ಎಸ್‌ಬಿಐಗೆ ವಂಚನೆ ಆರೋಪ; ಅನಿಲ್ ಅಂಬಾನಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇ.ಡಿ ದಾಳಿ

Date:

ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಕಾಮ್) ಮತ್ತು ಅದರ ಪ್ರವರ್ತಕ ಅನಿಲ್ ಅಂಬಾನಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ‘ವಂಚಕ’ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ, ಜಾರಿ ನಿರ್ದೇಶನಾಲಯ (ಇ.ಡಿ) ಮುಂಬೈನಲ್ಲಿ ಅಂಬಾನಿಯ ಕಂಪನಿಗಳಿಗೆ ಸಂಬಂಧಿತ ಸ್ಥಳಗಳಲ್ಲಿ ಇಂದು ಶೋಧ ಕಾರ್ಯಾಚರಣೆ ನಡೆಸಿದೆ.

ಅಂಬಾನಿಯ ನಿವಾಸವನ್ನು ಶೋಧದಿಂದ ಹೊರಗಿಟ್ಟರೂ, ದೆಹಲಿ ಮತ್ತು ಮುಂಬೈನ ಇಡಿ ತಂಡಗಳು ಗುಂಪಿನ ಕಚೇರಿಗಳಿಗೆ ಭೇಟಿ ನೀಡಿವೆ. ರಾಷ್ಟ್ರೀಯ ವಸತಿ ಬ್ಯಾಂಕ್, ಸೆಬಿ, ಎನ್‌ಎಫ್‌ಆರ್‌ಎ, ಬ್ಯಾಂಕ್ ಆಫ್ ಬರೋಡಾ ಮತ್ತು ಸಿಬಿಐನ ಎರಡು ಎಫ್‌ಐಆರ್‌ಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡು ವರ್ಗಾಯಿಸಲಾಗಿದೆ ಎಂಬ ಪುರಾವೆಗಳನ್ನು ಇಡಿ ಪತ್ತೆಹಚ್ಚಿದೆ. ಬ್ಯಾಂಕುಗಳು, ಷೇರುದಾರರು ಮತ್ತು ಹೂಡಿಕೆದಾರರು ಮೋಸಗೊಂಡಿರಬಹುದು ಎಂದು ತನಿಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋಶಾ ಕಂಪನಿಯ ಮತ್ತೊಂದು ನಿಗೂಢ ನಾಟಕ!

ಜೂನ್ 13, 2025 ರಂದು ಆರ್‌ಬಿಐ ಮಾರ್ಗಸೂಚಿಗಳ ಅಡಿಯಲ್ಲಿ ಎಸ್‌ಬಿಐ ಆರ್‌ಕಾಮ್ ಮತ್ತು ಅಂಬಾನಿಯನ್ನು ‘ವಂಚಕ’ ಎಂದು ಘೋಷಿಸಿತು. ಜೂನ್ 24 ರಂದು ಇದನ್ನು ಆರ್‌ಬಿಐಗೆ ವರದಿ ಮಾಡಲಾಗಿದ್ದು, ಸಿಬಿಐಗೆ ದೂರು ಸಲ್ಲಿಸಲು ಎಸ್‌ಬಿಐ ಸಿದ್ಧತೆ ನಡೆಸುತ್ತಿದೆ.

ಆರ್‌ಕಾಮ್‌ಗೆ ಎಸ್‌ಬಿಐನ 2,227.64 ಕೋಟಿ ರೂ. ಮೂಲ ಬಾಕಿ ಮತ್ತು 786.52 ಕೋಟಿ ರೂ. ಬ್ಯಾಂಕ್ ಗ್ಯಾರಂಟಿಗಳ ಸಾಲ ಇದೆ. ಆರ್‌ಕಾಮ್ ದಿವಾಳಿತನ ಪ್ರಕ್ರಿಯೆಯಲ್ಲಿದ್ದು, ಅನಿಲ್‌ ಅಂಬಾನಿಯ ವಿರುದ್ಧ ವೈಯಕ್ತಿಕ ದಿವಾಳಿತನ ಪ್ರಕ್ರಿಯೆಯೂ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...