ಕೇಂದ್ರ ಸರ್ಕಾರ ಯೂಟರ್ನ್: ಲ್ಯಾಟರಲ್‌ ಎಂಟ್ರಿ ನೇಮಕಾತಿಯ ಜಾಹೀರಾತು ಹಿಂಪಡೆಯಲು ಸೂಚನೆ

Date:

ಕೇಂದ್ರ ಸರ್ಕಾರದ 10 ಜಂಟಿ ಕಾರ್ಯದರ್ಶಿಗಳು ಮತ್ತು 35 ನಿರ್ದೇಶಕರು/ಉಪ ಕಾರ್ಯದರ್ಶಿಗಳ ಹುದ್ದೆಗಳ ಲ್ಯಾಟರಲ್‌ ಎಂಟ್ರಿ ನೇಮಕಾತಿ ಜಾಹೀರಾತು ಹಿಂಪಡೆಯುವಂತೆ ಕೇಂದ್ರ ಸರ್ಕಾರ ಇಂದು (ಆಗಸ್ಟ್ 20) ಕೇಂದ್ರೀಯ ಲೋಕಸೇವಾ ಆಯೋಗಕ್ಕೆ (ಯುಪಿಎಸ್‌ಸಿ) ನಿರ್ದೇಶಿಸಿದೆ.

ಸರ್ಕಾರಿ ಸೇವೆಗೆ ನೇಮಕಾತಿ ಮಾಡುವಾಗ ಮೀಸಲಾತಿಯನ್ನು ಕಡ್ಡಾಯವಾಗಿ ಅನ್ವಯಿಸಲೇಬೇಕು. ಹಾಗೆ ಮಾಡದ ನೇಮಕಾತಿಗಳು ಸ್ವೀಕಾರಾರ್ಹವಲ್ಲ ಎಂದು ಪ್ರತಿಪಕ್ಷಗಳು ಪ್ರತಿಭಟನೆ ವ್ಯಕ್ತಪಡಿಸಿದ್ದವು. ಎನ್‌ಡಿಎ ಮಿತ್ರ ಪಕ್ಷ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಇದಾದ ಬೆನ್ನಲ್ಲೇ ಕೇಂದ್ರ ಈ ಸೂಚನೆ ನೀಡಿದೆ.

ಸರ್ಕಾರದ ಈ ಕ್ರಮದಿಂದ ಎಸ್​ಸಿ, ಎಸ್​ಟಿ ಸೇರಿದಂತೆ ಹಿಂದುಳಿದ ಸಮುದಾಯಗಳ ಮೀಸಲಾತಿ ಹಕ್ಕನ್ನು ಕಸಿದುಕೊಂಡಂತಾಗುತ್ತದೆ ಎಂದು ಪ್ರತಿಪಕ್ಷಗಳು ಹೇಳಿದ್ದವು. ಪ್ರಮುಖ ಹುದ್ದೆಗಳಿಗೆ ಆರ್‌ಎಸ್‌ಎಸ್‌ ಸಂಬಂಧಿತ ವ್ಯಕ್ತಿಗಳನ್ನು ನೇಮಕ ಮಾಡಿಕೊಳ್ಳಲು ಹಿಂಬಾಗಿಲಿನಿಂದ(ಲ್ಯಾಟರಲ್ ಎಂಟ್ರಿ) ಈ ಪ್ರಯತ್ನ ಮಾಡಲಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಇದಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಯೂಟರ್ನ್ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯುಪಿಎಸ್‌ಸಿ ಅಧ್ಯಕ್ಷೆಯಾಗಿ ಮಾಜಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸೂದನ್ ನೇಮಕ

ಪ್ರಧಾನಿ ನರೇಂದ್ರ ಮೋದಿ ನಿರ್ದೇಶನದ ಮೇರೆಗೆ ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಿಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸಚಿವ ಜಿತೇಂದ್ರ ಸಿಂಗ್ ಅವರು, ಯುಪಿಎಸ್​ಸಿ ಅಧ್ಯಕ್ಷೆ ಪ್ರೀತಿ ಸೂದನ್​ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

‘ಲ್ಯಾಟರಲ್ ಎಂಟ್ರಿ’ ಮೂಲಕ ಕೇಂದ್ರ ಲೋಕಸೇವಾ ಆಯೋಗಕ್ಕೆ(ಯುಪಿಎಸ್‌ಸಿ) ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳೂ ಸೇರಿದಂತೆ 45 ಮಂದಿಯ ನೇಮಕಾತಿ ಕುರಿತಂತೆ ಶನಿವಾರ ಯುಪಿಎಸ್‌ಸಿ ನೋಟಿಫಿಕೇಶನ್ ಹೊರಡಿಸಿತ್ತು. ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು ‘ಲ್ಯಾಟರಲ್‌ ಎಂಟ್ರಿ’ ಮೂಲಕ ನೇಮಕ ಮಾಡಿಕೊಳ್ಳುತ್ತಿದ್ದೇವೆ ಎಂದು ಯುಪಿಎಸ್‌ಸಿ ತಿಳಿಸಿತ್ತು.

ಆದರೆ ಯುಪಿಎಸ್​ಸಿಯ ಈ ನಿರ್ಧಾರ ಮೀಸಲಾತಿಗೆ ಧಕ್ಕೆ ತರುತ್ತದೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.

“ಈ ಕೂಡಲೇ ಜಾಹೀರಾತನ್ನು ರದ್ದು ಮಾಡಿ, ಹಿಂದುಳಿದ ಸಮುದಾಯಗಳ ಜನರು ಸರ್ಕಾರಿ ಹುದ್ದೆಗಳಲ್ಲಿ ನ್ಯಾಯಸಮ್ಮತವಾಗಿ ತಮ್ಮ ಪ್ರಾತಿನಿಧ್ಯ ಪಡೆಯಲು ಅವಕಾಶ ಮಾಡಿಕೊಡಿ” ಎಂದು ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಲ್ಯಾಟರಲ್‌ ಎಂಟ್ರಿ
ಲ್ಯಾಟರಲ್‌ ಎಂಟ್ರಿ
?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...