ಛತ್ತೀಸ್‌ಘಡ | ನಕಲಿ ಎಸ್‌ಸಿ, ಎಸ್‌ಟಿ ಪ್ರಮಾಣ ಪತ್ರಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬೆತ್ತಲೆ ಪ್ರತಿಭಟನೆ  

Date:

ನಕಲಿ ಜಾತಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಅನರ್ಹರು ಮೀಸಲಾತಿ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಸೇರಿದ ಯುವಕರು ಛತ್ತೀಸ್‌ಘಡ ವಿಧಾನಸಭೆಯ ಮುಂಗಾರು ಅಧಿವೇಶನದ ಮೊದಲ ದಿನವಾದ ಮಂಗಳವಾರ ವಿಧಾನಸೌಧದ ಬಳಿ ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.

ಸುಮಾರು 20 ಯುವಕರು ಭಿತ್ತಿಪತ್ರಗಳನ್ನು ಹಿಡಿದುಕೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ರಾಜ್ಯ ವಿಧಾನಸಭೆ ಭವನದ ಕಡೆಗೆ ಬೆತ್ತಲೆಯಾಗಿ ಸಾಗಿದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ಮುಂದೆ ಹೋಗದಂತೆ ಬೆನ್ನಟ್ಟಿ ತಡೆದು ತಮ್ಮ ವಶಕ್ಕೆ ಪಡೆದರು.

ಛತ್ತೀಸ್‌ಘಡ ವಿಧಾನಸಭೆಯ ಮುಂದೆ ನಡೆದ ನಗ್ನ ಪ್ರದರ್ಶನ ನಡೆಸಿದ ಪ್ರತಿಭಟನಾಕಾರರು, ನಕಲಿ ಜಾತಿ ಪ್ರಮಾಣಪತ್ರ ಹೊಂದಿರುವ ವ್ಯಕ್ತಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ರಚನೆಯಾದಾಗಿನಿಂದ ಸರ್ಕಾರಿ ಉದ್ಯೋಗಗಳು ಮತ್ತು ರಾಜಕೀಯ ಸ್ಥಾನಗಳಲ್ಲಿ ಎಸ್‌ಟಿ ಎಸ್‌ಟಿಗೆ ಮೀಸಲಾದ ಕೋಟಾಗಳನ್ನು ದುರ್ಬಳಕೆ ಮಾಡಿಕೊಂಡಿರುವ ಮೀಸಲಾತಿ ವರ್ಗಗಳಿಗೆ ಸೇರದ ವ್ಯಕ್ತಿಗಳ ನಿದರ್ಶನಗಳನ್ನು ಹಲವಾರು ಸರ್ಕಾರಿ ಇಲಾಖೆಗಳು ವರದಿ ಮಾಡಿವೆ. ಈ ಬಗ್ಗೆ ಸ್ಪಂದಿಸಿದ ರಾಜ್ಯ ಸರ್ಕಾರವು ಉನ್ನತ ಮಟ್ಟದ ಜಾತಿ ಪರಿಶೀಲನಾ ಸಮಿತಿ ರಚಿಸಿತ್ತು.

ಈ ಸುದ್ದಿ ಓದಿದ್ದೀರಾ? ಕನ್ನಡ ಚಿತ್ರರಂಗದ ಸದ್ಯದ ದೊಡ್ಡ ಸಮಸ್ಯೆ ಯಾವುದು? ರಾಜ್ ಬಿ ಶೆಟ್ಟಿ ಹೇಳಿದ್ದು ನಿಜವೇ?

ಸಮಿತಿ ತನಿಖೆ ಕೈಗೊಂಡು 2000 ರಿಂದ 2020 ರವರೆಗಿನ ಅವಧಿಯ 758 ಪ್ರಕರಣಗಳಲ್ಲಿ 267 ಜಾತಿ ಪ್ರಮಾಣ ಪತ್ರಗಳ ವಂಚನೆ ಪ್ರಕರಣಗಳನ್ನು ದಾಖಲಿಸಿದೆ. ಇದರ ಪರಿಣಾಮವಾಗಿ, ನಕಲಿ ಪ್ರಮಾಣ ಪತ್ರಗಳನ್ನು ಹೊಂದಿರುವ ಅಧಿಕಾರಿಗಳು ಮತ್ತು ನೌಕರರನ್ನು ನಿರ್ಣಾಯಕ ಸ್ಥಾನಗಳಿಂದ ತಕ್ಷಣವೇ ತೆಗೆದುಹಾಕಲು ಸರ್ಕಾರವು ಆದೇಶವನ್ನು ಹೊರಡಿಸಿತು. ಈ ಆದೇಶಗಳ ಅಸಮರ್ಪಕ ಅನುಷ್ಠಾನದ ಬಗ್ಗೆ ಎಸ್‌ಟಿ ಎಸ್‌ಟಿ ಸಮುದಾಯದ ಸಂಘರ್ಷ ಸಮಿತಿಯ ವಕ್ತಾರ ವಿನಯ್‌ ಕೌಶಲ್ ನಿರಾಶೆ ವ್ಯಕ್ತಪಡಿಸಿದ್ದಾರೆ.

ನಕಲಿ ಪ್ರಮಾಣ ಪತ್ರ ಪಡೆದುಕೊಂಡ ಕೆಲವರು ನಿವೃತ್ತರಾದರು ಮತ್ತು ಒಂದಷ್ಟು ಜನ ಸಮಿತಿಯ ವರದಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರು. ಹೆಚ್ಚುವರಿಯಾಗಿ, ಸರ್ಕಾರದ ನಿರ್ದೇಶನದ ಹೊರತಾಗಿಯೂ ಅನೇಕ ನಕಲಿ ಪ್ರಮಾಣ ಪತ್ರ ಹೊಂದಿರುವವರು ಬಡ್ತಿಗಳನ್ನು ಪಡೆಯಲು ಮತ್ತು ಮಹತ್ವದ ಸ್ಥಾನಗಳನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿನಯ್‌ ಕೌಶಲ್ ಬೇಸರ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...