ತಮಿಳುನಾಡು | ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕೆ ಅಣ್ಣಾಮಲೈ

Date:

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಕೆ. ಅಣ್ಣಾಮಲೈ ಘೋಷಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯಲ್ಲಿ ಪಕ್ಷದ ನಾಯಕನ ಹುದ್ದೆಗೆ ಸ್ಪರ್ಧಿಸುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧಿಯಲ್ಲ. ನಾನು ಪಕ್ಷ ಉಜ್ವಲ ಭವಿಷ್ಯ ಹೊಂದುವುದಾಗಿ ಬಯಸುತ್ತೇನೆ. ಹಲವು ಮಂದಿ ಪಕ್ಷದ ಅಭಿವೃದ್ಧಿಗೆ ಪ್ರಾಣ ನೀಡಿದ್ದಾರೆ. ನಾನು ಪಕ್ಷಕ್ಕೆ ಸದಾ ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟ ರಚನೆಯಾಗುವ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ, ಕೆ. ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯಿತ್ತು. ಚುನಾವಣೆ ಸಮೀಪಿಸುತ್ತಿರುವ ರಾಜ್ಯದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಜಾತಿ ಸಮೀಕರಣಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಗೆ ಒಂದೇ ಗೌಂಡರ್ ಸಮುದಾಯದ ಎರಡೂ ಮಿತ್ರ ಪಾಲುದಾರರ (ಬಿಜೆಪಿ-ಎಐಎಡಿಎಂಕೆ) ಮುಖಗಳು ಬೇಕಾಗಿಲ್ಲ. ಕೆ ಅಣ್ಣಾಮಲೈ ಮತ್ತು ಕೆ ಪಳನಿಸ್ವಾಮಿ ಇಬ್ಬರೂ ಗೌಂಡರ್‌ ಸಮುದಾಯಕ್ಕೆ ಸೇರಿದವರು. ಇಬ್ಬರೂ ಗೌಂಡರ್‌ಗಳು ಪ್ರಾಬಲ್ಯ ಹೊಂದಿರುವ ತಮಿಳುನಾಡಿನ ಒಂದೇ ಪಶ್ಚಿಮ ಕೊಂಗು ಪ್ರದೇಶದಿಂದ ಬಂದವರು. ಇಬ್ಬರು ಒಂದೇ ಸಮುದಾಯದವರು ಅಧ್ಯಕ್ಷರಾಗಿ ಮುಂದುವರೆದರೆ ಇತರೆ ಹಿಂದುಳಿದ ಸಮುದಾಯಗಳನ್ನು ಕಡೆಗಣಿಸಿದಂತಾಗಿ ಮತಗಳು ಕೈತಪ್ಪುತ್ತವೆ ಎಂಬುದು ಬಿಜೆಪಿ ನಾಯಕರ ಆಲೋಚನೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕೋದ್ಯಮದ ಪಾವಿತ್ರ್ಯವನ್ನು ಪಾತಾಳಕ್ಕಿಳಿಸಿದ ‘ಪತ್ರಕರ್ತರು’!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರಿಗೆ ಬಿಜೆಪಿ ತನ್ನ ನಿರ್ಧಾರವನ್ನು ತಿಳಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಮಿತ್‌ ಶಾ ಅವರು, ಪಳನಿಸ್ವಾಮಿ ಅವರನ್ನು ಭೇಟಿಯಾದ ಸ್ವಲ್ಪ ಸಮಯದ ನಂತರ ಈ ಸಭೆ ಕೂಡ ನಡೆದಿದೆ.

ಅಣ್ಣಾಮಲೈ ಅವರ ಆಕ್ರಮಣಕಾರಿ ಮನೋಭಾವದ ಹೊರತಾಗಿಯೂ ತಮಿಳುನಾಡಿನಲ್ಲಿ ಬಿಜೆಪಿ ಜನಮನ್ನಣೆ ಗಳಿಸಲು ಸಾಧ್ಯವಾಗಿಲ್ಲ. ಹಿಂದಿನ ಯಾವುದೇ ಚುನಾವಣೆಗಳಲ್ಲೂ ಯಾವುದೇ ಸಾಧನೆ ಮಾಡಲಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...