ನಕಲಿ ವೈದ್ಯರ ಕೇಂದ್ರವಾದ ಅಸ್ಸಾಂನ ಕಚಾರ್ ಜಿಲ್ಲೆ: 90 ದಿನಗಳಲ್ಲಿ 17 ಮಂದಿ ಬಂಧನ

Date:

ಅಸ್ಸಾಂನ ಕಚಾರ್ ಜಿಲ್ಲೆಯು ನಕಲಿ ವೈದ್ಯರ ಕೇಂದ್ರವಾಗಿದ್ದು ಕಳೆದ 90 ದಿನಗಳಲ್ಲಿ ಈ ಜಿಲ್ಲೆಯೊಂದರಲ್ಲೇ 17 ಮಂದಿ ನಕಲಿ ವೈದ್ಯರ ಬಂಧನ ಮಾಡಲಾಗಿದೆ. ಕಳೆದ ಎರಡು ದಿನಗಳಲ್ಲಿ ಇಬ್ಬರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂನ ನಕಲಿ ವೈದ್ಯರ ವಿರುದ್ಧದ ಕಾರ್ಯಾಚರಣೆ ಭಾಗವಾಗಿ ಈ ವರ್ಷದ ಆಗಸ್ಟ್‌ನಿಂದ ಈವರೆಗೆ ಒಟ್ಟಾಗಿ ಕಚಾರ್ ಜಿಲ್ಲೆಯಲ್ಲಿ ಒಟ್ಟು 17 ನಕಲಿ ವೈದ್ಯರನ್ನು ಬಂಧಿಸಲಾಗಿದೆ. ಇತ್ತೀಚೆಗೆ ದ್ವಾರಬಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಚೋಟೋಜಲೆಂಗಾ ಭಾಗ IIರ ನಿವಾಸಿ ಸುಪಾಲ್ ರಾಯ್ (41) ಮತ್ತು ಪಶ್ಚಿಮ ಬಂಗಾಳದ ಜಲ್ಪೈಗುರಿಯ ತತ್ಪಾರ ಮೂಲದ ನಕಲಿ ವೈದ್ಯ ಇಂದ್ರಜಿತ್ ರಾಯ್ (39) ಬಂಧನ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಬಿಹಾರ | ಯೂಟ್ಯೂಬ್ ವಿಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ: ಬಾಲಕ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವಾರಬಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ರೋಸೆಕಂಡಿ ಟೀ ಎಸ್ಟೇಟ್‌ನಲ್ಲಿರುವ ತನ್ನ ಔಷಧಾಲಯದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಪಾಲ್ ರಾಯ್ ಅವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ರೆಡ್ ಹ್ಯಾಂಡ್ ಆಗಿ ಬಂಧಿಸಿದರು. ಇಂದ್ರಜಿತ್ ರಾಯ್ ಅವರನ್ನು ತಾರಾಪುರದ ಇ & ಡಿ ಕಾಲೋನಿಯ ಮಾ ಆಯುರ್ವೇದದಿಂದ ಬಂಧಿಸಲಾಗಿದೆ. ಅಲ್ಲಿ ಇಂದ್ರಜಿತ್ ಸಂದರ್ಶಕ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ರೋಗಿಗಳು ಯಾವ ಔಷಧಿ ಪಡೆಯಬೇಕೆಂದು ಬರೆದುಕೊಡುತ್ತಿದ್ದರು. ಆದರೆ ರಾಯ್ ಯಾವುದೇ ವೈದ್ಯಕೀಯ ಶಿಕ್ಷಣ ಪಡೆದಿಲ್ಲ.

ಇನ್ನು ಸಾರ್ವಜನಿಕರೂ ನಕಲಿ ವೈದ್ಯರ ಬಗ್ಗೆ ಮಾಹಿತಿ ನೀಡುವುದನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪೊಲೀಸರು ಟೋಲ್-ಫ್ರೀ ಕರೆಯನ್ನು ಆರಂಭಿಸಿದ್ದಾರೆ. “ಕಚಾರ್‌ನ ಜನರಿಗಾಗಿ ನಾವು 6026903329 ಎಂಬ ವಿಶೇಷ ಸಂಖ್ಯೆಯನ್ನು ನೀಡುತ್ತಿದ್ದೇವೆ. ನಕಲಿ ವೈದ್ಯರ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇದ್ದರೆ, ಈ ಸಂಖ್ಯೆಗೆ ಕರೆ ಮಾಡಿ ಹಂಚಿಕೊಳ್ಳಬಹುದು” ಎಂದು ಅಧಿಕಾರಿಗಳು ಹೇಳಿದ್ದಾರೆ.

ದೇಶದಲ್ಲಿ ಮಾನ್ಯ ಅರ್ಹತೆಗಳಿಲ್ಲದೆಯೇ ವೈದ್ಯಕೀಯ ವೃತ್ತಿ ನಡೆಸುವವರ ಸಂಖ್ಯೆ ಹೆಚ್ಚಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರು ಅಧಿಕವಾಗಿದ್ದಾರೆ. 2018ರಲ್ಲಿ ಸರ್ಕಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಅಲೋಪತಿ ವೈದ್ಯಕೀಯ ವೃತ್ತಿಯನ್ನು ನಿರ್ವಹಿಸುವ ಶೇ.57.3ರಷ್ಟು ಸಿಬ್ಬಂದಿಗೆ ವೈದ್ಯಕಿಯ ತರಬೇತಿಯಿಲ್ಲ.

ಇತ್ತೀಚೆಗೆ ಗುಜರಾತ್‌ನಲ್ಲಿ, ಪೊಲೀಸರು ತಲಾ 70 ಸಾವಿರ ರೂಪಾಯಿಗೆ ನಕಲಿ ವೈದ್ಯಕೀಯ ಪದವಿ ಪ್ರಮಾಣಪತ್ರವನ್ನು ಮಾರಾಟ ಮಾಡುವ ಗ್ಯಾಂಗ್ ಅನ್ನು ಪತ್ತೆಹಚ್ಚಿ, ಆ ಪ್ರಮಾಣಪತ್ರವನ್ನು ಖರೀದಿಸಿದ್ದ 14 ನಕಲಿ ವೈದ್ಯರುಗಳನ್ನು ಬಂಧಿಸಿದರು.

ಹಾಗೆಯೇ ಇದೇ ಏಪ್ರಿಲ್‌ನಲ್ಲಿ ಮಧ್ಯಪ್ರದೇಶದಲ್ಲಿ ಒಬ್ಬ ಬ್ರಿಟಿಷ್ ವ್ಯಕ್ತಿ ಹೃದ್ರೋಗ ತಜ್ಞರಂತೆ ನಟಿಸಿ ದಾಮೋಹ್‌ನ ಮಿಷನ್ ಆಸ್ಪತ್ರೆಯಲ್ಲಿ ಕನಿಷ್ಠ 15 ಶಸ್ತ್ರಚಿಕಿತ್ಸೆಗಳನ್ನು ನಡೆಸಿ ಅನೇಕ ಸಾವಿಗೆ ಕಾರಣವಾಗಿರುವುದು ಬಯಲಿಗೆ ಬಂದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...