‘ನನ್ನ ಪತಿಯ ಹತ್ಯೆಗೆ ಸಂಚು’: ದೆಹಲಿ ಸಚಿವರ ನಂತರ ಕೇಜ್ರಿವಾಲ್ ಪತ್ನಿ ಆರೋಪ

Date:

ಎಎಪಿ ಸರ್ಕಾರದ ದೆಹಲಿ ಸಚಿವರು ಹಾಗೂ ನಾಯಕರ ನಂತರ ಈಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ನಿ ಕೂಡ ನನ್ನ ಪತಿಯ ಹತ್ಯೆಗೆ ಸಂಚು ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇಂಡಿಯಾ ಒಕ್ಕೂಟದ ವತಿಯಿಂದ ರಾಂಚಿಯಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡಿದ ಅರವಿಂದ್‌ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್, ಕೇಜ್ರಿವಾಲ್ ಅವರ ಊಟದ ಬಳಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪ್ರತಿ ತುತ್ತು ಸೇವಿಸುವಾಗಲು ಮೇಲ್ವಿಚಾರಣೆಗೊಳಿಸಲಾಗುತ್ತಿದೆ. ಇದು ಅತ್ಯಂತ ನಾಚಿಕೆಗೇಡು. ಇವರು ಸಕ್ಕರೆ ರೋಗಿಯಾಗಿದ್ದು, ಕಳೆದ 12 ವರ್ಷಗಳಿಂದ ಇನ್ಸುಲಿನ್‌ ತೆಗೆದುಕೊಳ್ಳುತ್ತಿದ್ದಾರೆ. ಆದರೆ ಜೈಲಿನಲ್ಲಿ ಇನ್ಸುಲಿನ್ ನೀಡಲು ನಿರಾಕರಿಸಲಾಗುತ್ತಿದೆ. ಅವರು ದೆಹಲಿ ಮುಖ್ಯಮಂತ್ರಿಯನ್ನು ಕೊಲ್ಲಲು ಬಯಸಿದ್ದಾರೆ” ಎಂದರು.

ಕೇಂದ್ರದ ಆಡಳಿತವು ಸರ್ವಾಧಿಕಾರದಿಂದ ಕೂಡಿದ್ದು, ಯಾವುದೇ ಆರೋಪ ಸಾಬೀತಾಗದೆ ದೆಹಲಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಅವರನ್ನು ಜೈಲಿನಲ್ಲಿಡಲಾಗಿದೆ. ನನ್ನ ಪತಿ ಯಾವು ತಪ್ಪು ಮಾಡಿದ್ದಾರೆ. ಒಳ್ಳೆಯ ಶಿಕ್ಷಣ ಹಾಗೂ ಆರೋಗ್ಯ ಸೇವೆಗಳನ್ನು ಒದಗಿಸಲಿಲ್ಲವೇ? ಎಂದು ಸುನೀತಾ ಕೇಜ್ರಿವಾಲ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಅರವಿಂದ್‌ ಕೇಜ್ರಿವಾಲ್‌ ಅವರು ತಮ್ಮ ಜೀವನವನ್ನು ದೆಹಲಿ ಜನರ ಸೇವೆಗೆ ಮುಡುಪಾಗಿಟ್ಟಿದ್ದಾರೆ. ಇವರು ಐಐಟಿ ಪದವೀಧರವಾಗಿದ್ದು, ಬೇಕಿದ್ದರೆ ವಿದೇಶಕ್ಕೆ ತೆರಳಬಹುದಿತ್ತು, ಆದರೆ ದೇಶಭಕ್ತಿಗೆ ಆದ್ಯತೆ ನೀಡಿದರು. ಐಆರ್‌ಎಸ್‌ ಹುದ್ದೆ ತ್ಯಜಿಸಿ ತಮ್ಮ ಸೇವೆಯನ್ನು ಸಾರ್ವಜನಿಕ ಸೇವೆಗೆ ಮುಡುಪಾಗಿಸಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಪತ್ನಿ ತಿಳಿಸಿದ್ದಾರೆ.

ಅಸ್ತಮ ರೋಗಿಯಾಗಿರುವ ಅವರು ಕಳೆದ 12 ವರ್ಷದಿಂದ ನಿತ್ಯ 50 ಯುನಿಟ್‌ ಇನ್ಸುಲಿನ್ ತೆಗೆದುಕೊಳ್ಳಬೇಕಿದೆ. ಆದರೆ ಜೈಲಿನಲ್ಲಿ ಇನ್ಸುಲಿನ್ ನೀಡುತ್ತಿಲ್ಲ. ಅವರು ದೆಹಲಿ ಮುಖ್ಯಮಂತ್ರಿಯನ್ನು ಕೊಲ್ಲಲು ಬಯಸಿದ್ದಾರೆ. ಅವರು ಕೇಜ್ರಿವಾಲ್ ಅವರ ಚಿಂತನೆಗಳನ್ನು ಅರ್ಥ ಮಾಡಿಕೊಂಡಿಲ್ಲ. ಅವರೊಬ್ಬ ಧೈರ್ಯಶಾಲಿ. ಅವರೊಬ್ಬ ಸಿಂಹ. ಜೈಲಿನಲ್ಲಿದ್ದರೂ ಅವರಿಗೆ ಭಾರತ ಮಾತೆಯ ಬಗ್ಗೆ ಚಿಂತೆ” ಎಂದು ಸುನಿತಾ ಕೇಜ್ರಿವಾಲ್ ಹೇಳಿದರು.

ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ 300 ದಾಟಿದ್ದು, ಜೈಲಿನಲ್ಲಿ ಇನ್ಸುಲಿನ್‌ ನೀಡಲು ನಿರಾಕರಿಸಲಾಗುತ್ತಿದೆ ಎಂದು ಎಎಪಿ ಆರೋಪಿಸಿದೆ.

ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಸಂಬಂಧ ಕೇಜ್ರಿವಾಲ್ ಅವರನ್ನು ಮಾ.21ರಂದು ಇ.ಡಿ ಬಂಧಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...