ಆಂಧ್ರಪ್ರದೇಶ | ರೈಲ್ವೆ ಅಪಘಾತ ಪ್ರಕರಣ; ರೈಲು ಚಾಲನೆ ವೇಳೆ ಕ್ರಿಕೆಟ್‌ ನೋಡುತ್ತಿದ್ದ ರೈಲು ಚಾಲಕರು

Date:

ಸಿಗ್ನಲ್ ತಪ್ಪಿದ ರೈಲು ಮತ್ತೊಂದು ರೈಲಿಗೆ ಢಿಕ್ಕಿ ಹೊಡೆದು 14 ಪ್ರಯಾಣಿಕರು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ರೈಲ್ವೆ ಸಚಿವರು ಮಾಹಿತಿ ನೀಡಿದ್ದು, “ರೈಲಿನ ಲೋಕೋ ಪೈಲೆಟ್ (ರೈಲು ಚಾಲಕರು) ಕ್ರಿಕೆಟ್‌ ನೋಡುತ್ತಿದ್ದರು. ಹೀಗಾಗಿಯೇ ಘಟನೆ ನಡೆದಿದೆ” ಎಂದು ಹೇಳಿದ್ದಾರೆ.

“ಅಕ್ಟೋಬರ್‌ನಲ್ಲಿ ಆಂಧ್ರಪ್ರದೇಶದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಆತಿಥೇಯ ಭಾರತ ಮತ್ತು ಇಂಗ್ಲೆಂಡ್‌ ನಡುವೆ ನಡೆದ ಪಂದ್ಯವನ್ನು ಲೋಕೋ ಪೈಲಟ್ ಮತ್ತು ಸಹ ಲೋಕೋ ಪೈಲಟ್‌ ವೀಕ್ಷಿಸಿತ್ತಾ, ಕ್ರಿಕೆಟ್‌ ಎಡೆಗೆ ವಿಚಲಿತರಾದ ಕಾರಣ, ಘಟನೆ ನಡೆದಿದೆ” ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ ಎಂದು ‘ಪಿಟಿಐ’ ವರದಿ ಮಾಡಿದೆ.

“ಲೋಕೋ ಪೈಲಟ್‌ಗಳು ಮತ್ತು ಸಹಾಯಕ ಪೈಲಟ್‌ಗಳು ರೈಲನ್ನು ಓಡಿಸುವಲ್ಲಿ ಸಂಪೂರ್ಣವಾಗಿ ಗಮನಹರಿಸುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ಖಾತ್ರಿ ಪಡೆಸಿಕೊಳ್ಳವು ವ್ಯವಸ್ಥೆಯನ್ನು ರೂಪಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ತಿಂಗಳು ಚಾಲಕ ಇಲ್ಲದೆ ಸರಕು ರೈಲು 70 ಕಿಲೋಮೀಟರ್ (40 ಮೈಲುಗಳು) ಪ್ರಯಾಣಿಸಿದ ನಂತರ ಅಧಿಕಾರಿಗಳು ಸ್ಟೇಷನ್ ಮಾಸ್ಟರ್ ಮತ್ತು ಇತರ ಮೂವರು ಉದ್ಯೋಗಿಗಳನ್ನು ವಜಾ ಮಾಡಿದ್ದಾರೆ. ಆ ಘಟನೆಯಿಂದಾಗಿ ಸುಮಾರು 50 ರೈಲುಗಳು ಎರಡು ಗಂಟೆಗಳ ಕಾಲ ನಾನಾ ನಿಲ್ದಾಣಗಳಲ್ಲಿ ನಿಂತು, ಪ್ರಮಾಣದಲ್ಲಿ ಅಸ್ಥವ್ಯಸ್ಥವಾಗಿತ್ತು. ಹೀಗಾಗಿ, ಅವರನ್ನು ವಜಾಗೊಳಿಸಲಾಗಿದೆ.

ವಿಶ್ವದ ಅತಿದೊಡ್ಡ ರೈಲು ಜಾಲಗಳಲ್ಲಿ ಭಾರತವೂ ಒಂದಾಗಿದೆ. ಆದರೆ, ಇತ್ತೀಚಿನ, ವರ್ಷಗಳಲ್ಲಿ ಹಲವಾರು ರೈಲ್ವೇ ಅನಾಹುತಗಳು ನಡೆದಿವೆ. 1981ರಲ್ಲಿ ಬಿಹಾರದಲ್ಲಿ ಸೇತುವೆಯನ್ನು ದಾಟುವಾಗ ರೈಲು ಹಳಿತಪ್ಪಿದ್ದರಿಂದ ಅಂದಾಜು 800 ಜನರು ಸಾವನ್ನಪ್ಪಿದರು. 2023ರ ಜೂನ್‌ನಲ್ಲಿ ಒಡಿಶಾ ರಾಜ್ಯದಲ್ಲಿ ಮೂರು ರೈಲುಗಳ ನಡುವೆ ಢಿಕ್ಕಿಯಾಗಿ ಸುಮಾರು 300 ಜನರು ಸಾವನ್ನಪ್ಪಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...