25 ಪುಸ್ತಕಗಳ ನಿಷೇಧ: ‘ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ’

Date:

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರದ ವಿರುದ್ಧ ದ್ವೇಷ ಅಥವಾ ತಿರಸ್ಕಾರ ಭಾವವನ್ನು ಪ್ರಚೋದಿಸುವ ಅಂಶಗಳನ್ನು ಹೊಂದಿವೆ ಎಂಬ ಆರೋಪದ ಮೇಲೆ 25 ಪುಸ್ತಕಗಳನ್ನು ಅಲ್ಲಿನ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ನಿಷೇಧಿಸಿದ್ದಾರೆ. ಮನೋಜ್ ಸಿನ್ಹಾ ಅವರ ಕ್ರಮವು ಭಾರತೀಯ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಸರ್ಕಾರದ ವಿರುದ್ಧ ದ್ವೇಷ ಬಿತ್ತುವ ಅಥವಾ ತಿರಸ್ಕಾರವನ್ನು ಪ್ರಚೋದಿಸುವ ಕಂಟೆಂಟ್‌ಗಳನ್ನು ಹೊಂದಿರುವ ಪುಸ್ತಕಗಳು ಅಥವಾ ಪ್ರಕಟಣೆಗಳನ್ನು ಜಪ್ತಿ ಮಾಡಲು ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 98 ಅವಕಾಶ ನೀಡುತ್ತದೆ. ಇದೇ ಸೆಕ್ಷನ್‌ಅನ್ನು ಬಳಸಿಕೊಂಡು ಲೆಫ್ಟಿನೆಂಟ್‌ ಗವರ್ನರ್ ಸಿನ್ಹಾ ಅವರು 25 ಪುಸ್ತಕಗಳನ್ನು ನಿಷೇಧಿಸಿದ್ದಾರೆ.

”ನಿಷೇಧಿತ ಕೃತಿಗಳು ದೇಶದ ವಿರುದ್ದ ಹಿಂಸಾತ್ಮಕ ಕೃತ್ಯಗಳಿಗೆ ಪ್ರಚೋದನೆ ನೀಡುತ್ತವೆ. ಪ್ರತ್ಯೇಕವಾದವನ್ನು ಉತ್ತೇಜಿಸುತ್ತವೆ. ಭಯೋತ್ಪಾದನೆಯ ವೈಭವೀಕರಣ ಹಾಗೂ ಇತಿಹಾಸವನ್ನು ತಿರುಚಿದ ನಿರೂಪಣೆಗಳನ್ನು ಹೊಂದಿವೆ. ಹೀಗಾಗಿ, ಬಿಎನ್‌ಎಸ್‌ ಸೆಕ್ಷನ್ 98ರ ಅಡಿಯಲ್ಲಿ ಪುಸ್ತಕಗಳನ್ನು ನಿಷೇಧಿಸಲಾಗಿದೆ” ಎಂದು ಸಿನ್ಹಾ ಅವರ ಕ್ರಮವನ್ನು ಗೃಹ ಇಲಾಖೆ ಸಮರ್ಥಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿನ್ಹಾ ಅವರು ನಿಷೇಧಿಸಿರುವ ಪುಸ್ತಕಗಳಲ್ಲಿ ಹಲವು ಪುಸ್ತಕಗಳು ಪ್ರಮುಖ ಪತ್ರಕರ್ತರು, ಪ್ರಸಿದ್ಧ ಇತಿಹಾಸಕಾರರು ಹಾಗೂ ರಾಜಕೀಯ ವಿಶ್ಲೇಷಕರಾದ ಎ.ಜಿ ನೂರಾನಿ ಮತ್ತು ಸುಮಂತ್ರ ಬೋಸ್ ಅವರಂತಹ ಲೇಖಕರು ರಚಿಸಿರುವ ಕೃತಿಗಳಾಗಿವೆ. ಈ ಪುಸ್ತಕಗಳು ಪ್ರಪಂಚದಾದ್ಯಂತ ಗೌರವಿಸಲ್ಪಟ್ಟ ಪ್ರಕಾಶನ ಸಂಸ್ಥೆಗಳಾದ ಪೆಂಗ್ವಿನ್, ಹಾರ್ಪರ್‌ಕಾಲಿನ್ಸ್ ಹಾಗೂ ರೌಟ್‌ಲೆಡ್ಜ್ ಪ್ರಕಟಿಸಿದ ಕೃತಿಗಳಾಗಿವೆ. ಆದರೆ, ಅವುಗಳನ್ನು ಕೇಂದ್ರ ಸರ್ಕಾರದ ಆಣತಿಯಲ್ಲಿ ಕೆಲಸ ಮಾಡುತ್ತಿರುವ ಸಿನ್ಹಾ ಅವರು ಉದ್ದೇಶಪೂರ್ವಕವಾಗಿ ನಿಷೇಧಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇ‍ಷ ಸ್ಥಾನಮಾನ ನೀಡಿದ್ದ ಸಂವಿಧಾನದ ಆರ್ಟಿಕಲ್ 370ಅನ್ನು ರದ್ದುಪಡಿಸಿದ ಆರು ವರ್ಷಗಳ ವಾರ್ಷಿಕೋತ್ಸವದ ದಿನದಂದು ಗೃಹ ಇಲಾಖೆಯು ಪುಸ್ತಕಗಳನ್ನು ರದ್ದುಗೊಳಿಸಿರುವುದು ಆಕ್ರೋಶ ಮತ್ತು ವಿವಾದಕ್ಕೆ ಕಾರಣವಾಗಿದೆ.

ಈ ಲೇಖನ ಓದಿದ್ದೀರಾ?: ತಮಿಳುನಾಡಿನ ಜಾತಿ ತಾರತಮ್ಯವೂ; ಕರಾಳ ಮುಖ ಬಿಚ್ಚಿಟ್ಟ ದಲಿತ ಇಂಜಿನಿಯರ್ ಕೆವಿನ್ ಹತ್ಯೆಯೂ

ಪುಸ್ತಕ ನಿಷೇಧದ ಬಗ್ಗೆ ಪ್ರತಿಕ್ರಿಯಿಸಿರುವ ಜಾಗತಿಕ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಡಿಯಾ, ”ಈ ಕೃತಿಗಳು ನಿಖರ ಮಾಹಿತಿಗಳನ್ನು ಒಳಗೊಂಡಿದ್ದು, ಯಾವುದೇ ಹಿಂಸಾತ್ಮಕ ಅಥವಾ ಪ್ರಚೋದನಾತ್ಮಕ ಬರವಣಿಗೆಗಳನ್ನು ಹೊಂದಿಲ್ಲ. ಇವು ಭಯೋತ್ಪಾದನಾ ಕೈಪಿಡಿಗಳಲ್ಲ. ಸರಿಯಾದ ಕಾನೂನು ಪ್ರಕ್ರಿಯೆ ಇಲ್ಲದೆ ಕೇವಲ ಆದೇಶಗಳ ಮೂಲಕ ಕೃತಿಗಳನ್ನು ನಿಷೇಧಿಸುವುದು ಸಮ್ಮತವಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

”ಇದು ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರಕ್ಕೆ ಬೆದರಿಕೆ” ಎಂದು ಇಂಟರ್ನೆಟ್ ಫ್ರೀಡಂ ಫೌಂಡೇಶನ್ (IFF) ಬಣ್ಣಿಸಿದೆ.

‘ಒಂದು ನಿರ್ಧಿಷ್ಟ ದೃಷ್ಟಿಕೋನವನ್ನು ಪ್ರತಿಪಾದಿಸುವುದು ಅಥವಾ ಅಭಿವ್ಯಕ್ತಪಡಿಸುವುದು ಯಾವುದೇ ರೀತಿಯಲ್ಲೂ ಹಿಂಸಾಚಾರಕ್ಕೆ ಪ್ರಚೋದನೆಯಾಗುವುದಿಲ್ಲ’ ಎಂಬುದನ್ನು ಸುಪ್ರೀಂ ಕೋರ್ಟ್‌ ಹಲವು ಬಾರಿ ಸ್ಪಷ್ಟಪಡಿಸಿದೆ. ಆದರೂ, ಗೃಹ ಇಲಾಖೆಯು ತನ್ನ ಸಿದ್ಧಾಂತದ ವಿರುದ್ಧದ ಟೀಕೆ ಮತ್ತು ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಹವಣಿಸುತ್ತಿದೆ ಎಂದು ಹಲವರು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...