ಎಫ್‌ಡಿಐ ನಿಯಮ ಉಲ್ಲಂಘನೆ ಆರೋಪ: ‘ಬಿಬಿಸಿ ಇಂಡಿಯಾ’ಗೆ 3.44 ಕೋಟಿ ರೂ. ದಂಡ

Date:

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬ್ರಿಟಿಷ್ ಪ್ರಸರಣಾ ಸಂಸ್ಥೆ ‘ಬಿಬಿಸಿ ಇಂಡಿಯಾ’ಗೆ ಜಾರಿ ನಿರ್ದೇಶನಾಲಯ (ಇಡಿ) ಬರೋಬ್ಬರಿ 3.44 ಕೋಟಿ ರೂ. ದಂಡ ವಿಧಿಸಿದೆ.

ಬಿಬಿಸಿ ಸಂಸ್ಥೆಯ ಆದಾಯದ ಬಗ್ಗೆ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) 2013ರಲ್ಲಿ ಸಮೀಕ್ಷೆ ನಡೆಸಿತ್ತು. ಈ ವೇಳೆ, ಬಿಬಿಸಿ ಗುಂಪಿನ ವಿವಿಧ ಘಟಕಗಳು ವಿವರಿಸಿರುವ ಆದಾಯ ಮತ್ತು ಲಾಭಗಳು ಭಾರತದಲ್ಲಿ ಅವುಗಳ ಕಾರ್ಯಾಚರಣೆಯ ಪ್ರಮಾಣಕ್ಕೆ ಅನುಗುಣವಾಗಿಲ್ಲ. ಬಿಬಿಸಿ ವಿದೇಶಿ ಘಟಕಗಳು ಕೆಲವು ಹಣ ವರ್ಗಾವಣೆಗೆ ಸಂಬಂಧಿಸಿದ ತೆರಿಗೆಯನ್ನು ಪಾವತಿಸಿಲ್ಲ” ಎಂದು ಆರೋಪಿಸಿತ್ತು.

ಇದೇ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಬಿಬಿಸಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣದಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿ ತೀರ್ಪು ಪ್ರಕಟಿಸಿರುವ ಜಾತಿ ನಿರ್ದೇಶನಾಲಯ, ಬಿಬಿಸಿಗೆ 3.44 ಕೋಟಿ ರೂ. ದಂಡ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಚುನಾವಣಾ ಆಯುಕ್ತರ ನೇಮಕದಲ್ಲಿ ವಿವಾದವೇಕೆ? ಹಳೆಯ ಪ್ರಕ್ರಿಯೆಗೂ – ಹೊಸ ನೀತಿಗೂ ಇರುವ ವ್ಯತ್ಯಾಸವೇನು?

ಆದಾಗ್ಯೂ, ಇಡಿಯಿಂದ ತಮಗೆ ಯಾವುದೇ ಆದೇಶ ಬಂದಿಲ್ಲ ಎಂದು ಬಿಬಿಸಿ ಇಂಡಿಯಾ ಹೇಳಿಕೊಂಡಿದೆ. “ಭಾರತವೂ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಎಲ್ಲ ದೇಶಗಳಲ್ಲಿಯೂ ಅಲ್ಲಿನ ಕಾನೂನು ಮತ್ತು ನಿಯಮಗಳಿಗೆ ಅನುಗುಣವಾಗಿಯೇ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಇಡಿಯಿಂದ ಆದೇಶ ಬಂದಿಲ್ಲ. ಅದರ ಕುರಿತಾದ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತೇವೆ” ಎಂದು ಬಿಬಿಸಿ ಇಂಡಿಯಾ ಹೇಳಿದೆ.

ಗಮನಾರ್ಹವಾಗಿ, 2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ಹತ್ಯಾಕಾಂಡದಲ್ಲಿ ಸುಮಾರು 1,000 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಹೆಚ್ಚಿನವರು ಮುಸ್ಲಿಮರು. ಆ ಹತ್ಯಾಕಾಂಡದಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ, ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರಗಳ ಕುರಿತಾದ ಸಾಕ್ಷ್ಯಚಿತ್ರವನ್ನು ಬಿಬಿಸಿ ಇತ್ತೀಚೆಗೆ ಬಿಡುಗಡೆ ಮಾಡಿತ್ತು. ಆ ಸಾಕ್ಷ್ಯಾಚಿತ್ರ ಬಿಡುಗಡೆಯಾ ಬಳಿಕ, ಬಿಬಿಸಿ ವಿರುದ್ಧ ಹಲವಾರು ದಾಳಿಗಳು ನಡೆದಿವೆ. ಅಂತಹ ದಾಳಿಯಲ್ಲಿ ಸಿಬಿಡಿಟಿ ನಡೆಸಿದ ಸಮೀಕ್ಷಾ ದಾಳಿಯೂ ಒಂದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...