ವೈ ಎಸ್ ಶರ್ಮಿಳಾ ಜನವರಿ 4 ರಂದು ಕಾಂಗ್ರೆಸ್ ಸೇರ್ಪಡೆ !

Date:

ವೈಎಸ್‌ಆರ್‌ ತೆಲಂಗಾಣ ಪಕ್ಷದ ಮಾಜಿ ಅಧ್ಯಕ್ಷೆ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಸಹೋದರಿ ವೈ ಎಸ್ ಶರ್ಮಿಳಾ ಜನವರಿ 4ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆಂಧ್ರ ಪ್ರದೇಶದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಗಿಡುಗು ರುದ್ರ ರಾಜು, ಕಾಂಗ್ರೆಸ್‌ನ ಸಿದ್ದಾಂತ ಹಾಗೂ ನಾಯಕತ್ವವನ್ನು ಗೌರವಿಸಿ ಪಕ್ಷಕ್ಕೆ ಬರುವ ಯಾರಿಗಾದರೂ ಸ್ವಾಗತ. ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ವೈ ಎಸ್ ಶರ್ಮಿಳಾ ಅವರಿಗೂ ಆಂಧ್ರ ಕಾಂಗ್ರೆಸ್ ಪರವಾಗಿ ಆತ್ಮೀಯ ಸ್ವಾಗತ ಎಂದು ಶುಭ ಕೋರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬರುವ ಆಂಧ್ರ ವಿದಾನಸಭೆ ಹಾಗೂ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ವೈಎಸ್‌ ಶರ್ಮಿಳಾ ಗಮನಾರ್ಹ ಪಾತ್ರ ವಹಿಸುವ ಕಾರಣದಿಂದ ಆಯಕಟ್ಟಿನ ಹುದ್ದೆ ನೀಡುವ ಕುರಿತು ಕಾಂಗ್ರೆಸ್‌ ಹೈಕಮಾಂಡ್ ಯೋಚಿಸಿದೆ ಎನ್ನಲಾಗಿದೆ. ಅಲ್ಲದೆ ಆಂಧ್ರದಲ್ಲಿ ಪ್ರಬಲವಾಗಿರುವ ವೈಎಸ್‌ಆರ್‌ ಕಾಂಗ್ರೆಸ್‌, ಟಿಡಿಪಿಗೆ ಪೈಪೋಟಿ ನೀಡಲು ಹಾಗೂ ಅಲ್ಲಿನ ಕಾಂಗ್ರೆಸ್‌ಅನ್ನು ಬಲಪಡಿಸಲು ಶರ್ಮಿಳಾ ಸೇರ್ಪಡೆ ಬಹುಮುಖ್ಯ ಪಾತ್ರ ವಹಿಸಲಿದೆ.

ವೈಎಸ್‌ಆರ್‌ ತೆಲಂಗಾಣ ಪಕ್ಷದ ಅಧ್ಯಕ್ಷೆಯಾಗಿದ್ದ ಶರ್ಮಿಳಾ ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಅಲ್ಲದೆ 9 ವರ್ಷಗಳ ಆಡಳಿತದ ಅವಧಿಯಲ್ಲಿ ಕೆಸಿಆರ್‌ ಪಕ್ಷ ರಾಜ್ಯದ ಜನತೆಯ ಭರವಸೆ ಈಡೇರಿಸಲು ವಿಫಲವಾಗಿದೆ ಎಂದು ಟೀಕಿಸಿದ್ದರು.

1974ರಲ್ಲಿ ಜನಿಸಿದ್ದ ವೈಎಸ್‌ ಶರ್ಮಿಳಾ ಅವರು ಸಹೋದರ ವೈಎಸ್‌ಆರ್‌ ಜಗನ್‌ ಮೋಹನ್ ರೆಡ್ಡಿ ಅವರೊಂದಿಗೆ ರಾಜಕೀಯ ಸಂಬಂಧ ಕಡಿದುಕೊಂಡು ತೆಲಂಗಾಣದಲ್ಲಿ ತಮ್ಮದೇ ಪಕ್ಷ ಸ್ಥಾಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...