ಅಸ್ಸಾಂ | ಅರಣ್ಯ ಭೂಮಿ ತೆರವು ಕಾರ್ಯಾಚರಣೆ; 2,070 ಕಾಂಕ್ರೀಟ್ ರಚನೆಗಳ ನೆಲಸಮ

Date:

ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅರಣ್ಯ ಭೂಮಿಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಪೈಕಾನ್ ಮೀಸಲು ಅರಣ್ಯದಲ್ಲಿ 140 ಹೆಕ್ಟೇರ್‌ಗಳಿಗೂ ಹೆಚ್ಚು ಒತ್ತುವರಿಯಾದ ಅರಣ್ಯ ಭೂಮಿಯನ್ನು ಸರ್ಕಾರ ಮರಳಿ ಪಡೆಯಲು ಕಾರ್ಯಾಚರಣೆ ಆರಂಭಿಸಿದೆ. ಮುಖ್ಯವಾಗಿ, ಮಾನವ-ಆನೆ ಸಂಘರ್ಷವನ್ನು ತಡೆಗಟ್ಟಲು ಮತ್ತು ಪರಿಸರ ಸಮತೋಲನವನ್ನು ಪುನಃಸ್ಥಾಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಜುಲೈ 10ರೊಳಗೆ ಒತ್ತುವರಿದಾರರು ಸ್ವಯಂಪ್ರೇರಿತವಾಗಿ ಅರಣ್ಯ ಭೂಮಿಯನ್ನು ಖಾಲಿ ಮಾಡಲು ಗಡುವು ನೀಡಲಾಗಿತ್ತು. ಗಡುವು ಮುಗಿದ ಬೆನ್ನಲ್ಲೇ, ಹೈಕೋರ್ಟ್ ಆದೇಶಕ್ಕೆ ಅನುಗುಣವಾಗಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಕೃಷ್ಣೈ ವ್ಯಾಪ್ತಿಯ ಎರಡು ಪ್ರಮುಖ ವಲಯಗಳಾದ ಬಿದ್ಯಾಪಾರಾ ಮತ್ತು ಬೆಟ್ಬರಿಯಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲಿ ಹಲವಾರು ಕುಟುಂಬಗಳು ವರ್ಷಗಳಿಂದ ಕಾನೂನುಬಾಹಿರವಾಗಿ ವಾಸಿಸುತ್ತಿದ್ದಾರೆ ಎಂದು ಸರ್ಕಾರ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು 149 ಹೆಕ್ಟೇರ್ ಪ್ರದೇಶವನ್ನು ತೆರವುಗೊಳಿಸುತ್ತಿದ್ದೇವೆ. ಕಾರ್ಯಾಚರಣೆಗಾಗಿ ಹಲವಾರು ಜೆಸಿಬಿಗಳನ್ನು ಬಳಸುತ್ತಿದ್ದು, ಭಾನುವಾರ ಕಾರ್ಯಾಚರಣೆಯನ್ನು ಪೂರ್ಣಗೊಳಿಸುವ ಗುರಿ ಇದೆ. ತೆರವು ಪ್ರಕ್ರಿಯೆಯಲ್ಲಿ ಸುಮಾರು 2,070 ಕಾಂಕ್ರೀಟ್ ರಚನೆಗಳನ್ನು ಕಿತ್ತುಹಾಕಬೇಕಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ | ಸುಪ್ರೀಂ ಆದೇಶ: ಪರ-ವಿರೋಧಗಳ ವಾಗ್ವಾದ

“ದೇಶಾದ್ಯಂತ ನಡೆದ ಮಾನವ-ಆನೆ ಸಂಘರ್ಷ ಪ್ರಕರಣಗಳಿಗೆ ಹೋಲಿಸಿದರೆ, ಗೋಲ್ಪಾರಾ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅರಣ್ಯ ಭೂಮಿಯ ಮೇಲಿನ ಎಲ್ಲ ಅತಿಕ್ರಮಣಗಳನ್ನು ತೆಗೆದುಹಾಕುವಂತೆ ಹೈಕೋರ್ಟ್ ನಮಗೆ ನಿರ್ದೇಶನ ನೀಡಿದೆ” ಎಂದು ಗೋಲ್‌ಪಾರದ ಜಿಲ್ಲಾ ಅರಣ್ಯ ಅಧಿಕಾರಿ (ಡಿಎಫ್‌ಒ) ತೇಜಶ್ ಮರಿಸ್ವಾಮಿ ಹೇಳಿದ್ದಾರೆ.

ತೆರವು ಕಾರ್ಯಾಚರಣೆಗೆ ಮುಂಚಿತವಾಗಿ, ಅರಣ್ಯ ಇಲಾಖೆ ಮತ್ತು ಅಸ್ಸಾಂ ಪೊಲೀಸರ ಜಂಟಿ ತಂಡಗಳು ತೀವ್ರ ಗಸ್ತು ತಿರುಗುತ್ತಿವೆ. ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಭೂಮಿಯನ್ನು ತೊರೆಯುವಂತೆ ಸೂಚಿಲಾಗುತ್ತಿದೆ. ಅಲ್ಲಿನ ನಿವಾಸಿಗಳಿಗೆ ಶಾಂತಿಯುತವಾಗಿ ಹೊರಹೋಗುವಂತೆ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ.

ತೆರವು ಕಾರ್ಯಾಚರಣೆಯು ಅರಣ್ಯದ ಪರಿಸರ ಸಮಗ್ರತೆ ಮತ್ತು ವನ್ಯಜೀವಿ ಕಾರಿಡಾರ್‌ಗಳನ್ನು ರಕ್ಷಿಸುವ ಸಂರಕ್ಷಣಾ ಪ್ರಯತ್ನದ ಭಾಗವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...