ಅಸ್ಸಾಂ | ತಾಂತ್ರಿಕ ಕಾರಣದಿಂದ 19 ಕಡೆ ಇರಿಸಿದ್ದ ಬಾಂಬ್‌ಗಳು ಸ್ಪೋಟಗೊಳ್ಳಲಿಲ್ಲ; ಉಲ್ಫಾ ಸಂಘಟನೆ

Date:

ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿಪಡಿಸಲು ರಾಜಧಾನಿ ಗುವಾಹಟಿ ಸೇರಿದಂತೆ ಅಸ್ಸಾಂ ರಾಜ್ಯದ 19 ಸ್ಥಳಗಳಲ್ಲಿ ಸರಣಿ ಬಾಂಬ್‌ಗಳನ್ನು ಸ್ಫೋಟಿಸಲು ನಿಷೇಧಿತ ಉಲ್ಫಾ ಸಂಘಟನೆ ಯೋಜನೆ ರೂಪಿಸಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಎಲ್ಲ 19 ಕಡೆ ಇರಿಸಿದ್ದ ಬಾಂಬ್‌ಗಳು ಕೊನೆಯ ಕ್ಷಣದಲ್ಲಿ ಸ್ಫೋಟಗೊಳ್ಳದ ಕಾರಣ ಗುವಾಹಟಿ ಸೇರಿದಂತೆ ಅಸ್ಸಾಂನ ನಗರಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ.

ಈ ನಡುವೆ ಉಲ್ಫಾ ಸಂಘಟನೆ ಕೂಡ ಹೇಳಿಕೆ ನೀಡಿದ್ದು, “ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿಪಡಿಸಲು ರಾಜಧಾನಿ ಗುವಾಹಟಿ ಸೇರಿದಂತೆ ಅಸ್ಸಾಂ ರಾಜ್ಯದ 19 ಸ್ಥಳಗಳಲ್ಲಿ ಸರಣಿ ಸ್ಫೋಟಕಗಳನ್ನು ಸ್ಫೋಟಿಸಲು ಬಾಂಬ್‌ಗಳನ್ನು ಇಡಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದ ಸ್ಫೋಟಗೊಳ್ಳಲಿಲ್ಲ” ಎಂದು ತಿಳಿಸಿದೆ.

ನಿಷೇಧಿತ ಸ್ವತಂತ್ರ್ಯ ಉಲ್ಫಾ(ಐ) ಸಂಘಟನೆ ಅಸ್ಸಾಂ ಪ್ರತ್ಯೇಕ ರಾಜ್ಯದ ಬೇಡಿಕೆಯ ಸಂಘಟನೆಗಳಲ್ಲಿ ಒಂದಾಗಿದೆ. ಉಲ್ಫಾದ ಹಲವು ಬಣಗಳು ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಕೈಬಿಟ್ಟು ಪ್ರಜಾಪ್ರಭುತ್ವದ ಹಾದಿಗೆ ಮರಳಿವೆ. ಆದರೆ ಸಶಸ್ತ್ರ ಗುಂಪು ಉಲ್ಫಾ-ಐ ಮಾತ್ರ ಅಸ್ಸಾಂ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಹಿಂಸಾಚಾರ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಗ್ಲಾ ಹಿಂದೂಗಳ ಸಂಕಟ: ದಿಟವೆಷ್ಟು, ಸಟೆಯೆಷ್ಟು?

ಎಂದಿನಂತೆ ಉಲ್ಫಾ ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಿಷ್ಕರಿಸಲು ಕರೆ ನೀಡಿತ್ತು. ಈ ಹಂತದಲ್ಲಿ ಭದ್ರತಾ ಪಡೆಗಳಿಗೆ ಮಾಹಿತಿ ಲಭಿಸಿ ಬಾಂಬ್‌ಗಳನ್ನು ಏಕಕಾಲದಲ್ಲಿ ಸ್ಫೋಟಿಸುವ ಪ್ರಯತ್ನವು ಕೊನೆಯ ಕ್ಷಣದಲ್ಲಿ ವಿಫಲವಾಗಿದೆ ಎಂದು ಗುಪ್ತಚರ ಅಧಿಕಾರಿಗಳು ತಿಳಿಸಿದ್ದಾರೆ.

ಈ 19 ಬಾಂಬ್‌ಗಳಲ್ಲಿ ಒಂದನ್ನು ಅಸ್ಸಾಂ ಸೆಕ್ರೆಟರಿಯೇಟ್ ಬಳಿ ಇಡಲಾಗಿತ್ತು. ಉಲ್ಫಾ ಭಯೋತ್ಪಾದಕರು ಅಸ್ಸಾಂ ರಾಜಧಾನಿ ಗುವಾಹಟಿಯ 8 ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸಲು ಯೋಜಿಸಿದ್ದರು. ಸತತವಾಗಿ ಏಕಕಾಲದಲ್ಲಿ ಬಾಂಬ್‌ಗಳನ್ನು ಸ್ಫೋಟಿಸುವ ಪ್ರಯತ್ನವು ‘ಕೊನೆಯ ನಿಮಿಷ’ ತಾಂತ್ರಿಕ ದೋಷದಿಂದಾಗಿ ವಿಫಲವಾಗಿದೆ. ಇದರ ಬೆನ್ನಲ್ಲೇ ಅಸ್ಸಾಂ ರಾಜ್ಯದಾದ್ಯಂತ ಆರೋಪಿಗಳ ಪತ್ತೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...