ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್; ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಬಂಧನ

Date:

ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅಜೀತ್ ಸಿಂಗ್, “ಅಲಿ ಖಾನ್ ಮಹ್ಮದಾಬಾದ್ ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಆಪರೇಷನ್ ಸಿಂಧೂರಕ್ಕೆ ಸಂಬಂಧಿಸಿದಂತೆ ಅವರ ಕೆಲವು ಹೇಳಿಕೆಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ. ಅಶೋಕ ವಿಶ್ವವಿದ್ಯಾಲಯವೂ ಬಂಧನವನ್ನು ದೃಢೀಕರಿಸಿದೆ. ಹಾಗೆಯೇ ತನಿಖೆಗೆ ಸಹಕರಿಸುವುದಾಗಿ ಹೇಳಿದೆ.

ಇದನ್ನು ಓದಿದ್ದೀರಾ? ‘ಆಪರೇಷನ್ ಸಿಂಧೂರ’ ಯಶಸ್ಸಿಗೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಕಾಂಗ್ರೆಸ್ ಸರ್ಕಾರ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಾಯಕ ಪ್ರಾಧ್ಯಾಪಕರ ಪೋಸ್ಟ್ ವಿರುದ್ಧ ಹರಿಯಾಣ ರಾಜ್ಯ ಮಹಿಳಾ ಆಯೋಗವು ನೋಟಿಸ್ ಕಳುಹಿಸಿದ ಕೆಲವೇ ದಿನಗಳ ನಂತರ ಬಂಧನ ಮಾಡಲಾಗಿದೆ. ಆದರೆ ಸದ್ಯ ಅಲಿ ಖಾನ್ ಪೋಸ್ಟ್ ವೈರಲ್ ಆಗುತ್ತಿದೆ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ನಿಮ್ಮ ಈ ಬರಹಕ್ಕೆ ದೂರು ದಾಖಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಇನ್ನು “ದೇಶದ ಹೆಣ್ಣುಮಕ್ಕಳಾದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರನ್ನು ನಾವು ವಂದಿಸುತ್ತೇವೆ. ಆದರೆ ರಾಜಕೀಯ ವಿಜ್ಞಾನವನ್ನು ಕಲಿಸುವ ಪ್ರಾಧ್ಯಾಪಕರು ಅವರನ್ನು ಉದ್ದೇಶಿಸಿ ಬಳಸಿರುವ ಪದಗಳ ಹಿನ್ನೆಲೆ ಅವರು ಆಯೋಗದ ಮುಂದೆ ಹಾಜರಾಗಿ ವಿಷಾದ ವ್ಯಕ್ತಪಡಿಸುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ” ಎಂದು ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ಹೇಳಿದ್ದರು.

ಆದರೆ ಆಯೋಗದ ನೋಟಿಸ್‌ಗೆ ಅಲಿ ಪ್ರತಿಕ್ರಿಯಿಸಿದ್ದಾರೆ. “ಆಯೋಗವು ತನ್ನ ಹೇಳಿಕೆಯನ್ನು ತಪ್ಪಾಗಿ ಓದಿದೆ. ಮಹಿಳಾ ಆಯೋಗವು ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿ ನನ್ನ ಪೋಸ್ಟ್‌ಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದೆ. ಇದು ನನಗೆ ಆಶ್ಚರ್ಯವಾಗಿದೆ. ಅರ್ಥವನ್ನೇ ತಲೆಕೆಳಗಾಗಿ ಮಾಡಿದ್ದಾರೆ” ಎಂದಿದ್ದಾರೆ.

ಏನಿದು ಪ್ರಕರಣ, ಪೋಸ್ಟ್‌ನಲ್ಲಿ ಏನಿದೆ?

ಪಹಲ್ಗಾಮ್ ದಾಳಿಗೆ ವಿರುದ್ಧವಾಗಿ ಭಾರತ ಆಪರೇಷನ್ ಸಿಂಧೂರ ನಡೆಸಿ ಭಯೋತ್ಪಾದಕ ಶಿಬಿರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯ ಒಂದು ದಿನದ ನಂತರ ಮೇ 8ರಂದು ಮಹ್ಮದಾಬಾದ್ ಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಸುತ್ತ ವಿವಾದ ಉಂಟಾಗಿದೆ.

ಮಿಲಿಟರಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಮುಸ್ಲಿಂ ಮಹಿಳಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಹಿಂದುತ್ವವಾದಿಗಳು ಹೊಗಳಿದ್ದನ್ನು ಮಹ್ಮದಾಬಾದ್ ತಮ್ಮ ಪೋಸ್ಟ್‌ನಲ್ಲಿ ವ್ಯಂಗ್ಯವಾಗಿ ಉಲ್ಲೇಖಿಸಿದ್ದರು. ಹಾಗೆಯೇ ದೇಶದಲ್ಲಿ ಮುಸ್ಲಿಮರ ವಿರುದ್ಧ ನಡೆಯುವ ಬುಲ್ಡೋಜರ್ ದಾಳಿಗಳ ಬಗ್ಗೆಯೂ ಉಲ್ಲೇಖಿಸಿದ್ದರು.

screenshot

ಆದರೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಅವರ ಹೇಳಿಕೆ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ. ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಘನತೆಯನ್ನು ಹಾಳುಮಾಡಿದ್ದಾರೆ, ಕೋಮು ದ್ವೇಷವನ್ನು ಹುಟ್ಟಿಸುತ್ತಿದ್ದಾರೆ ಎಂದು ಆರೋಪಿಸಿದೆ. ಹಾಗೆಯೇ ಬಂಧನಕ್ಕೂ ಕೆಲವು ದಿನಗಳ ಹಿಂದೆ ಸಮನ್ಸ್ ಜಾರಿ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ ಅಲಿ ಖಾನ್ ತಮ್ಮ ಹೇಳಿಕೆಗಳನ್ನು “ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ. ಸಮನ್ಸ್ ಅನ್ನು “ಹೊಸ ರೀತಿಯ ಸೆನ್ಸಾರ್‌ಶಿಪ್ ಮತ್ತು ಕಿರುಕುಳ”ದ ಭಾಗವೆಂದು ವಿವರಿಸಿದ್ದಾರೆ.

sindoor

ಸದ್ಯ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಬಂಧನ ಮಾಡಲಾಗಿದ್ದು, ಅವರ ಪೋಸ್ಟ್ ಹರಿದಾಡುತ್ತಿದೆ. ಈ ಪೋಸ್ಟ್‌ಗಾಗಿ ನಿಮ್ಮ ಬಂಧನ ಮಾಡಲಾಯಿತೇ, ಮಹಿಳಾ ಆಯೋಗ ನಿಮಗೆ ಸಮನ್ಸ್ ನೀಡುವಂತಹ ವಿಚಾರ ಏನಿದೆ ಎಂದು ನೆಟ್ಟಿಗರು ಪ್ರಶ್ನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...