ಇಂದಿನಿಂದ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೆ

Date:

ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನು ಗಳು ಇಂದಿನಿಂದ (ಜುಲೈ 1) ಜಾರಿಗೆ ಬರಲಿವೆ.

ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಹೊಸದಾಗಿ ಅನುಷ್ಠಾನಗೊಳ್ಳಲಿರುವ ಕಾಯ್ದೆಗಳು. ಈ ಮೂರು ಕಾನೂನುಗಳು ಹಿಂದಿನ ಕ್ರಿಮಿನಲ್ ಕಾನೂನುಗಳಾದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ), ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯ ಬದಲಿ ಕಾನೂನುಗಳಾಗಿವೆ.

ಮೂರು ಹೊಸ ಕಾನೂನುಗಳಿಗೆ ಡಿಸೆಂಬರ್ 25, 2023 ರಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕಾರ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ, 126 ವರ್ಷಗಳ ಹಿಂದಿನ ಅಪರಾಧ ದಂಡಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಕಾನೂನುಗಳು ಜಾರಿಗೆ ಬರಲಿವೆ.

ಸಮಾಜದ ವಾಸ್ತವಾಂಶ ಮತ್ತು ಅಪರಾಧಗಳನ್ನು ಪರಿಣಾಮಕಾರಿ ಯಾಗಿ ಎದುರಿಸುವ ಕಾರ್ಯವಿಧಾನ ವನ್ನು ಹೊಸ ಕಾನೂನುಗಳ ಮೂಲಕ ಒದಗಿಸಲಾಗಿದೆ.ಸಂವಿಧಾನದಲ್ಲಿ ಪ್ರತಿಪಾದಿಸಿರುವ ಆದರ್ಶಗಳನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ

ಜೀರೋ ಎಫ್‌ಐಆರ್, ಆನ್‌ಲೈನ್‌ ಮೂಲಕ ದೂರು ಸಲ್ಲಿಕೆಗೆ ಅವಕಾಶ, ಎಸ್‌ಎಂಎಸ್‌ ಮೂಲಕ ಸಮನ್ಸ್ ಕಳುಹಿಸುವುದು ಮತ್ತು ಹೇಯ ಅಪರಾಧ ನಡೆದಾಗ ಆ ಸ್ಥಳದ ವಿಡಿಯೊ ಚಿತ್ರೀಕರಣವನ್ನು ಕಡ್ಡಾಯಗೊಳಿಸಿರುವಂತಹ ನಿಬಂಧನೆಗಳನ್ನು ಒಳಗೊಂಡಿರುವ ಹೊಸ ಕಾನೂನುಗಳು ಆಧುನಿಕ ನ್ಯಾಯ ವ್ಯವಸ್ಥೆಯನ್ನು ಜಾರಿಗೆ ತರಲಿದೆ ಎಂದು ವಿಶ್ಲೇಷಿಸಲಾಗಿದೆ.

ಜುಲೈ 1ರ ಹಾಗೂ ಆ ಬಳಿಕದ ಎಲ್ಲ ಎಫ್‌ಐಆರ್‌ಗಳನ್ನು ಸಿಆರ್‌ಪಿಸಿಯ 154ನೇ ಸೆಕ್ಷನ್‌ ಬದಲು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ 173ನೇ ಸೆಕ್ಷನ್‌ ಅಡಿಯಲ್ಲಿ ದಾಖಲಿಸಿಕೊಳ್ಳಲಾಗುತ್ತದೆ.

ಮೂರು ಕಾನೂನುಗಳ ಕೆಲವು ಅಂಶಗಳು

  • ಅಪರಾಧ ಪ್ರಕರಣಗಳಲ್ಲಿ ವಿಚಾರಣೆ ಪೂರ್ಣಗೊಂಡ 45 ದಿನಗಳ ಒಳಗಾಗಿ ತೀರ್ಪು ಪ್ರಕಟಿಸಬೇಕು. ಮೊದಲ ವಿಚಾರಣೆ ನಡೆದ 60 ದಿನಗಳ ಒಳಗಾಗಿ ಆರೋಪಪಟ್ಟಿ ಸಲ್ಲಿಸಬೇಕು
  • ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ಆಕೆಯ ಪೋಷಕರು ಅಥವಾ ಸಂಬಂಧಿಕರ ಸಮ್ಮುಖದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿಯೇ ದಾಖಲಿಸಿಕೊಳ್ಳಬೇಕು. ವೈದ್ಯಕೀಯ ವರದಿ ಏಳು ದಿನಗಳ ಒಳಗೆ ಸಲ್ಲಿಕೆಯಾಗಬೇಕು
  • 12 ವರ್ಷಕ್ಕಿಂತ ಕೆಳಗಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಕನಿಷ್ಠ 20 ವರ್ಷ ಜೈಲು
  • ಅಪರಾಧಗಳ ಬಗ್ಗೆ ಎಲೆಕ್ಟ್ರಾನಿಕ್ ಸಂವಹನ ಮಾಧ್ಯಮ ಬಳಸಿ ದೂರು ನೀಡಬಹುದು. ವ್ಯಕ್ತಿಯು ಪೊಲೀಸ್‌ ಠಾಣೆಗೆ ಖುದ್ದಾಗಿ ಹೋಗುವ ಅಗತ್ಯವಿಲ್ಲ
  •  ‘ಜೀರೊ ಎಫ್‌ಐಆರ್‌’ ಪರಿಕಲ್ಪನೆಯಡಿ, ವ್ಯಕ್ತಿಯು ಅಪರಾಧ ಕೃತ್ಯದ ಬಗ್ಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಬಹುದು. ಠಾಣಾ ವ್ಯಾಪ್ತಿಯ ಪ್ರಶ್ನೆ ಉದ್ಭವಿಸದು
  • ಬಂಧಿತ ವ್ಯಕ್ತಿಯು ತನ್ನ ಸ್ಥಿತಿಯ ಬಗ್ಗೆ ತಾನು ಇಚ್ಛಿಸಿದ ಇನ್ನೊಬ್ಬ ವ್ಯಕ್ತಿಗೆ ಮಾಹಿತಿ ನೀಡಬಹುದು. ಬಂಧಿತ ವ್ಯಕ್ತಿಗೆ ತಕ್ಷಣಕ್ಕೆ ನೆರವು ಪಡೆಯಲು ಇದರಿಂದ ಸಾಧ್ಯವಾಗಲಿದೆ
  • ಬಂಧನದ ವಿವರಗಳನ್ನು ಪೊಲೀಸ್ ಠಾಣೆಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಎಲ್ಲರಿಗೂ ಕಾಣುವಂತೆ ಪ್ರಕಟಿಸಬೇಕು.
  • ಮಹಿಳೆಯರನ್ನು ಗುರಿಯಾಗಿಸಿಕೊಂಡ ಕೆಲವು ಅಪರಾಧಗಳಲ್ಲಿ, ಸಂತ್ರಸ್ತೆಯ ಹೇಳಿಕೆಯನ್ನು ಸಾಧ್ಯವಾದಷ್ಟು ಮಟ್ಟಿಗೆ ಮಹಿಳಾ ಮ್ಯಾಜಿಸ್ಟ್ರೇಟ್ ಸಮಕ್ಷಮದಲ್ಲಿ ದಾಖಲು ಮಾಡಿಕೊಳ್ಳಬೇಕು
  • ಆರೋಪಿ ಹಾಗೂ ಸಂತ್ರಸ್ತರಿಗೆ ಎಫ್‌ಐಆರ್, ಪೊಲೀಸ್ ವರದಿ, ದೋಷಾರೋಪ ಪಟ್ಟಿ, ಹೇಳಿಕೆಗಳು, ತಪ್ಪೊಪ್ಪಿಗೆಗಳು ಮತ್ತು ಇತರ ದಾಖಲೆಗಳನ್ನು 14 ದಿನಗಳೊಳಗೆ ನೀಡಬೇಕು
  •  ಸಮನ್ಸ್‌ಗಳನ್ನು ಎಲೆಕ್ಟ್ರಾನಿಕ್ ಸಂವಹನ ಮಾಧ್ಯಮದ ಮೂಲಕ ರವಾನಿಸಬಹುದು
  •  ಪ್ರಕರಣಗಳ ವಿಚಾರಣೆಯನ್ನು ನ್ಯಾಯಾಲಯಗಳು ಗರಿಷ್ಠ ಎರಡು ಸಲ ಮಾತ್ರ ಮುಂದೂಡಬಹುದು
  • ಸಾಕ್ಷಿಗಳ ಸುರಕ್ಷತೆ ಮತ್ತು ಸಹಕಾರವನ್ನು ಖಚಿತಪಡಿಸಿಕೊಳ್ಳಲು ಎಲ್ಲ ರಾಜ್ಯಗಳು ಸಾಕ್ಷಿಗಳ ರಕ್ಷಣೆಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸಬೇಕು
  • ಗಂಭೀರ ಸ್ವರೂಪದ ಅಪರಾಧ ನಡೆದ ಸಂದರ್ಭ ಗಳಲ್ಲಿ ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ತೆರಳಿ ಸಾಕ್ಷ್ಯ ಸಂಗ್ರಹಿಸುವುದು ಕಡ್ಡಾಯ. ಅಪರಾಧ ನಡೆದ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುವ ಪ್ರಕ್ರಿಯೆಯನ್ನು ವಿಡಿಯೊ ಚಿತ್ರೀಕರಣ ಮಾಡಬೇಕು
  • ತಲೆಮರೆಸಿಕೊಂಡ ಆರೋಪಿಗಳ ವಿಚಾರಣೆ ಮತ್ತು ಅವರ ವಿರುದ್ಧ ತೀರ್ಪು ನೀಡಲು ಅವಕಾಶ
  • ಮಹಿಳೆಯರು, 15 ವರ್ಷಕ್ಕಿಂತ ಕೆಳಗಿನ ಮತ್ತು 60 ವರ್ಷ ಮೇಲ್ಪಟ್ಟವರು, ಅಂಗವಿಕಲರು ಹಾಗೂ ತೀವ್ರ ಅನಾರೋಗ್ಯ ಸಮಸ್ಯೆ ಇರುವವರಿಗೆ ಪೊಲೀಸ್ ಠಾಣೆಗೆ ಹೋಗುವುದರಿಂದ ವಿನಾಯಿತಿ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...