ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

Date:

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಢಾಕಾ ಪೊಲೀಸರ ತಂಡ (ಢಾಕಾ ಮೆಟ್ರೋಪಾಲಿಟನ್ ಪೊಲೀಸ್ ಡಿಟೆಕ್ಟಿವ್ ಬ್ರಾಂಚ್) ಭಾರತಕ್ಕೆ ಭೇಟಿ ನೀಡಲಿದೆ.

ಭಾರತೀಯ ಪೊಲೀಸರ ನಾಲ್ಕು ಸದಸ್ಯರ ತಂಡವು ಪ್ರಸ್ತುತ ಕೊಲೆ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಕೋಲ್ಕತ್ತಾದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಮೇ 12ರಂದು ಢಾಕಾದಿಂದ ಹೊರಟ ಅನ್ವರುಲ್ ಅಜೀಮ್ ಬಳಿಕ ನಾಪತ್ತೆಯಾಗಿದ್ದರು.

ಇದನ್ನು ಓದಿದ್ದೀರಾ?  ಬಾಂಗ್ಲಾದೇಶದ ಸಂಸದನ ಹತ್ಯೆಗೆ 5 ಕೋಟಿ ರೂ. ಸುಪಾರಿ: ಪ್ರಕರಣ ಭೇದಿಸಿದ ಪೊಲೀಸರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನ್ವರುಲ್ ಅಜೀಮ್ ಬಾಂಗ್ಲಾದೇಶದ ಜೆನೈದಾ-4 ವಿಭಾಗದಿಂದ ಮೂರು ಬಾರಿ ಸಂಸದರಾಗಿರುವ ಅವಾಮಿ ಲೀಗ್‌ನ ಕಲಿಗಂಜ್ ಉಪ-ಜಿಲ್ಲಾ ಘಟಕದ ಅಧ್ಯಕ್ಷರೂ ಆಗಿದ್ದಾರೆ.

ಉತ್ತರ ಕೋಲ್ಕತ್ತಾದ ಬಾರಾನಗರದ ನಿವಾಸಿ ಮತ್ತು ಬಾಂಗ್ಲಾದೇಶದ ರಾಜಕಾರಣಿಯ ಪರಿಚಯಸ್ಥ ಗೋಪಾಲ್ ಬಿಸ್ವಾಸ್ ಮೇ 18ರಂದು ಸ್ಥಳೀಯ ಪೊಲೀಸರಿಗೆ ದೂರು ನೀಡಿದ ನಂತರ ಅನ್ವರುಲ್ ಅಜೀಮ್ ಹುಡುಕಾಟ ಆರಂಭಿಸಲಾಗಿತ್ತು.

ಇದನ್ನು ಓದಿದ್ದೀರಾ?  8 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ತುಂಡು ತುಂಡಾದ ದೇಹ ಕೋಲ್ಕತ್ತಾದಲ್ಲಿ ಪತ್ತೆ

ಕೋಲ್ಕತ್ತಾ ಪೊಲೀಸರ ಪ್ರಕಾರ, ಬಾಂಗ್ಲಾದೇಶಿ ಸಂಸದರ ಕತ್ತು ಹಿಸುಕಿ ಕೊಲೆ ಮಾಡಿದ ನಂತರ ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿ ವಿವಿಧ ಪ್ರದೇಶಗಳಲ್ಲಿ ಎಸೆಯಲಾಗಿದೆ ಎಂಬುವುದು ಸಾಂದರ್ಭಿಕ ಸಾಕ್ಷ್ಯಗಳಿಂದ ತಿಳಿದುಬಂದಿದೆ. ಆದರೆ ದೇಹ ಅಥವಾ ದೇಹದ ಭಾಗಗಳ ಕುರುಹುಗಳು ಇನ್ನೂ ಪತ್ತೆಯಾಗಿಲ್ಲ.

ಅನಾರ್ ಕ್ರೂರ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಾಂಗ್ಲಾದೇಶದ ನ್ಯಾಯಾಲಯವು ಶುಕ್ರವಾರ ಮೂವರು ಶಂಕಿತರನ್ನು ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಪಶ್ಚಿಮ ಬಂಗಾಳ ಪೊಲೀಸರು ಈ ಕೊಲೆಯಲ್ಲಿ ನಂಟು ಹೊಂದಿದ್ದ ಬಾಂಗ್ಲಾದೇಶಿಯನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...