ಭಾರತೀಯ ಕರಾವಳಿಯಲ್ಲಿ ಇಸ್ರೇಲ್ ಹಡಗಿನ ಮೇಲೆ ಡ್ರೋಣ್ ದಾಳಿ

Date:

ಭಾರತದ ನೈಋತ್ಯ ಗುಜರಾತ್‌ನ ವೆರಾವಲ್ ಕರಾವಳಿಯಲ್ಲಿ ಇಸ್ರೇಲ್‌ಗೆ ಸಂಬಂಧಿಸಿದ ಹಡಗಿನ ಮೇಲೆ ಅಪರಿಚಿತ ಡ್ರೋಣ್ ದಾಳಿ ನಡೆಸಿದೆ ಎಂದು ನೌಕಾಪಡೆಯ ಎರಡು ಏಜನ್ಸಿಗಳು ತಿಳಿಸಿವೆ. ಆದರೆ ಘಟನೆಯಲ್ಲಿ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.

ಯುನೈಟೆಡ್ ಕಿಂಗ್‌ಡಮ್ ಮೆರೈನ್ ಟ್ರೇಡ್ ಆಪರೇಷನ್ಸ್ ನೌಕಾಸಂಸ್ಥೆ(ಯುಕೆಎಂಟಿಒ) ಪ್ರಕಾರ, ಈ ಘಟನೆಯು ಭಾರತದ ವೆರಾವಲ್‌ನಿಂದ ನೈಋತ್ಯಕ್ಕೆ ಇರುವ 200 ಕಿಮೀ ದೂರದಲ್ಲಿ ಸಂಭವಿಸಿದೆ.

ಡ್ರೋಣ್ ದಾಳಿಯಿಂದ ಹಡಗಿನಲ್ಲಿ ಬೆಂಕಿ ಹೊತ್ತುಕೊಂಡಿದೆ. ಮಾನವರಹಿತ ವೈಮಾನಿಕ ದಾಳಿಯಿಂದ (ಯುಎಎಸ್) ಹಡಗಿನ ಮೇಲೆ ಸ್ಫೋಟ ಉಂಟಾಗಿದೆ ಎಂದು ಯುಕೆಎಂಟಿಒ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ಲೈಬೀರಿಯಾ- ಫ್ಲಾಗಡ್ ರಾಸಾಯನಿಕ ಉತ್ಪನ್ನಗಳ ಟ್ಯಾಂಕರ್ ಇಸ್ರೇಲ್ ಸಂಯೋಜಿತವಾಗಿದೆ. ಲೈಬೀರಿಯನ್ ಫ್ಲಾಗಡ್ ರಾಸಾಯನಿಕ ಉತ್ಪನ್ನಗಳ ಟ್ಯಾಂಕರ್‌ನಲ್ಲಿ ಹೊತ್ತುಕೊಂಡಿದ್ದ ಬೆಂಕಿಯನ್ನು ಹಡಗಿನ ಸಿಬ್ಬಂದಿ ಸಾವುನೋವುಗಳಿಲ್ಲದೆ ನಂದಿಸಿದ್ದಾರೆ. ಹಡಗಿಗೆ ತುಸು ಹಾನಿಯಾಗಿದ್ದು, ಸ್ವಲ್ಪ ನೀರು ಕೂಡ ಒಳಗೆ ಪ್ರವೇಶಿಸಿದೆ” ಎಂದು ಯುಕೆಎಂಟಿಒ ತಿಳಿಸಿದೆ.

ಯುಕೆಎಂಟಿಒ ಶನಿವಾರದಂದು ಅಧಿಸೂಚನೆಯನ್ನು ಹೊರಡಿಸಿದ್ದು, ಆ ಪ್ರದೇಶದಿಂದ ಹಡಗುಗಳು ಸಾಗದಂತೆ ಎಚ್ಚರಿಕೆ ನೀಡಿದೆ. ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಯುಕೆಎಂಟಿಒ ತಿಳಿಸಿದೆ.

ಡಿ.18ರಂದು ಮಾಲ್ಟಾ ಫ್ಲಾಗಡ್‌ ಸರಕು ಸಾಗಣೆ ಹಡಗನ್ನು ಅಪಹರಿಸಲು ಯತ್ನಿಸುವಾಗ ಭಾರತೀಯ ನೌಕಾಪಡೆ ಸಹಾಯ ಮಾಡಿದ ಕೆಲವು ದಿನಗಳ ನಂತರ ಈ ಘಟನೆ ಸಂಭವಿಸಿದೆ. ಅರೇಬಿಕ್ ಸಮುದ್ರದಲ್ಲಿ ಎಂವಿ ರುಯೆನ್ ಎಂಬ ಹಡಗಿಗೆ ಆರು ಕಡಲ್ಗಳ್ಳರು ಅಕ್ರಮವಾಗಿ ಪ್ರವೇಶಿಸಿದ್ದರು. ಇದನ್ನು ಭಾರತೀಯ ನೌಕಾಪಡೆ ಸಿಬ್ಬಂದಿ ಅಪಹರಣ ಯತ್ನವನ್ನು ವಿಫಲಗೊಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...