ದಲಿತ ವಿದ್ಯಾರ್ಥಿ ನಾಯಕನ ಮೇಲೆ ಹಲ್ಲೆ; ಬಿಜೆಪಿ ಶಾಸಕನ ಪುತ್ರನ ವಿರುದ್ಧ ಎಫ್‌ಐಆರ್‌

Date:

ದಲಿತ ವಿದ್ಯಾರ್ಥಿ ನಾಯಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಗುಜರಾತ್ ಬಿಜೆಪಿ ಶಾಸಕ ಗೀತಾಬಾ ಜಡೇಜಾ ಅವರ ಪುತ್ರ ಗಣೇಶ್ ಜಡೇಜಾ ಮತ್ತು ಇತರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ ಹಲ್ಲೆಗೊಳಗಾದ ವಿದ್ಯಾರ್ಥಿ ನಾಯಕನ ತಂದೆಗೆ ಜುನಾಗಢದ ಬಿಜೆಪಿ ಮುಖಂಡನೊಬ್ಬ ರಾಜಿ ಮಾಡಿಕೊಳ್ಳಲು ಆಮಿಷವೊಡ್ಡಿರುವ ಆಡಿಯೋ ರೆಕಾರ್ಡಿಂಗ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಲಿತ ಮತ್ತು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಸಂಘಟನೆಯ ನಾಯಕ ಸಂಜಯ್ ಸೋಲಂಕಿ ಅವರನ್ನು ಬಿಜೆಪಿ ಶಾಸಕನ ಪುತ್ರ ಗಣೇಶ್ ಜಡೇಜಾ ಮತ್ತು ಇತರರು ಅಪಹರಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಜಯ್ ಅವರ ತಂದೆ ರಾಜು ಸೋಲಂಕಿ ಅವರಿಗೆ ಬಿಜೆಪಿ ಮುಖಂಡ, ಜುನಾಗಢದ ಉಪಮೇಯರ್ ಗಿರೀಶ್ ಕೋಟೆಚಾ ಕರೆ ಮಾಡಿ, ಆಮಿಷವೊಡ್ಡಿದ್ದಾರೆ ಎಂದು ಹೇಳಲಾಗಿದೆ.

“ನಿಮ್ಮ ಹುಡುಗ ಯಾರೊಂದಿಗಾದರೂ ಜಗಳವಾಡಿದ್ದಾನೆಯೇ? ರಾಜೀ ಮಾಡಿಕೊಳ್ಳಲು ನಿಮಗೆ ಸಿಗಬೇಕದ್ದು, ಸಿಗುತ್ತದೆ. ತೆಗೆದುಕೊಳ್ಳಬೇಕಾದದ್ದನ್ನು ತೆಗೆದುಕೊಳ್ಳಿ. ಆದರೆ ಸಮಸ್ಯೆಯನ್ನು ಪರಿಹರಿಸಿ” ಎಂದು ಕೋಟೆಚಾ ಆಮಿಷವೊಡ್ಡಿರುವುದು ಆಡಿಯೋ ರೆಕಾರ್ಡ್‌ನಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಕೋಪದಿಂದ ಪ್ರತಿಕ್ರಿಯಿಸಿದ ಸೋಲಂಕಿ, “ಒಮ್ಮೆ ನಾನು ಅವನನ್ನು (ಬಿಜೆಪಿ ಶಾಸಕನ ಪುತ್ರ) ಕೋಲಿನಿಂದ ಹೊಡೆದ ಬಳಿಕ, ಸಮಸ್ಯೆಯನ್ನು ಪರಿಹರಿಸುತ್ತೇನೆ” ಎಂದು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನ ಪ್ರಕಾರ, 26 ವರ್ಷದ ಸಂಜಯ್ ಸೋಲಂಕಿ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ, ಜಡೇಜಾ ಅವರ ಕಾರು ಆತನ ಮೇಲೆರಗಿದಂತೆ ಹಾದು ಹೋಗಿದೆ. ಹೀಗಾಗಿ, ಸೋಲಂಕಿ ಎಚ್ಚರಿಕೆಯಿಂದ ಚಲಾಯಿಸುವಂತೆ ಚಡೇಜಾಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ಜಡೇನಾ ಮತ್ತು ಅತನ ಸಂಗಡಿಗರು ಸೋಲಂಕಿಯನ್ನು ಹಿಂಬಾಲಿಸಿ, ಅತನ ಮನೆಯಲ್ಲಿಯೇ ಹಲ್ಲೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...