ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಬಳಿಯ ಚೆಕ್ಪಾಯಿಂಟ್ನಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಪಂಜಾಬ್ ಪೊಲೀಸ್ ಸಿಬ್ಬಂದಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.
ಗುರುದಾಸ್ಪುರ ಜಿಲ್ಲೆಯ ದೋರಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಅಡಿಯಾನ್ ಗ್ರಾಮದಲ್ಲಿ ಕರ್ತವ್ಯದಲ್ಲಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಎಎಸ್ಐ ಗುರ್ನಾಮ್ ಸಿಂಗ್ ಮತ್ತು ಗೃಹರಕ್ಷಕ ದಳದ ಜವಾನ್ ಅಶೋಕ್ ಕುಮಾರ್ ಅವರು ಹೊರಠಾಣೆಯಾಗಿ ಕಾರ್ಯನಿರ್ವಹಿಸುವ ಕೋಣೆಯೊಳಗೆ ಶವಗಳು ಪತ್ತೆಯಾಗಿದ್ದಾರೆ.
ಇದನ್ನು ಓದಿದ್ದೀರಾ? ಭಾರತೀಯರನ್ನು ಕೊಂದರೆ ಬೆಲೆ ತೆರಬೇಕಾಗುತ್ತದೆ: ಪಾಕಿಸ್ತಾನಕ್ಕೆ ಶಶಿ ತರೂರ್ ಎಚ್ಚರಿಕೆ
ತಡರಾತ್ರಿ ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿರಬಹುದು ಎಂದು ಹೇಳಲಾಗಿದೆ. ಆದರೆ ಇನ್ನೂ ಸಿಬ್ಬಂದಿ ಪರಸ್ಪರ ಗುಂಡು ಹಾರಿಸಿಕೊಂಡಿದ್ದಾರೆಯೇ ಅಥವಾ ಅಪರಿಚಿತರು ಗುಂಡು ಹಾರಿಸಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗುರುದಾಸ್ಪುರ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಉಪ ಮಹಾನಿರೀಕ್ಷಕ (ಗಡಿ) ಸಂದೀಪ್ ಗೋಯೆಲ್, ಗುರುದಾಸ್ಪುರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜಿಂದರ್ ಮನ್ಹಾಸ್ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
“ಇಬ್ಬರ ಕೊಲೆ ಹೇಗೆ ನಡೆದಿದೆ, ಯಾರು ನಡೆಸಿದ್ದು ಎಂಬ ಬಗ್ಗೆ ನಾವು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದೇವೆ. ಪ್ರಕರಣದಲ್ಲಿ ಯಾರಾದರೂ ಭಾಗಿಯಾಗಿದ್ದರೆ, ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ವಿಧಿವಿಜ್ಞಾನ ತಂಡಗಳು ಸ್ಥಳವನ್ನು ಪರಿಶೀಲಿಸಿವೆ” ಎಂದು ಸಂದೀಪ್ ಗೋಯೆಲ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ: ಡೊನಾಲ್ಡ್ ಟ್ರಂಪ್ ಪುನರುಚ್ಚಾರ
ಇನ್ನು ಗುರುದಾಸ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಮಾತನಾಡಿ, “ಪೊಲೀಸರು ಅಪರಾಧ ಸ್ಥಳವನ್ನು ಸುತ್ತುವರೆದಿದ್ದಾರೆ” ಎಂದು ಹೇಳಿದ್ದಾರೆ. ದರೋಡೆಕೋರರು ಅಥವಾ ಭಯೋತ್ಪಾದಕರ ಕೃತ್ಯದ ಆಯಾಮದಲ್ಲಿಯೂ ತನಿಖೆ ಮುಂದುವರೆದಿದೆ. ಆರಂಭಿಕ ವರದಿಗಳು ಇಬ್ಬರು ಪೊಲೀಸರು ವಾಗ್ವಾದಕ್ಕೆ ಇಳಿದಿರಬಹುದು, ನಂತರ ಗುಂಡು ಹಾರಿಸಿದ್ದಾರೆ ಎಂಬ ಅನುಮಾನವನ್ನು ಹುಟ್ಟಿಸಿದೆ. ಆದರೆ ಪೊಲೀಸರು ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಮತ್ತು ಈವರೆಗೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಹೇಳಿದ್ದಾರೆ.
ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಯಾನ್ ಗ್ರಾಮವನ್ನು ‘ವೈಬ್ರಂಟ್ ವಿಲೇಜ್’ ಎಂದು ಗುರುತಿಸಿದೆ. ಕೇಂದ್ರ ಪ್ರಾಯೋಜಿತ ಯೋಜನೆ ಇದಾಗಿದ್ದು, ಚೀನಾ ಸೇರಿದಂತೆ ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶ, ಭೂತಾನ್ ಮತ್ತು ಮ್ಯಾನ್ಮಾರ್ ಗಡಿಯಲ್ಲಿರುವ ದೂರದ ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ ಮತ್ತು ಜನರ ಜೀವನ ಮಟ್ಟವನ್ನು ಸುಧಾರಿಸುವ ಗುರಿಯನ್ನು ವೈಬ್ರಂಟ್ ವಿಲೇಜ್ ಯೋಜನೆ ಹೊಂದಿದೆ. ಘಟನೆ ನಡೆದ ಪ್ರದೇಶವು ಭಾರತ-ಪಾಕ್ ಗಡಿಯಿಂದ ಸುಮಾರು 2 ಕಿ.ಮೀ ದೂರದಲ್ಲಿದೆ.





