ನಮ್ಮ ಉಣ್ಣುವ ತಟ್ಟೆಗಳ ಮೇಲೆ ಬಿಜೆಪಿ ದಾಳಿ- ವಂದೇಭಾರತ್ ನಲ್ಲಿ ಮಾಂಸಾಹಾರ ನಿರ್ಬಂಧಕ್ಕೆ ಟಿಎಂಸಿ ಆಕ್ರೋಶ

Date:

ಕೋಲ್ಕತ್ತಾ (ಬಂಗಾಳ) ಮತ್ತು ಕಾಮಾಖ್ಯ (ಅಸ್ಸಾಂ) ನಡುವೆ ಹೊಸದಾಗಿ ಪ್ರಾರಂಭಿಸಲಾದ ವಂದೇ ಭಾರತ್ ಸ್ಲೀಪರ್ ರೈಲಿನ ಆಹಾರ ಮೆನುವಿನಲ್ಲಿ ಕೇವಲ ಸಸ್ಯಾಹಾರ ಮಾತ್ರವೇ ಇದ್ದು, ಮಾಂಸಾಹಾರವನ್ನು ನಿರ್ಬಂಧಿಸಲಾಗಿದೆ. ಕೇಂದ್ರ ಸರ್ಕಾರದ ಈ ಧೋರಣೆಯನ್ನು ಬಂಗಾಳದ ಆಡಳಿತಾರೂಢ ಟಿಎಂಸಿ ಖಂಡಿಸಿದೆ. ‘ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜನರ ತಟ್ಟೆಗಳ ಮೇಲೆ ಅನೈತಿಕ ದಾಳಿ ನಡೆಸಿದೆ. ಬಂಗಾಳದ ಆಹಾರ ಸಂಸ್ಕೃತಿಗೆ ವಿರುದ್ಧವಾಗಿ ತಮ್ಮ ಧೋರಣೆಯನ್ನು ಹೇರುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಬಂಗಾಳ ಮತ್ತು ಅಸ್ಸಾಂನಲ್ಲಿ ಮೀನು ಮತ್ತು ಮಾಂಸವು ಪ್ರಧಾನ ಆಹಾರವಾಗಿದೆ. ಆದರೂ, ಬಂಗಾಳದಲ್ಲಿ ಕಾರ್ಯನಿರ್ವಹಿಸುವ ರೈಲಿನಲ್ಲಿ ಮಾಂಸಾಹಾರಿ ಆಯ್ಕೆಗಳನ್ನು ನಿರ್ಬಂಧಿಸಿ, ಏಕರೂಪದ ಆಹಾರ ಪದ್ಧತಿಗಳನ್ನು ಹೇರುತ್ತಿದೆ. ಮೊದಲು ಅವರು ನಮ್ಮ ಮತಗಳ ಮೇಲೆ ದಾಳಿ ನಡೆಸಿದರು. ಈಗ, ಅವರು ನಮ್ಮ ತಟ್ಟೆಗಳ ಮೇಲೆ ಅನೈತಿಕ ಪೊಲೀಸ್‌ಗಿರಿ (ದಾಳಿ) ನಡೆಸುತ್ತಿದ್ದಾರೆ” ಎಂದು ಟಿಎಂಸಿ ಕಿಡಿಕಾರಿದೆ.

“ಕೆಲವೇ ದಿನಗಳ ಹಿಂದೆ, ಪ್ರಧಾನಿ ಮೋದಿ ಬಂಗಾಳಕ್ಕೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಒದಗಿಸುತ್ತಿರುವ ಬಗ್ಗೆ ಹೆಮ್ಮೆಪಡುತ್ತಿದ್ದರು. ಆದರೆ, ಬಂಗಾಳದಿಂದ ಅಸ್ಸಾಂಗೆ ಚಲಿಸುವ ವಂದೇ ಭಾರತ್ ರೈಲಿನಲ್ಲಿ ಮೀನು ಮತ್ತು ಮಾಂಸವನ್ನು ಮೆನುವಿನಿಂದ ತೆಗೆದುಹಾಕಲಾಗಿದೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಎರಡರಲ್ಲೂ ಮಾಂಸಾಹಾರಿ ಆಹಾರವು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಜನರು ಮಾಂಸಾಹಾರಿ ಆಹಾರವನ್ನು ಪ್ರೀತಿಸುವ ಈ ಎರಡು ಪ್ರದೇಶಗಳನ್ನು ಸಂಪರ್ಕಿಸುವ ರೈಲು ಈಗ ಸಸ್ಯಾಹಾರಿ ಆಯ್ಕೆಗಳನ್ನು ಮಾತ್ರ ನೀಡುತ್ತಿದೆ. ಇದು ಸೈದ್ಧಾಂತಿಕ ಮತ್ತು ಏಕರೂಪತೆಯ ಹೇರಿಕೆಯಾಗಿದೆ” ಎಂದು ದೂರಿದೆ.

“ಪ್ರಧಾನಿಯವರು ಮೀನು ತಿನ್ನುವ ಬಂಗಾಳಿಗಳನ್ನು ‘ಮೊಘಲರು’ ಎಂದು ಅಪಹಾಸ್ಯ ಮಾಡುತ್ತಾರೆ. ದೆಹಲಿಯಲ್ಲಿ ಮೀನು ನಿಷೇಧಿಸುವ ಆದೇಶಗಳನ್ನು ಹೊರಡಿಸಲಾಗಿದೆ. ಚಿಕನ್ ಮಾರಾಟ ಮಾಡಿದ್ದಕ್ಕಾಗಿ ಬಡ ಬೀದಿ ವ್ಯಾಪಾರಿಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ನಾವು ಅದನ್ನೇ ತಿನ್ನುತ್ತಿದ್ದೇವೆ, ನಾವು ಅದನ್ನೇ ಧರಿಸುತ್ತೇವೆ. ನಾವು ಯಾರನ್ನು ಪ್ರೀತಿಸುತ್ತೇವೆ. ನಾವು ಹೇಗೆ ಬದುಕುತ್ತೇವೆ. ಅದು ನಮ್ಮ ಆಯ್ಕೆ. ಆದರೆ, ನಮ್ಮ ಬಹುತ್ವದ ಮೇಲೆ ಕೋಮುವಾದಿಗಳು ಏಕರೂಪತೆಯನ್ನು ಹೇರುತ್ತಿದ್ದಾರೆ” ಎಂದು ಟಿಎಂಸಿ ಆಕ್ರೋಶ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...