ಪ್ರಸ್ತುತ ಇರಾನ್ನಲ್ಲಿ ವಿದ್ಯಾರ್ಥಿಗಳು, ಉದ್ಯಮಿಗಳು, ಕಾರ್ಮಿಕರು, ಯಾತ್ರಿಕರು, ನಾವಿಕರು ಮತ್ತು ಮೀನುಗಾರರು ಸೇರಿದಂತೆ ಸುಮಾರು 9,000 ಭಾರತೀಯ ಪ್ರಜೆಗಳಿದ್ದಾರೆ ಎಂದು ಸರ್ಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ.
ಇರಾನ್ನಲ್ಲಿರುವ ಭಾರತೀಯ ನಾಗರಿಕರ ವಿವರಗಳು ಮತ್ತು ಅವರ ಸುರಕ್ಷತೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪ್ರಶ್ನೆ ಕೇಳಲಾಗಿತ್ತು.
ಇದನ್ನು ಓದಿದ್ದೀರಾ? ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್ಕೀಪರ್’ ಈಗ ಇರಾನ್ನ ಪರಮೋಚ್ಚ ನಾಯಕ
ರಾಜ್ಯಸಭೆಯಲ್ಲಿ ಈ ಕುರಿತು ಲಿಖಿತ ಉತ್ತರ ನೀಡಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರ ಮಾರ್ಗರಿಟಾ, ಇರಾನ್ನಲ್ಲಿರುವ ಭಾರತೀಯ ಪ್ರಜೆಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಸ್ಥಳೀಯ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳನ್ನು ನಿರಂತರವಾಗಿ ಗಮನಿಸಬೇಕು ಮತ್ತು ಅಗತ್ಯವಿದ್ದರೆ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಭಾರತೀಯ ರಾಯಭಾರಿ ಕಚೇರಿ ಸಲಹೆ ನೀಡಿದೆ ಎಂದು ಹೇಳಿದ್ದಾರೆ.
ಭಾರತೀಯ ರಾಯಭಾರ ಕಚೇರಿಯಿಂದ ತುರ್ತು ಸಹಾಯವಾಣಿಗಳನ್ನು ಸಕ್ರಿಯಗೊಳಿಸಲಾಗಿದೆ. ಭಾರತೀಯರ ರಕ್ಷಣೆಗೆ ಸಂಬಂಧಿಸಿ ಇರಾನ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಸಚಿವರು ರಾಜ್ಯಸಭೆಗೆ ತಿಳಿಸಿದ್ದಾರೆ.





