ಅಸ್ಸಾಂ | 1,500 ಮುಸ್ಲಿಂ ಕುಟುಂಬಗಳ ಮನೆ ಉರುಳಿಸಲು ಮುಂದಾದ ಸರ್ಕಾರ

Date:

ಅಸ್ಸಾಂ ಸರ್ಕಾರವು ಗೋಲಾಘಾಟ್ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ತೆರವು ಕಾರ್ಯಾಚರಣೆ ಆರಂಭಿಸಿದೆ. 1,500ಕ್ಕೂ ಹೆಚ್ಚು ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ. ಮುಸ್ಲಿಂ ಕುಟುಂಬಗಳು ವಾಸವಾಗಿರುವ 3,600 ಎಕರೆಗಿಂತಲೂ ಹೆಚ್ಚು ಭೂಮಿಯನ್ನು ಅರಣ್ಯ ಪ್ರದೇಶವನ್ನು ಸರ್ಕಾರ ವಾದಿಸುತ್ತಿದೆ. ಅದನ್ನು ಮುಸ್ಲಿಮರು ಒತ್ತುವರಿ ಮಾಡಿಕೊಂಡು, ಮನೆ ಕಟ್ಟಿಕೊಂಡಿದ್ದಾರೆ ಎಂದು ಆರೋಪಿಸಿದೆ.

ಗೋಲಾಘಾಟ್ ಜಿಲ್ಲೆಯ ಉರಿಯಾಮ್‌ಘಾಟ್‌, ಗೋಲ್ಪಾರಾ, ಬಿದ್ಯಾಪುರ ಪ್ರದೇಶದಲ್ಲಿ ಸರ್ಕಾರ ತೆರವು ಕಾರ್ಯಾಚರಣೆ ನಡೆಸುತ್ತಿದೆ. ಸರ್ಕಾರದ ಒತ್ತುವರಿ ಆರೋಪವನ್ನು ಸ್ಥಳೀಯ ಮುಸ್ಲಿಮರು ಅಲ್ಲಗಳೆದಿದ್ದಾರೆ.

“ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ (PMAY-G) ಅಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದೇವೆ. ಜಲ ಜೀವನ್ ಮಿಷನ್ (JJM) ಅಡಿಯಲ್ಲಿ ನೀರಿನ ಸಂಪರ್ಕ ಪಡೆದಿದ್ದೇವೆ. ಸರ್ವ ಶಿಕ್ಷಣ ಅಭಿಯಾನ (SSA) ಅಡಿಯಲ್ಲಿ ಸರ್ಕಾರಿ ಶಾಲೆಗಳು ನಿರ್ಮಾಣಗೊಂಡಿವೆ. ಬಹುತೇಕ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ, ಜೊತೆಗೆ ಮಾರುಕಟ್ಟೆಗಳು, ಮಸೀದಿಗಳು, ಮದರಸಗಳು ಹಾಗೂ ಚರ್ಚ್‌ಗಳು ಇವೆ. ಇದು ನಮ್ಮದೇ ಭೂಮಿ” ಎಂದು ಮುಸ್ಲಿಂ ಸಮುದಾಯ ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಅಧಿಕಾರಿಗಳು ಸುಮಾರು 10,500 ರಿಂದ 11,000 ಹೆಕ್ಟೇರ್ ಭೂಮಿಯನ್ನು ಜನರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಈ ಪ್ರದೇಶಗಳಲ್ಲಿ ಸುಮಾರು 2,000 ಕುಟುಂಬಗಳು ವಾಸಿಸುತ್ತಿವೆ. ಅವರಲ್ಲಿ, ಸುಮಾರು 1,500 ಕುಟುಂಬಗಳು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿವೆ. ಅವರಿಗೆ ನೋಟಿಸ್‌ಗಳನ್ನು ನೀಡಲಾಗಿದೆ. ಉಳಿದ ಕುಟುಂಬಗಳು ಅರಣ್ಯವಾಸಿಗಳಾಗಿದ್ದು, ಅರಣ್ಯ ಹಕ್ಕುಗಳ ಸಮಿತಿ (FRC) ಇಂದ ಪ್ರಮಾಣಪತ್ರಗಳನ್ನು ಪಡೆದಿವೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೆಡವಲ್ಪಡುತ್ತಿರುವ ಮನೆಗಳ ಕುಟುಂಬಗಳು ಮುಸ್ಲಿಂ ಸಮುದಾಯಕ್ಕೆ ಸೇರಿವೆ. ಆದರೆ, FRC ಪ್ರಮಾಣಪತ್ರಗಳನ್ನು ಹೊಂದಿರುವವರು ಬೋಡೋ, ನೇಪಾಳಿ, ಮಣಿಪುರಿ ಹಾಗೂ ಇತರ ಸಮುದಾಯಗಳಿಗೆ ಸೇರಿದವರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ನೋಟಿಸ್ ಪಡೆದ ಸುಮಾರು 80% ಕುಟುಂಬಗಳು ಕಳೆದ ಕೆಲವು ದಿನಗಳಲ್ಲಿ ತಮ್ಮ ಅಕ್ರಮ ಮನೆಗಳನ್ನು ಖಾಲಿ ಮಾಡಿದ್ದಾರೆ. ನಾವು ಕೇವಲ ಅವರ ಮನೆಗಳನ್ನು ಕೆಡವುತ್ತಿದ್ದೇವೆ” ಎಂದು ಅಧಿಕಾರಿ ಹೇಳಿಕೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ಉಪರಾಷ್ಟ್ರಪತಿ ಆಯ್ಕೆ ಹೇಗೆ ನಡೆಯುತ್ತದೆ? ಚುನಾವಣಾ ಮಾನದಂಡಗಳೇನು?

ಅಸ್ಸಾಂ ಸರ್ಕಾರವು ಉರಿಯಾಮ್‌ಘಾಟ್‌ನಲ್ಲಿ 11,000 ಹೆಕ್ಟೇರ್ ಭೂಮಿಯನ್ನು ತೆರವುಗೊಳಿಸಲು ದೊಡ್ಡ ಸಂಖ್ಯೆಯ ಪೊಲೀಸ್ ಸಿಬ್ಬಂದಿ ಮತ್ತು ಬುಲ್ಡೋಜರ್‌ಗಳನ್ನು ನಿಯೋಜಿಸಿದೆ.

ಗೋಲ್ಪಾರಾದಲ್ಲಿ ನಡೆಯುತ್ತಿರುವ ತೆರವು ಕಾರ್ಯಾಚರಣೆ ಹಿಂಸೆ ತಿರುಗಿದೆ. ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಓರ್ವ ನಿವಾಸಿ ಮೃತಪಟ್ಟಿದ್ದಾರೆ.

ಬಿದ್ಯಾಪುರದ ಸಂತ್ರಸ್ತ ಕುಟುಂಬಗಳು ತೆರವು ಕಾರ್ಯಾಚರಣೆಯ ತಾರ್ಕಿಕತೆಯನ್ನು ಪ್ರಶ್ನಿಸಿವೆ. ಈ ಪ್ರದೇಶವನ್ನು ನಾಗಾಲ್ಯಾಂಡ್‌ನ ಆಕ್ರಮಣದಿಂದ ರಕ್ಷಿಸುವ ಉದ್ದೇಶದಿಂದ ಹಿಂದಿನ ಸರ್ಕಾರಗಳು ತಮ್ಮನ್ನು ಇಲ್ಲಿಗೆ ಸ್ಥಳಾಂತರಿಸಿದ್ದವು ಎಂದು ಹೇಳಿಕೊಂಡಿವೆ.

“ನಾವು ಇಲ್ಲಿಂದ ಎಲ್ಲಿಗೆ ಹೋಗಬೇಕು? ನನ್ನ ತಂದೆ ಸುಮಾರು 40 ವರ್ಷಗಳ ಹಿಂದೆ ನಾಗಾನ್ ಜಿಲ್ಲೆಯಿಂದ ಬಂದಿದ್ದರು. ಆದರೆ ನಾನು ಇಲ್ಲಿ ಜನಿಸಿದೆ. 1980ರ ದಶಕದಲ್ಲಿ ನಾಗಾಲ್ಯಾಂಡ್‌ನಿಂದ ಒತ್ತುವರಿಯಾಗದಂತೆ ರಕ್ಷಿಸಲು ನಮ್ಮನ್ನು ಇಲ್ಲಿಗೆ ಸರ್ಕಾರವೇ ಕರೆತಂದಿವೆ” ಎಂದು ಬಿದ್ಯಾಪುರದ ಸಂತ್ರಸ್ತ ಅಲಿ ಕಾಜಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...