ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ವಿಡಿಯೋ ಬಿಡುಗಡೆ; ಪಂಜಾಬ್‌ ಪೊಲೀಸರ ಮೇಲೆ ಆರೋಪ

Date:

  • ಮಾರ್ಚ್‌ 18ರಿಂದ ತಲೆ ಮರೆಸಿಕೊಂಡಿರುವ ಖಲಿಸ್ತಾನಿ ನಾಯಕ ಅಮೃತ್‌ಪಾಲ್‌ ಸಿಂಗ್‌
  • ಪಂಜಾಬ್ಗೆ ಮರಳಿದ್ದಾನೆ ಎಂದು ಪೊಲೀಸರ ಹೇಳಿಕೆ ಬೆನ್ನಲ್ಲೇ ವಿಡಿಯೋ ಬಿಡುಗಡೆ

ಹನ್ನೆರೆಡು ದಿನಗಳಿಂದ ಪಂಜಾಬ್ ಪೊಲೀಸರಿಂದ ತಲೆತಪ್ಪಿಸಿಕೊಂಡಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್, ಬುಧವಾರ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ತಾನು ತಲೆಮರೆಸಿಕೊಂಡಿರುವುದಾಗಿ ತಿಳಿಸಿದ್ದಾನೆ.

ಅಮೃತಪಾಲ್ ಸಿಂಗ್ ಪಂಜಾಬ್‌ಗೆ ಮರಳಿದ್ದಾನೆ ಮತ್ತು ಆತ ಶರಣಾಗಲು ಯೋಜಿಸಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳುತ್ತಿದ್ದಂತೆ ವಿಡಿಯೋ ಬಿಡುಗಡೆಯಾಗಿದೆ.

“ಪಂಜಾಬ್‌ ಸರ್ಕಾರಕ್ಕೆ ನನ್ನನ್ನು ಬಂಧಿಸುವ ಉದ್ದೇಶವಿದ್ದರೆ, ಪೊಲೀಸರು ನನ್ನ ಮನೆಗೆ ಆಗಮಿಸಿದ್ದರೆ ನಾನೇ ಶರಣಾಗುತ್ತಿದ್ದೆ. ಆದರೆ ಅವರ ಉದ್ದೇಶ ಬೇರೆ ಇದ್ದಂತಿದೆ. ನನ್ನನ್ನು ಬಂಧಿಸಲು ಕಳುಹಿಸಲಾದ ಲಕ್ಷಗಟ್ಟಲೆ ಪೊಲೀಸರ ಪ್ರಯತ್ನದಿಂದ ದೇವರು ನನ್ನನ್ನು ರಕ್ಷಿಸಿದ್ದಾನೆ” ಎಂದು ವಿಡಿಯೋದಲ್ಲಿ ತಿಳಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿವಾದಾತ್ಮಕ ಪೂತನಿ ಹೇಳಿಕೆ; ರಾಜಕೀಯ ಕೆಸರೆರಚಾಟಕ್ಕೆ ಮಹಿಳೆಯರು ಗುರಿ

“ಅಂದಿನ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಆಳ್ವಿಕೆಯಲ್ಲಿ ಸಿಖ್ಖರಿಗೆ ಏನು ಮಾಡಲಾಯಿತು, ಈಗ ಅದನ್ನೇ ಮಾಡಲಾಗುತ್ತಿದೆ. ನನ್ನ ಪರವಾಗಿ ಪ್ರತಿಭಟನೆ ನಡೆಸಿದ ಎಲ್ಲ ಸಂಘ ಸಂಸ್ಥೆಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಸ್ಥಿತಿ ಅರ್ಥ ಮಾಡಿಕೊಳ್ಳಬೇಕಾದರೆ ಇದು ಕೇವಲ ನನ್ನ ಬಂಧನದ ವಿಚಾರವಲ್ಲ, ಇಡೀ ಸಿಖ್ ಸಮುದಾಯದ ಮೇಲಿನ ದಾಳಿ ಎಂದು ಸಮುದಾಯದವರು ಅರ್ಥಮಾಡಿಕೊಳ್ಳಬೇಕು. ನನಗೆ ಬಂಧನದ ಭಯವಿರಲಿಲ್ಲ. ಆದರೆ ಪಂಜಾಬ್‌ ಪೊಲೀಸರ ಉದ್ದೇಶ ಬೇರೆಯೇ ಇದ್ದಂತಿದೆ” ಎಂದು ಅಮೃತ್‌ ಪಾಲ್‌ ಸಿಂಗ್‌ ವಿಡಿಯೋದಲ್ಲಿ ತಿಳಿಸಿದ್ದಾನೆ.  

ಸಿಖ್ಖರಿಗೆ ಪ್ರತ್ಯೇಕ ರಾಜ್ಯದ ಬೇಡಿಕೆ ಬೆಂಬಲಿಸುವ ಮತ್ತು ಕಳೆದ ತಿಂಗಳು ಪೊಲೀಸ್ ಠಾಣೆಯ ಮೇಲೆ ಸಶಸ್ತ್ರ ದಾಳಿ ನಡೆಸಿದ ಆರೋಪದ ಮೇಲೆ ಅಮೃತಪಾಲ್ ಸಿಂಗ್‌ನನ್ನು ಪೊಲೀಸರು ಕಳೆದ ಹನ್ನೆರಡು ದಿನಗಳಿಂದ ಹುಡುಕುತ್ತಿದ್ದಾರೆ.

ಕಪುರ್ತಲಾದ ಗುರುದ್ವಾರವೊಂದರ ಬಳಿ ಅಮೃತಪಾಲ್ ಸಿಂಗ್ ಬಿಟ್ಟು ಹೋಗಿದ್ದಎನ್ನಲಾದ ಕಾರನ್ನು ಪೊಲೀಸರು ಇಂದು (ಮಾರ್ಚ್‌ 29) ವಶಪಡಿಸಿಕೊಂಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ಅಮೃತ್‌ ಪಾಲ್ ಹೋಶಿಯಾರ್‌ಪುರದ ಹಳ್ಳಿಗಳ ಮೂಲಕ ಅಮೃತಸರಕ್ಕೆ ಪ್ರಯಾಣಿಸುತ್ತಿದ್ದ. ಈತ ಪಾಟಿಯಾಲ ಹಾಗೂ ದೆಹಲಿಯಲ್ಲಿ ಇರುವ ಬಗ್ಗೆ ಪಂಜಾಬ್‌ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ್ದರು.

ಮಾರ್ಚ್ 18ರಿಂದ ಅಮೃತಪಾಲ್ ವಿರುದ್ಧ ಬಂಧನದ ಆದೇಶ ಜಾರಿಯಾದಾಗಿನಿಂದ ಪಂಜಾಬ್ ಪೊಲೀಸರು ಆತನ ಹಲವಾರು ಸಹಚರರನ್ನು ಬಂಧಿಸಿದ್ದಾರೆ. ಈತನ ವಿರುದ್ಧ ರಾಷ್ಟ್ರವಿರೋಧಿ ಚಟುವಟಿಕೆ ಸೇರಿದಂತೆ ಕನಿಷ್ಠ ಎಂಟು ಪ್ರಕರಣಗಳನ್ನು ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...