ಉತ್ತರಾಖಂಡದ ಜೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್ನ ಅಧ್ಯಕ್ಷರು ಮತ್ತು ಶಕುಂಭರಿ ಪೀಠದ ಅಧಿಪತಿ ಅಶುತೋಷ್ ಬ್ರಹ್ಮಚಾರಿ ಮಹಾರಾಜ್ ಮೇಲೆ ರೈಲಿನಲ್ಲಿ ದಾಳಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ವರದಿಗಳ ಪ್ರಕಾರ ಅಶುತೋಷ್ ಬ್ರಹ್ಮಚಾರಿ ರೈಲ್ವೆ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ದೂರು ನೀಡಿದ್ದಾರೆ. ಈ ವೇಳೆ ಬಟ್ಟೆ ರಕ್ತಸಿಕ್ತವಾಗಿತ್ತು ಎನ್ನಲಾಗಿದೆ. ರೈಲಿನಲ್ಲಿ ಶೌಚಾಲಯ ಬಳಸಲು ಹೋದಾಗ ಹಲ್ಲೆ ನಡೆದಿದೆ ಎಂದು ಅಶುತೋಷ್ ಬ್ರಹ್ಮಚಾರಿ ಆರೋಪಿಸಿದ್ದಾರೆ. ಸದ್ಯ ಬ್ರಹ್ಮಚಾರಿ ಅವರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
“ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಲು ಪ್ರಯಾಗರಾಜ್ಗೆ ಪ್ರಯಾಣಿಸುತ್ತಿದೆ. ರೈಲು ಸಿರಾತು ನಿಲ್ದಾಣದ ಬಳಿ ಇದ್ದಾಗ, ಶೌಚಾಲಯಕ್ಕೆ ಹೋದಾಗ ತನ್ನ ಮೇಲೆ ದಾಳಿ ನಡೆದಿದೆ. ತಾನು ಶೌಚಾಲಯದಲ್ಲಿ ಬೀಗ ಹಾಕಿಕೊಂಡು ದಾಳಿಯಿಂದ ತಪ್ಪಿಸಿಕೊಂಡಿದ್ದೇನೆ” ಎಂದು ಬ್ರಹ್ಮಚಾರಿ ಹೇಳಿದ್ದಾರೆ.
ವಾರಣಾಸಿಯ ವಿದ್ಯಾಮಠದ ಗುರುಕುಲದಲ್ಲಿ ಕನಿಷ್ಠ 20 ಬಾಲಕರ ಮೇಲೆ ಸ್ವಾಮಿ ಅವಿಮುಕ್ತೇಶ್ವರಾನಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಅಶುತೋಷ್ ಬ್ರಹ್ಮಚಾರಿ ಕೋರ್ಟ್ನಲ್ಲಿ ದೂರು ದಾಖಲಿಸಿದ್ದರು.
ಈ ದೂರಿನ ಆಧಾರದಲ್ಲಿ ಉತ್ತರ ಪ್ರದೇಶದ ಪ್ರಯಾಗ್ರಾಜ್ನ ವಿಶೇಷ ನ್ಯಾಯಾಲಯವು ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲು ಆದೇಶಿಸಿದೆ. ಆದೆರೆ ಈ ಎಲ್ಲಾ ಆರೋಪಗಳನ್ನು ಅವಿಮುಕ್ತೇಶ್ವರಾನಂದರು ನಿರಾಕರಿಸಿದ್ದು, ಇವು ಸತ್ಯಕ್ಕೆ ದೂರವಾದವು ಮತ್ತು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.





