ವೃದ್ದಾಪ್ಯ ವೇತನಕ್ಕಾಗಿ 2 ಕಿ.ಮೀ ತೆವಳಿಕೊಂಡೇ ಕಚೇರಿಗೆ ಬಂದ ವೃದ್ಧ ಮಹಿಳೆ; ಮನಕಲಕುವ ವಿಡಿಯೋ ವೈರಲ್

Date:

77 ವರ್ಷದ ವೃದ್ಧ ಮಹಿಳೆಯೊಬ್ಬರು ವೃದ್ಧಾಪ್ಯವೇನತಕ್ಕಾಗಿ ತೆವಳಿಕೊಂಡೇ 2 ಕಿ.ಮೀ ದೂರದ ಪಂಚಾಯತಿ ಕಚೇರಿಗೆ ತೆರಳಿರುವ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ತೆವಳುತ್ತಾ ಕಚೇರಿಗೆ ಹೋಗಿರುವ ಮನಕಲಕುವ ದೃಶ್ಯಗಳುಳ್ಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯ ಆಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿಯೋಂಜಾರ್ ಜಿಲ್ಲೆಯ ಟೆಲ್ಕೊಯ್ ಪ್ರದೇಶದ ನಿವಾಸಿ ಪಥೂರಿ ದೆಹುರಿ ಎಂಬ ವೃದ್ಧ ಮಹಿಳೆ ತಮ್ಮ ಜೀವನೋಪಾಯಕ್ಕಾಗಿ ಸರ್ಕಾರದಿಂದ ಬರುವ ವೃದ್ಧಾಪ್ಯವೇತನವನ್ನೇ ಅವಲಂಭಿಸಿದ್ದಾರೆ. ಈ ಹಿಂದೆ ಅವರಿಗೆ ಅಪಘಾತವೂ ಆಗಿದ್ದರಿಂದ, ನೇರವಾಗಿ ನಿಂತು ನಡೆಯಲು ವೃದ್ಧಗೆ ಸಾಧ್ಯವಿಲ್ಲ. ಆದರೂ, ವೃದ್ಧಾಪ್ಯವೇತನವನ್ನು ಪಡೆಯಲು ಬೇರಾರು ಸಹಾಯಕ್ಕೆ ಇಲ್ಲದ ಕಾರಣ, ಆಕೆ ತೆವಳುತ್ತಲೇ ಪಂಚಾಯತ್ ಕಚೇರಿಗೆ ಹೋಗಿ, ಬರಬೇಕಾದ ಅನಿವಾರ್ಯತೆ ಇದೆ ಎಂದು ತಿಳಿದುಬಂದಿದೆ.

ಆದಾಗ್ಯೂ, ವೃದ್ದ, ವಿಧವಾ, ವಿಶೇಷಚೇತನರಿಗೆ ನೀಡಲಾಗುವ ಪಿಂಚಣಿಗಳನ್ನು ಮನೆ ಬಾಗಿಲಿಗೇ ತಲುಪಿಸಬೇಕೆಂಬ ನಿಯಮಗಳಿವೆ. ಮನೆ ಬಾಗಿಲಿಗೆ ಸರ್ಕಾರಿ ಸೇವೆ ಎಂದು ಹಲವಾರು ಸರ್ಕಾರಗಳು ಘೋಷಿಸುತ್ತಿವೆ. ಪ್ರಚಾರ ಪಡೆಯುತ್ತಿವೆ. ಆದರೆ, ಈ ವೃದ್ದೆ ತಮ್ಮ ಮಾಸಿಕ ವೃದ್ದಾಪ್ಯವೇತನಕ್ಕಾಗಿ ಕಚೇರಿ ಬಾಗಿಲಿಗೆ ತಾವೇ ತೆವಳಿಕೊಂಡು ಹೋಗಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಂಚಣಿ ಬೇಕೆಂದರೆ ಕಚೇರಿಗೆ ಬರಬೇಕೆಂದು ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿ ಹೇಳಿದ್ದರೆಂದು ಆರೋಪಿಸಲಾಗಿದೆ. ಕಚೇರಿಗೂ-ಮನೆಗೂ ತೆವಳಿಕೊಂಡೇ ಓಡಾಡುತ್ತಿರುವುದರಿಂದ ಆಕೆಯ ಕೈಗಳು ಮತ್ತು ಕಾಲುಗಳಲ್ಲಿ ‘ಬೊಬ್ಬೆ’ (ಗುಳ್ಳೆ) ಎದ್ದಿವೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿ, “ಮಹಿಳೆಯ ಸಂಕಷ್ಟದ ಪರಿಸ್ಥಿತಿ ಬಗ್ಗೆ ನಮಗೆ ತಿಳಿದಿರಲಿಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. ಮುಂದಿನ ತಿಂಗಳಿನಿಂದ ಆಕೆಯ ಮನೆಗೆ ಸೇವೆಗಳನ್ನು ಒದಗಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...