ರಕ್ಷಣೆ ಕೋರಿದ ಬಾಂಗ್ಲಾ ಯುವತಿಯನ್ನು ಮತ್ತೆ ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ ಮಹಿಳಾ ಕಾನ್‌ಸ್ಟೆಬಲ್!

Date:

ವೇಶ್ಯಾವಾಟಿಕೆ ಜಾಲದಿಂದ ತಪ್ಪಿಸಿಕೊಂಡು ಬಂದು ರಕ್ಷಣೆ ಕೋರಿದ ಬಾಂಗ್ಲಾದೇಶದ ಯುವತಿಯನ್ನು ಮಹಿಳಾ ಕಾನ್‌ಸ್ಟೆಬಲ್ ಮತ್ತೆ ಅದೇ ಜಾಲಕ್ಕೆ ತಳ್ಳಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಬಲವಂತವಾಗಿ ವೇಶ್ಯಾವಾಟಿಕೆ ಮಾಡಿಸಲಾಗುತ್ತಿದೆ, ನನ್ನನ್ನು ಈ ಜಾಲದಿಂದ ರಕ್ಷಿಸಿ ಎಂದು ಕೋರಿ ರಸ್ಖಾನಾ ಪೊಲೀಸ್ ಠಾಣೆಗೆ ಬಾಂಗ್ಲಾದೇಶಿ ಯುವತಿ ಬಂದರೆ, ಮಹಿಳಾ ಕಾನ್‌ಸ್ಟೆಬಲ್ ಅದೇ ವೇಶ್ಯಾಗೃಹಕ್ಕೆ ವಾಪಸ್ ಕಳುಹಿಸಿದ್ದಾರೆ.

ಇದನ್ನು ಓದಿದ್ದೀರಾ? ವೇಶ್ಯಾವಾಟಿಕೆ ದಂಧೆ | ಪುನೀತ್ ಕೆರೆಹಳ್ಳಿ ಜೊತೆ ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕ ಯುವತಿ ಹೇಳಿದ್ದೇನು ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧ್ವಾರ್ ಪೇಠ್ ರೆಡ್-ಲೈಟ್ ಪ್ರದೇಶದಲ್ಲಿ ಬಲವಂತವಾಗಿ ವೇಶ್ಯಾವಾಟಿಕೆ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದರು. ತನ್ನನ್ನು ಕಳ್ಳಸಾಗಣೆ ಮಾಡಿ, ತನ್ನ ಇಚ್ಛೆಗೆ ವಿರುದ್ಧವಾಗಿ ಶೋಷಿಸಲಾಗುತ್ತಿದೆ ಎಂದು ತಿಳಿಸಿದ್ದರು.

ಆದರೆ ಕಳ್ಳಸಾಗಣೆ ಮತ್ತು ಶೋಷಣೆಯ ಸಂತ್ರಸ್ತೆಯನ್ನು ಮಹಿಳಾ ಕಾನ್‌ಸ್ಟೆಬಲ್‌ನಿಂದ ಹತ್ತಿರದ ಪೊಲೀಸ್ ಹೊರಠಾಣೆಗೆ ಕರೆದೊಯ್ಯಲಾಗಿದೆ. ಬಳಿಕ ವೇಶ್ಯಾಗೃಹದ ನಿರ್ವಾಹಕರೊಂದಿಗೆ ಚರ್ಚೆ ನಡೆಸಿ ಮತ್ತೆ ಅವರೊಂದಿಗೆ ಯುವತಿಯನ್ನು ಕಳಿಸಿದ್ದಾರೆ.

ಸ್ಥಳೀಯ ಹೋರಾಟ ಕಾರ್ಯಕರ್ತರು ಈ ಬಗ್ಗೆ ಪ್ರಶ್ನೆ ಎತ್ತಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಇದಾದ ಬಳಿಕ ಪುಣೆ ಪೊಲೀಸರು ಆಂತರಿಕ ತನಿಖೆಯನ್ನು ಪ್ರಾರಂಭಿಸಿದ್ದು, ತ್ವರಿತ ಕ್ರಮ ಕೈಗೊಂಡ ಉಪ ಪೊಲೀಸ್ ಆಯುಕ್ತ ಹೃಷಿಕೇಶ್ ರಾವಾಲೆ ಅವರು ಮನೀಷಾ ಪುಕಲೆ ಎಂದು ಗುರುತಿಸಲಾದ ಆರೋಪಿ ಮಹಿಳಾ ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಿದ್ದಾರೆ.

ಇದನ್ನು ಓದಿದ್ದೀರಾ? ಪೋಷಕರಿಂದಲೇ ಪೈಶಾಚಿಕ ಕೃತ್ಯ: ಮಗಳನ್ನು ವೇಶ್ಯಾವಾಟಿಕೆಗೆ ದೂಡಿ ದೌರ್ಜನ್ಯ

ಸದ್ಯ ಮಹಿಳಾ ಕಾನ್‌ಸ್ಟೆಬಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ಬರೀ ಅಮಾನತುಗೊಳಿಸುವುದಲ್ಲ, ಜೈಲು ಶಿಕ್ಷೆಯಾಗಬೇಕು” ಎಂದು ಕೆಲ ನೆಟ್ಟಿಗರು ಒತ್ತಾಯಿಸಿದ್ದಾರೆ. “ಸಾಮಾನ್ಯ ಜನರಾದರೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ. ಆದರೆ ಪೊಲೀಸರಿಗೆ ಬರೀ ಅಮಾನತು” ಎಂದೂ ಕೆಲವು ನೆಟ್ಟಿಗರು ಹೇಳಿದ್ದಾರೆ.

ಇನ್ನು ಕೆಲವರು, “ಮಹಿಳಾ ಕಾನ್‌ಸ್ಟೆಬಲ್ ಮೇಲಧಿಕಾರಿಗಳ ಆದೇಶವನ್ನು ಪಾಲಿಸುತ್ತಿದ್ದಾರೆ ಎಂದು ಕಾಣಿಸುತ್ತದೆ. ಯಾವುದೇ ವಿಷಯ ಕೈಮೀರಿ ಹೋದಾಗ ಮಹಿಳೆಯರನ್ನೇ ತಪ್ಪಿತಸ್ಥರನ್ನಾಗಿಸಲಾಗುತ್ತದೆ. ರಾಜಕೀಯವಾಗಿರಲಿ, ಸರ್ಕಾರಿ ಕಚೇರಿಗಳಾಗಿರಲಿ ಅಥವಾ ಬಹುರಾಷ್ಟ್ರೀಯ ಕಂಪನಿಯಾಗಲಿ, ಎಲ್ಲಾ ಕಡೆಗಳಲ್ಲಿ ನಡೆಯುವುದು ಇದುವೇ” ಎಂದು ಜೋಶ್ ಟಿಕೆ ಎಂಬ ನೆಟ್ಟಿಗರು ಅಭಿಪ್ರಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...