ಬಿಬಿಸಿ ತನಿಖಾ ವರದಿ: ಕುಂಭಮೇಳದಲ್ಲಿ ಗತಿಸಿದವರು ಕನಿಷ್ಠ 82 ಮಂದಿ

Date:

ಕಳೆದ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ನಡೆದ ಮೌನಿ ಅಮಾವಾಸ್ಯ ಮಹಾಕುಂಭ ಮೇಳ ಕಾಲ್ತುಳಿತದಲ್ಲಿ ಗತಿಸಿದವರ ಸಂಖ್ಯೆ ಕನಿಷ್ಠ 82 ಎಂದು ಬಿಬಿಸಿ ತನಿಖಾ ವರದಿ ಹೇಳಿದೆ. ಈ ಸಂಖ್ಯೆ 37 ಎಂದಿತ್ತು ಯೋಗಿ ಸರ್ಕಾರ.

ತಮ್ಮ ಸದಸ್ಯರೊಬ್ಬರನ್ನು ಕಾಲ್ತುಳಿತದಲ್ಲಿ ಕಳೆದುಕೊಂಡ ಕನಿಷ್ಠ ಇನ್ನೂ 50 ಕುಟುಂಬಗಳಿವೆ. ಈ ಸಾವುಗಳನ್ನು ಉತ್ತರ ಪ್ರದೇಶ ಸರ್ಕಾರ ಮಾನ್ಯ ಮಾಡಬೇಕೆಂಬ ನಿರೀಕ್ಷೆಯನ್ನು ಹೊಂದಿವೆ.

ಕಾಲ್ತುಳಿತದಲ್ಲಿ ಭಕ್ತಾದಿಗಳ ಸಾವಿನ ಸಂಖ್ಯೆ ಕುರಿತ ಮಾಹಿತಿಯನ್ನು ಉತ್ತರ ಪ್ರದೇಶ ಸರ್ಕಾರ ಮೊದಲ ದಿನ ಮುಚ್ಚಿಟ್ಟಿತ್ತು. ಮರು ದಿನ ಈ ಸಂಖ್ಯೆ 37 ಸಾವುಗಳು ಸಂಭವಿಸಿವೆ ಎಂದು ಹೇಳಿತ್ತು. ಈ ಸಂಖ್ಯೆಯನ್ನು ಮತ್ತೆ ಪರಿಷ್ಕರಿಸಲೇ ಇಲ್ಲ. ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿಯ ಪರಿಹಾರವನ್ನು ಪ್ರಕಟಿಸಿತ್ತು. 36 ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ. ಇತ್ತೀಚಿನ ಮಹಾಕುಂಭಮೇಳದಲ್ಲಿ ಗತಿಸಿದವರ ಒಟ್ಟು ಸಂಖ್ಯೆಯನ್ನು ಬಹಿರಂಗಪಡಿಸುವಂತೆ ಅಲಹಾಬಾದ್ ಹೈಕೋರ್ಟು ಇತ್ತೀಚೆಗೆ ಸರ್ಕಾರಕ್ಕೆ ಸೂಚಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐದು ಲಕ್ಷ ರೂಪಾಯಿ ನಗದು ಪರಿಹಾರ ಪಡೆದಿರುವ 26 ಕುಟುಂಬಗಳನ್ನು ಭೇಟಿಯಾಗಿರುವುದಾಗಿ ಬಿಬಿಸಿ ತನಿಖಾ ವರದಿ ಹೇಳಿದೆ. ಈ 26 ಮಂದಿಯ ಸಾವುಗಳನ್ನು ಕುಂಭಮೇಳದ ಕಾಲ್ತುಳಿತದಲ್ಲಿ ಘಟಿಸಿದ ಸಾವುಗಳೆಂದು ಉತ್ತರ ಪ್ರದೇಶ ಸರ್ಕಾರ ಮಾನ್ಯ ಮಾಡಿಲ್ಲ. ಈ 26 ಸಾವುಗಳನ್ನು ಹಠಾತ್ತನೆ ಆರೋಗ್ಯ ಹದಗೆಟ್ಟು ಮೃತಪಟ್ಟವರೆಂದು ಮಾನ್ಯ ಮಾಡಿದೆ. ಕರ್ನಾಟಕವೂ ಸೇರಿದಂತೆ 11 ರಾಜ್ಯಗಳ 50 ಜಿಲ್ಲೆಗಳ 100 ಕುಟುಂಬಗಳನ್ನು ಭೇಟಿಯಾಗಿ ಸಿದ್ಧಪಡಿಸಿರುವ ಈ ತನಿಖಾ ವರದಿಯು ಕನಿಷ್ಠ ಪಕ್ಷ 82 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿರುವುದಾಗಿ ತಿಳಿಸಿದೆ.

45 ದಿನಗಳ ಕಾಲ ನಡೆದ ಮಹಾಕುಂಭ ಮೇಳ ಭಾರೀ ಯಶಸ್ವಿಯಾಗಿದ್ದು, 66 ಕೋಟಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಮೇಳದಲ್ಲಿ ಒಟ್ಟು 7,000 ಕೋಟಿ ರೂಪಾಯಿಯಷ್ಟು ಸಾರ್ವಜನಿಕರ ಹಣ ವ್ಯಯವಾಗಿದೆ ಎಂದು ಕೇಂದ್ರ ಸರ್ಕಾರ ಮತ್ತು ಉತ್ತರಪ್ರದೇಶ ಸರ್ಕಾರ ಹೇಳಿಕೆ ನೀಡಿದ್ದವು.

ಮೇಳದ ನೂಕುನುಗ್ಗಲು ಕಾಲ್ತುಳಿತದಲ್ಲಿ 30 ಮಂದಿ ಮೃತಪಟ್ಟಿದ್ದು, 29 ದೇಹಗಳನ್ನು ಗುರುತಿಸಲಾಗಿದೆ ಎಂದು ಕಳೆದ ಫೆಬ್ರವರಿ 19ರಂದು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಅವರು ಹೇಳಿಕೆ ನೀಡಿದ್ದರು. ಜನಸಂದಣಿಯ ಕೆಲವು ‘ಒತ್ತಡ ಬಿಂದು’ಗಳಲ್ಲಿ ಸ್ವಲ್ಪಮಟ್ಟಿಗಿನ ತ್ರಾಸು ಕಂಡುಬಂದಿತು ಎಂದಿದ್ದರು. ಸಾವುಗಳು ಜರುಗಿದ್ದು ಇಂತಹ ನಾಲ್ಕು ‘ಒತ್ತಡಬಿಂದು’ಗಳಲ್ಲಿ ಎಂದು ತನಿಖಾ ವರದಿ ತಿಳಿಸಿದೆ.

ಈ ಲೇಖನ ಓದಿದ್ದೀರಾ?: ಬೆಂಗಳೂರು ದುರಂತ | ಭೀಕರ ಘಟನೆಗೆ ಏನೆಲ್ಲ ಕಾರಣಗಳು– ಸಂಪೂರ್ಣ ವರದಿ

ತನಿಖಾ ವರದಿಯು ಕುಂಭಮೇಳದ ಮೃತರನ್ನು ಮೂರು ಭಾಗಗಳಾಗಿ ವರ್ಗೀಕರಿಸಿದೆ. ತಲಾ 25 ಲಕ್ಷ ರುಪಾಯಿಗಳ ಪರಿಹಾರ ಪಡೆದ 35 ಮೃತರ ಕುಟುಂಬಗಳವರು. ಈ ಸಾವುಗಳು ಕುಂಭಮೇಳದ ನೂಕುನುಗ್ಗಲಿನಲ್ಲಿ ಜರುಗಿವೆ ಎಂದು ಉತ್ತರ ಪ್ರದೇಶ ಸರ್ಕಾರ ಅಧಿಕೃತವಾಗಿ ಗುರುತಿಸಿದ ವರ್ಗವಿದು. ತಲಾ ಐದು ಲಕ್ಷ ರುಪಾಯಿ ನಗದು ಪರಿಹಾರ ಪಡೆದ ವರ್ಗ. ಈ ವರ್ಗದ ಸಾವುಗಳನ್ನು ಉತ್ತರ ಪ್ರದೇಶ ಸರ್ಕಾರ ಮಾನ್ಯ ಮಾಡಿಲ್ಲ. ಯಾವುದೇ ಪರಿಹಾರ ದೊರೆಯದಿರುವುದು ಮೂರನೆಯ ವರ್ಗ.

ಕುಂಭ ಕಾಲ್ತುಳಿತದಲ್ಲಿ ಮೃತಪಟ್ಟವರ ಕನಿಷ್ಠ 19 ಕುಟುಂಬಗಳಿಗೆ ಯಾವುದೇ ಪರಿಹಾರ ಸಿಕ್ಕಿಲ್ಲವೆಂದು ತನಿಖೆಯು ತಿಳಿಸಿದೆ.

ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಇನ್ನೂ ದೊಡ್ಡದು. ಆದರೆ, ಈ ಸಂಖ್ಯೆಯನ್ನು ತಾನು 82ಕ್ಕೆ ನಿಲ್ಲಿಸುತ್ತಿರುವುದಾಗಿ ಬಿಬಿಸಿ ತಿಳಿಸಿದೆ. 82 ಮಂದಿ ಮೃತಪಟ್ಟಿರುವ ಕುರಿತು ತನ್ನ ಬಳಿ ಪ್ರತ್ಯಕ್ಷ ಸಾಕ್ಷಿಗಳು ಮತ್ತು ಅಲ್ಲಗಳೆಯಲಾಗದಷ್ಟು ಗಟ್ಟಿ ಪುರಾವೆಗಳು ಇರುವುದಾಗಿ ಹೇಳಿದೆ.

ಮೃತರ ಕುಟುಂಬಗಳ ಜೊತೆಗಿನ ಸಂಭಾಷಣೆ, ಛಾಯಾಚಿತ್ರಗಳು ಹಾಗೂ ಪ್ರತ್ಯಕ್ಷ ಸಾಕ್ಷಿಗಳನ್ನು ತನಿಖೆಯು ದಾಖಲಿಸಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...