ಕರೋಲ್ ಹಾಡುತ್ತಿದ್ದ ಮಕ್ಕಳ ಮೇಲೆ ದಾಳಿ; ಬಿಜೆಪಿ ಮುಖಂಡನ ಸಮರ್ಥನೆ – ಪೋಷಕರ ಆಕ್ರೋಶ

Date:

ಕೇರಳದಲ್ಲಿ ಕ್ರಿಸ್‍ಮಸ್ ಕರೋಲ್ ಹಾಡುತ್ತಿದ್ದ ಮಕ್ಕಳ ಗುಂಪಿನ ಮೇಲೆ ದಾಳಿ ನಡೆದಿದೆ. ದಾಳಿಯನ್ನು ಬಿಜೆಪಿ ಮುಖಂಡ ಸಿ.ಕೃಷ್ಣಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಅತನ ವಿರುದ್ಧ ಸಂತ್ರಸ್ತ ಮಕ್ಕಳ ಪೋಷಕರು ಪ್ರತಿಭಟನೆ ನಡಸಿದ್ದಾರೆ. ಬಿಜೆಪಿ ಮುಖಂಡನ ಧೋರಣೆಯನ್ನು ಸಾರ್ವಜನಿಕರೂ ಖಂಡಿಸಿದ್ದಾರೆ.

ಪಾಲಕ್ಕಾಡ್‌ನಲ್ಲಿ ಸಿಪಿಎಂ ಕ್ಷೇತ್ರ ಸಮಿತಿ ಕಚೇರಿಯಿಂದ ಕರೋಲ್ ಆರಂಭಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು. ಈ ವೇಳೆ, ಗುಂಪೊಂದು ಅವರ ಮೇಲೆ ದಾಳಿ ಮಾಡಿದೆ. ಆ ದಾಳಿಯನ್ನು ಸಮರ್ಥಿಸಿಕೊಂಡಿರುವ ಕೃಷ್ಣಕುಮಾರ್, “ಕರೋಲ್ ತಂಡ ಅಪರಾಧಿಗಳ ಗುಂಪಾಗಿದ್ದು, ಅವರು ಪಾನಮತ್ತರಾಗಿದ್ದರು” ಎಂದು ಹೇಳಿಕೆ ನೀಡಿದ್ದರು.

ಅವರ ಹೇಳಿಕೆಯು ಆಕ್ರೋಶಕ್ಕೆ ಗುರಿಯಾಗಿದೆ. ಮಕ್ಕಳ ಪೋಷಕರು ಮತ್ತು ಸಾರ್ವಜನಿಕರು ಕೃಷ್ಣಕುಮಾರ್ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. “ಮಕ್ಕಳು ಪ್ರತಿ ವರ್ಷದಂತೆ ಈ ವರ್ಷವೂ ಕರೋಲ್ ನಡೆಸುತ್ತಿದ್ದರು. ತಂಡದಲ್ಲಿ 10-15 ವರ್ಷ ವಯಸ್ಸಿನ ಮಕ್ಕಳು ಮಾತ್ರವೇ ಇದ್ದರು. ಅವರ ಮೇಲೆ ದಾಳಿ ನಡೆಸಲಾಗಿದೆ. ಅಲ್ಲದೆ, ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆ ವಿರುದ್ಧ ಜಿಲ್ಲೆಯ ಎಲ್ಲ 2500 ಘಟಕಗಳಲ್ಲಿ ಕೂಡ ಕರೋಲ್ ನಡೆಸಲಾಗುವುದು ಎಂದು ಡಿವೈಎಫ್‍ಐ ಘೋಷಿಸಿದೆ.

ಕ್ರಿಶ್ಚಿಯನ್ ಸಮುದಾಯದ ಬೆಂಬಲ ಪಡೆಯುವಲ್ಲಿ ವಿಫಲವಾಗಿರುವ ಬಿಜೆಪಿ, ಇಂತಹ ಪ್ರತೀಕಾರದ ದಾಳಿಗೆ ಇಳಿದಿದೆ. ರಾಜ್ಯದಲ್ಲಿ ಕೋಮು ಸಾಮರಸ್ಯ ಕದಡಲು ಯತ್ನಿಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಘಟನೆಯ ಸಂಬಂಧ ಆರ್‌ಎಸ್‌ಎಸ್‌ ಕಾರ್ಯಕರ್ತ ಅಶ್ವಿನ್ ರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...