ಭಾರತ-ಪಾಕ್ ಸಂಘರ್ಷ | ಮೇ 15ರವರೆಗೆ 24 ವಿಮಾನ ನಿಲ್ದಾಣಗಳು ಬಂದ್

Date:

ಶ್ರೀನಗರ ಮತ್ತು ಚಂಡೀಗಢ ಸೇರಿದಂತೆ ಭಾರತದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿನ ಕನಿಷ್ಠ 24 ವಿಮಾನ ನಿಲ್ದಾಣಗಳನ್ನು ಮೇ 15ರವರೆಗೆ ಮುಚ್ಚಲಾಗಿದೆ ಎಂದು ವರದಿಯಾಗಿದೆ.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಭಾರತ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ.

ಈ ಬೆನ್ನಲ್ಲೇ ಮೇ 10ರವರೆಗೆ ನಾಗರಿಕ ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿತ್ತು. ಇದೀಗ ಶುಕ್ರವಾರ ವಿಮಾನಯಾನ ಸಂಸ್ಥೆಗಳು ಮೇ 15ರವರೆಗೆ ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಿರುವುದರಿಂದ ತಮ್ಮ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ದೇಶಾದ್ಯಂತ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್‌

ಚಂಡೀಗಢ, ಶ್ರೀನಗರ, ಅಮೃತಸರ, ಲುಧಿಯಾನ, ಭುಂತರ್, ಕಿಶೆಂಗಢ, ಪಟಿಯಾಲ, ಶಿಮ್ಲಾ, ಧರ್ಮಶಾಲಾ, ಮತ್ತು ಬಟಿಂಡಾ, ಜೈಸಲ್ಮೇರ್, ಜೋಧ್‌ಪುರ, ಲೇಹ್, ಬಿಕಾನೇರ್, ಪಠಾಣ್‌ಕೋಟ್, ಜಮ್ಮು, ಜಾಮ್‌ನಗರ ಮತ್ತು ಭುಜ್ ಸೇರಿದಂತೆ ಇತರ ವಿಮಾನ ನಿಲ್ದಾಣಗಳು ಬಂದ್ ಆಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಏರ್ ಇಂಡಿಯಾ ಪೋಸ್ಟ್ ಮಾಡಿದ್ದು, “ಭಾರತದ ಹಲವು ವಿಮಾನ ನಿಲ್ದಾಣಗಳನ್ನು ಮುಚ್ಚುವ ಬಗ್ಗೆ ವಿಮಾನಯಾನ ಅಧಿಕಾರಿಗಳ ಅಧಿಸೂಚನೆ ನೀಡಿದೆ. ಇದಾದ ನಂತರ ಜಮ್ಮು, ಶ್ರೀನಗರ, ಲೇಹ್, ಜೋಧ್‌ಪುರ, ಅಮೃತಸರ, ಚಂಡೀಗಢ, ಭುಜ್, ಜಾಮ್‌ನಗರ ಮತ್ತು ರಾಜ್‌ಕೋಟ್‌ಗಳಿಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ಏರ್ ಇಂಡಿಯಾ ವಿಮಾನಗಳನ್ನು ಮೇ 15ರವರೆಗೆ ರದ್ದುಗೊಳಿಸಲಾಗಿದೆ” ಎಂದು ತಿಳಿಸಿದೆ.

ಇನ್ನು ಮಾನ್ಯ ಟಿಕೆಟ್‌ಗಳನ್ನು ಹೊಂದಿರುವ ಗ್ರಾಹಕರಿಗೆ ಪೂರ್ಣ ಮರುಪಾವತಿಯನ್ನು ನೀಡಲಾಗುವುದು ಎಂದು ಏರ್ ಇಂಡಿಯಾ ಹೇಳಿದೆ. ಎಲ್ಲಾ ವಿಮಾನಗಳು ಮೇ 15ರವರೆಗೆ ರದ್ದು ಮಾಡಲಾಗುತ್ತದೆ ಎಂದು ಇಂಡಿಗೋ ತಿಳಿಸಿದೆ.’

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...