ಚುನಾವಣಾ ಬಾಂಡ್ ಹಗರಣ ದಿಕ್ಕು ತಪ್ಪಿಸಲು ಕೇಜ್ರಿವಾಲ್ ಬಂಧನ: ಪಿಣರಾಯಿ ವಿಜಯನ್

Date:

ಚುನಾವಣಾ ಬಾಂಡ್ ಹಗರಣದಿಂದ ಜನರ ಗಮನವನ್ನು ದಿಕ್ಕು ತಪ್ಪಿಸಲು ಅರವಿಂದ್ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಕಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ, ಬಿಜೆಪಿ, ಸಂಘ ಪರಿವಾರಕ್ಕೆ ಇದು ದೊಡ್ಡ ಸಮಸ್ಯೆಯಾಗುವುದಾಗಿ ತಿಳಿದಿದೆ. ಹಾಗಾಗಿ ಜನರ ಗಮನವನ್ನು ಬೇರೆಡೆ ಸೆಳೆಯಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ದೇಶ ಎತ್ತ ಸಾಗುತ್ತದೆ ಎಂಬುದರ ಸುಳಿವು ಈ ಹಗರಣದಾಗಿದೆ. ನಾವು ಏನು ಬೇಕಾದರೂ ಮಾಡುತ್ತೇವೆ ಯಾರ ಬಗ್ಗೆಯೂ ತಲೆಕೆಡಿಸಿಕೊಳ್ಳುವುದಿಲ್ಲ ಎಂಬ ಮನಸ್ಥಿತಿಯುಳ್ಳ ಸಂಘ ಪರಿವಾರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ ಎಂದು ವಿಜಯನ್ ಹೇಳಿದರು.

“ಈ ಗಂಭಿರ ಪರಿಸ್ಥಿತಿಯ ಬಗ್ಗೆ ನಮ್ಮ ದೇಶದ ಜನರಿಗೆ ತಿಳಿಸಬೇಕಾಗಿದೆ. ಮೊದಲನೆಯದಾಗಿ ಸಿಪಿಐಎಂ ಪಕ್ಷವು ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಲು ಎಂದಿಗೂ ತಯಾರಿರಲಿಲ್ಲ. ಇದು ಈಗ ದೇಶ ಕಂಡ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿದೆ” ಎಂದು ಪಿಣರಾಯಿ ವಿಜಯನ್‌ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರವಿಂದ್ ಕೇಜ್ರಿವಾಲ್‌ ಬಂಧನದ ಬಗ್ಗೆ ಮಾತನಾಡಿದ ವಿಜಯನ್,ಸಂಘ ಪರಿವಾರದವರು ತಾವು ಕಾನೂನುಗಿಂತ ದೊಡ್ಡವರು ಎಂಬ ಸಂದೇಶವನ್ನು ಎದುರುನೋಡುತ್ತಿದ್ದು, ಅಲ್ಲದೆ ತಮ್ಮ ಕಾರ್ಯಸೂಚಿಯನ್ನು ತಿಳಿಸಲು ತಮ್ಮ ಕಡೆಗೆ ಬಂದ ಕಲ್ಲನ್ನು ವಾಪಸ್‌ ತಿರುಗಿಸುವ ಆದೇಶವನ್ನು ಎಲ್ಲರಿಗೂ ಸಾರುತ್ತಿದ್ದಾರೆ ಎಂದು ಹೇಳಿದರು.

2019ರ ಸಿಎಎ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಕೇಂದ್ರ ಸಚಿವ ಅನುರಾಗ್‌ ಠಾಕೂರ್ ಪ್ರಚೋದನಕಾರಿ ಭಾಷಣ ಮಾಡಿದ ತರುವಾಯು ದೆಹಲಿಯಲ್ಲಿ ಗಲಭೆಯುಂಟಾಯಿತು. ಸಿಪಿಐಎಂ ಅನುರಾಗ್‌ ಠಾಕೂರ್‌ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಪಿಣರಾಯಿ ವಿಜಯನ್‌ ತಮ್ಮ ಭಾಷಣದಲ್ಲಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣೆ – ಐಪಿಎಲ್‌ ಕ್ರಿಕೆಟ್‌ನಲ್ಲಿ ಅಪ್ಪ-ಮಗನ ಆಟ

ಸಿಎಎ ವಿರೋಧಿ ಗಲಭೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆಯೂ ವಿಜಯನ್‌ ಪ್ರಶ್ನಿಸಿದರು. ” ಪ್ರತಿಭಟನೆ ನಡೆಯುತ್ತಿರುವ ಸಂದರ್ಭ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶದಲ್ಲಿದ್ದರು. ದೆಹಲಿ ಪೊಲೀಸರಿಂದ ಎಡಪಂಥೀಯ ನಾಯಕರು ಬಂಧನಕ್ಕೊಳಗಾದರು. ಆ ಸಂದರ್ಭದಲ್ಲಿ ಕೇರಳದ ಸಂಸದ ಎ ಎಂ ಆರೀಫ್ ಮಾತ್ರ ಸಿಎಎ ವಿರುದ್ಧ ಧನಿಯತ್ತಿದರು. ಆದರೀಗ ಕಾಂಗ್ರೆಸ್ ನಾಯಕರು ಸಿಎಎ ಕಾಯ್ದೆಯನ್ನು ತಾಂತ್ರಿಕವಾಗಿ ವಿರೋಧಿಸುವುದಾಗಿ ಹೇಳುತ್ತಿದೆ ಎಂದರು.

ವಿವಾದಾತ್ಮಕ ಸಿಎಎ ಕಾಯ್ದೆ ಡಿಸೆಂಬರ್‌ 2019ರಲ್ಲಿ ಅಂಗೀಕಾರವಾಗಿದ್ದು, ಹಲವು ವಿರೋಧ ಪಕ್ಷಗಳು ಇದು ತಾರತಮ್ಯ ಕಾರ್ಯಸೂಚಿ ಹೊಂದಿದೆ ಎಂದು ವಿರೋಧಿಸುತ್ತಿದ್ದಾರೆ.

ಸಿಎಎಯು 2014ರ ಮುಂಚೆ ಪಾಕ್‌, ಬಾಂಗ್ಲಾದೇಶ, ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮೇತರ ವಲಸಿಗರಿಗೆ ಯಾವುದೇ ದಾಖಲೆಯಿಲ್ಲದೆ ಭಾರತೀಯ ಪೌರತ್ವ ಒದಗಿಸುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...