನಾ ಸಂಸ್ಥೆಗೆ ಸಂಪೂರ್ಣ ಅಧಿಕಾರ ನೀಡಿದೆ. ಇದು ಅಪಾಯಕಾರಿ” ಎಂದು ಗಿಲ್ಡ್ ಅಭಿಪ್ರಾಯಪಟ್ಟಿದೆ.

ಅಂತಹ ಸತ್ಯಶೋಧನಾ ಸಂಸ್ಥೆಗೆ ಮೇಲ್ವಿಚಾರಣಾ ಕಾರ್ಯವ್ಯಾಪ್ತಿಯನ್ನು ವಿವರಿಸಿಲ್ಲ. ನ್ಯಾಯಾಂಗ ದೂರದೃಷ್ಟಿ, ಕುಂದು ಕೊರತೆ ಆಲಿಕೆ ಹೇಗೆ ಎಂದು ತಿಳಿಸಿಲ್ಲ. ಸಾಮಾಜಿಕ ಜಾಲತಾಣಗಳನ್ನು ಬ್ಲಾಕ್‌ ಮಾಡಿಸಿರುವ ವಿರುದ್ಧ ಶ್ರೇಯಾ ಸಿಂಘಾಲ್ ಮತ್ತು ಭಾರತ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮುಂದಿಟ್ಟಿರುವ ನಿರ್ದೇಶನಗಳನ್ನು ಹೇಗೆ ಅನುಸರಿಸಲಾಗಿದೆ ಎಂದು ತಿಳಿಸಿಲ್ಲ. ಇದೆಲ್ಲವೂ ಸ್ವಾಭಾವಿಕ ನ್ಯಾಯಕ್ಕೆ ವಿರುದ್ಧ ಮತ್ತು ಸೆನ್ಸಾರ್‌ಶಿಪ್‌ಗೆ ಸಮಾನ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ವಿವಾದಾತ್ಮಕ ಮೋದಿ ಆಪ್ತ ಕಿರಣ್ ಪಟೇಲ್‌ ಬಂಧಿಸಿದ ಪೊಲೀಸರು

ನಾಗರಿಕ ಹಕ್ಕುಗಳ ಸಂಸ್ಥೆ ‘ಇಂಟರ್‌ನೆಟ್ ಫ್ರೀಡಂ ಫೌಂಡೇಶನ್’ ಹೇಳಿಕೆ ನೀಡಿ, “ಹೊಸ ತಿದ್ದುಪಡಿ ಗಂಭೀರ ಬೆದರಿಕೆ ಉಂಟು ಮಾಡುವ ಸಾಧ್ಯತೆ ಇದೆ” ಎಂದು ಅಭಿಪ್ರಾಯಪಟ್ಟಿದೆ.

ಬಳಕೆದಾರರು ಕೇಂದ್ರ ಸರ್ಕಾರವನ್ನು ವಿರೋಧಿಸಿ ಯಾವುದೇ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್‌, ಟ್ವಿಟರ್‌ ಮೊದಲಾದವುಗಳಲ್ಲಿ ಪೋಸ್ಟ್‌ ಮಾಡದಂತೆ ಖಚಿತಪಡಿಸಿಕೊಳ್ಳಲು ಫ್ಯಾಕ್ಟ್‌ಚೆಕ್ ಸಂಸ್ಥೆ ಸ್ಥಾಪಿಸಲು ಮುಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...