ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಹಾಸಿಗೆ ಕೊರತೆ; ಚಿಕಿತ್ಸೆ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು

Date:

ಉತ್ತರ ಪ್ರದೇಶ ಲಖನೌದ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ(ಎಸ್‌ಜಿಪಿಜಿಐ) ತುರ್ತು ಚಿಕಿತ್ಸಾ ವಿಭಾಗದಲ್ಲಿ ಹಾಸಿಗೆ ಕೊರತೆಯಿಂದಾಗಿ ಬಿಜೆಪಿ ಮಾಜಿ ಸಂಸದನ ಪುತ್ರರೊಬ್ಬರು ಮೃತಪಟ್ಟಿರುವ ಘಟನೆ ಇತ್ತೀಚಿಗೆ ನಡೆದಿದೆ.

ಬಿಜೆಪಿ ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ ಅವರ ಪುತ್ರ ಪ್ರಕಾಶ್ ಮಿಶ್ರಾ (42) ಅವರು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು. ಶನಿವಾರ (ಅ.27) ರಂದು ಎಸ್‌ಜಿಪಿಜಿಐ ಆಸ್ಪತ್ರೆಗೆ ಆಗಮಿಸಿದ್ದರು. ಆದರೆ, ಹಾಸಿಗೆಗಳ ಕೊರತೆಯಿಂದ ರೋಗಿಯನ್ನು ಸೇರಿಸಿಕೊಳ್ಳಲು ಕರ್ತವ್ಯಾಧಿಕಾರಿ ನಿರಾಕರಿಸಿದರು. ನಂತರದಲ್ಲಿ ಪ್ರಕಾಶ್ ಮಿಶ್ರಾ ಅವರು ಒಂದು ಗಂಟೆಯ ನಂತರ ಆಸ್ಪತ್ರೆಯಲ್ಲಿಯೇ ನಿಧನರಾದರು.

ಘಟನೆಯ ನಂತರ ಉತ್ತರ ಪ್ರದೇಶ ಸರ್ಕಾರ ಸೋಮವಾರ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ತುರ್ತು ಚಿಕಿತ್ಸಾ ವಿಭಾಗದ ಪ್ರಭಾರಿ ವೈದ್ಯರನ್ನು ಸರ್ಕಾರ ವಜಾಗೊಳಿಸಲಾಗಿದ್ದು, ಸಂಸ್ಥೆಯ ನಿರ್ದೇಶಕರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಪಕ್ಷ ನಾಯಕರ ಫೋನ್ ಹ್ಯಾಕಿಂಗ್ ಯತ್ನ; ಸರ್ಕಾರದ ವಿರುದ್ಧ ‘ಇಂಡಿಯಾ’ ನಾಯಕರ ವಾಗ್ದಾಳಿ

“ಮಾಜಿ ಸಂಸದ, ಗೌರವಾನ್ವಿತ ಭೈರೋನ್ ಪ್ರಸಾದ್ ಮಿಶ್ರಾ ಅವರ ಪುತ್ರ ಲಖನೌದ ಆಸ್ಪತ್ರೆಯಲ್ಲಿ ನಿಧನರಾದ ಬಗ್ಗೆ ಉತ್ತರ ಪ್ರದೇಶ ಸರ್ಕಾರವು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಸಂಬಂಧಪಟ್ಟ ವೈದ್ಯರನ್ನು ಸಂಸ್ಥೆಯಿಂದ ಬಿಡುಗಡೆಗೊಳಿಸಲಾಗುತ್ತಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಪಿಜಿಐ ನಿರ್ದೇಶಕರಿಗೆ ಎಚ್ಚರಿಕೆಯನ್ನು ನೀಡಲಾಗಿದೆ” ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ರತಿಪಕ್ಷಗಳು ಉತ್ತರ ಪ್ರದೇಶ ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿವೆ. “ಚಿಕಿತ್ಸೆಯ ಕೊರತೆಯಿಂದ ಒಬ್ಬ ನಿರ್ದಿಷ್ಟ ವ್ಯಕ್ತಿ ಸಾಯುತ್ತಾನೆ ಎಂಬುದರ ಬಗ್ಗೆ ಈ ಪ್ರಶ್ನೆ ಮಾಡುತ್ತಿಲ್ಲ. ಇದು ಪ್ರತಿಯೊಬ್ಬ ಸಾಮಾನ್ಯ ನಾಗರಿಕನ ಜೀವನದ ಮೌಲ್ಯಕ್ಕೂ ಸಂಬಂಧಿಸಿದೆ. ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯ ಮಾಜಿ ಸಂಸದರೊಬ್ಬರ ಮಗನಿಗೂ ಚಿಕಿತ್ಸೆ ಸಿಗುತ್ತಿಲ್ಲ ಎಂದಾದರೆ ಜನಸಾಮಾನ್ಯರ ಬಗ್ಗೆ ಏನು ಹೇಳಬೇಕು” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...