ಆಂಧ್ರಪ್ರದೇಶ | ಚಂದ್ರಬಾಬು ನಾಯ್ಡು ಚಿತ್ತೂರು ಭೇಟಿಯ ವೇಳೆ ಗಲಭೆ; ಪೊಲೀಸರು ಸೇರಿ 20 ಮಂದಿ ಆಸ್ಪತ್ರೆ ಪಾಲು

Date:

ಆಂಧ್ರಪ್ರದೇಶದಲ್ಲಿ ಆಡಳಿತಾರೂಢ ವೈಎಸ್‌ಆರ್‌ಸಿಪಿ ಹಾಗೂ ತೆಲುಗು ದೇಶಂ ಪಕ್ಷಗಳ ನಡುವೆ ಘರ್ಷಣೆಯೇರ್ಪಟ್ಟಿದ್ದು, ಕಾರ್ಯಕರ್ತರು ಬೀದಿಗಿಳಿದು ಹೊಡೆದಾಡಿಕೊಂಡಿರುವ ಘಟನೆ ವರದಿಯಾಗಿದೆ.

ನೀರಾವರಿ ಯೋಜನೆಗಳ ಪರಿವೀಕ್ಷಣೆಗೆಂದು ಟಿಡಿಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅನ್ನಮಯ್ಯ ಹಾಗೂ ಚಿತ್ತೂರು ಜಿಲ್ಲೆಗಳ ಕೆಲವು ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿದ್ದರು. ಈ ವೇಳೆ ಟಿಡಿಪಿ ಕಾರ್ಯಕರ್ತರು ಹಾಗೂ ವೈಎಸ್‌ಆರ್‌ಸಿಪಿ ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗಿದೆ. ಕುಪ್ಪಂ, ಪುಂಗನೂರು, ಪಲಮನೇರು ಪಟ್ಟಣಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಘರ್ಷಣೆಗಿಳಿದಿದ್ದಾರೆ. ಚಂದ್ರಬಾಬು ನಾಯ್ಡು ಅವರ ಪ್ರತಿಕೃತಿ ದಹಿಸಿದ್ದಾರೆ. ಅದಕ್ಕೆ ವಿರುದ್ಧವಾಗಿ ಟಿಡಿಪಿ ಕಾರ್ಯಕರ್ತರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ಆರಂಭವಾಗಿದೆ. ಗಲಭೆ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಚ್ ಮಾಡಬೇಕಾಗಿ ಬಂತು ಎನ್ನಲಾಗಿದೆ. ಎನ್‌ಎಸ್‌ಜಿ ಕಮ್ಯಾಂಡೋಗಳು ಹರಸಾಹಸ ಮಾಡಿ ಚಂದ್ರಬಾಬು ನಾಯ್ಡು ಅವರನ್ನು ಗುಂಪಿನಿಂದ ಪಾರು ಮಾಡಿ ಕರೆದೊಯ್ದರು ಎಂದು ವರದಿಯಾಗಿದೆ.

ಅಂಗಳ್ಳು ಎಂಬಲ್ಲಿ ಗಲಭೆ ತಹಬಂಧಿಗೆ ಬರುತ್ತಿದ್ದಂತೆ ಪುಂಗನೂರಿನಲ್ಲಿ ಗಲಭೆ ಆರಂಭವಾಗಿದೆ. ಉದ್ರಿಕ್ತರ ಗುಂಪು ಎರಡು ಪೊಲೀಸ್ ವಾಹನಗಳು ಸೇರಿದಂತೆ ಹಲವು ಖಾಸಗಿ ವಾಹನಗಳನ್ನು ಜಖಂಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಸಂಬಂಧ ಚಂದ್ರಬಾಬು ನಾಯ್ಡು ಹಾಗೂ ಸಚಿವ ಪೆದ್ದಿರೆಡ್ಡಿ ರಾಮಚಂದ್ರ ರೆಡ್ಡಿ ನಡುವೆ ವಾಕ್ಸಮರ ಶುರುವಾಗಿದೆ. ಗಲಭೆಗೆ ನಾಯ್ಡು ಅವರೇ ಕಾರಣ ಎಂದಿರುವ ಸಚಿವ ರಾಮಚಂದ್ರ ರೆಡ್ಡಿ, ‘ಮಾಜಿ ಮುಖ್ಯಮಂತ್ರಿಗಳು ತಮ್ಮ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಿದ್ದಾರೆ. ಪೊಲೀಸರ ಮತ್ತು ವೈಎಸ್‌ಆರ್‌ಸಿಪಿ ಕಾರ್ಯಕರ್ತರ ಮೇಲಿನ ದಾಳಿಗೆ ನಾಯ್ಡು ಅವರೇ ಕಾರಣ’ ಎಂದು ಕಿಡಿ ಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ: ಇನ್ನೊಮ್ಮೆ ಹೀಗಾದ್ರೆ, ವಾರ್ಡನ್‌ಗೆ ಚೆನ್ನಾಗಿ ಬಾರಿಸಿ : ಚಿತ್ರದುರ್ಗ ಶಾಸಕರ ಪ್ರಚೋದನೆ; ವಿಡಿಯೋ ವೈರಲ್

ಅದಕ್ಕೆ ಪ್ರತಿಕ್ರಿಯೆ ನೀಡಿರುವ ಚಂದ್ರಬಾಬು ನಾಯ್ಡು, ‘ಇಂಥ ದಾಳಿಗಳನ್ನು ಸಂಘಟಿಸುವ ಮೂಲಕ, ಗಲಭೆಗಳನ್ನು ಸೃಷ್ಟಿಸುವ ಮೂಲಕ ತನ್ನನ್ನು ವೈಎಸ್‌ಆರ್‌ಸಿಪಿ ತಡೆಯಲಾಗದು’ ಎಂದಿದ್ದಾರೆ.            

ಗಲಭೆಯಲ್ಲಿ ಪೊಲೀಸರು ಸೇರಿದಂತೆ ಸುಮಾರು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.      

ಸದ್ಯ, ಚಿತ್ತೂರು ಜಿಲ್ಲೆಯಲ್ಲಿ ಉದ್ವಿಗ್ನತೆ ನೆಲೆಸಿದೆ. ಕುಪ್ಪಂ, ಪುಂಗನೂರು, ಪಲಮನೇರು ಪಟ್ಟಣಗಳಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...