ಇಶಾನ್ ಕಿಶನ್-ಶ್ರೇಯಸ್ ಅಯ್ಯರ್‌ರನ್ನು ಹೊರಗಿಟ್ಟ ಬಿಸಿಸಿಐ; ‘ಅವರ ಮನಸ್ಸಿನಲ್ಲಿ ಏನಿದೆ?’ ಎಂದ ಹರ್ಭಜನ್

Date:

ಭಾರತದ ಅಪೆಕ್ಸ್ ಕ್ರಿಕೆಟ್ ಬೋರ್ಡ್ ಪ್ರಕಟಿಸಿದ ಆಟಗಾರರ ಪಟ್ಟಿಯಲ್ಲಿ ಶೇಯಸ್‌ ಅಯ್ಯರ್ ಮತ್ತು ಇಶಾನ್ ಕಿಶನ್‌ರನ್ನು ಕೈಬಿಟ್ಟಿರುವ ಬಿಸಿಸಿಐ ವಿರುದ್ಧ ಭಾರತ ತಂಡದ ಮಾಜಿ ಸ್ಪನ್ನರ್ ಹರ್ಭಜನ್ ಸಿಂಗ್‌ ಬೇಸರ ವ್ಯಕ್ತಪಡಿಸಿದ್ದಾರೆ. ಅವರನ್ನು ಹೊರಗಿಟ್ಟಿರುವುದು ಕ್ರಿಕೆಟ್‌ ಹಾದಿಯ ಅಂತ್ಯವೇನಲ್ಲ. ಮುಂದಿನ ಕ್ರಿಕೆಟ್‌ ಸರಣಿಗಳಲ್ಲಿ ತಂಡಕ್ಕೆ ಅವರ ಅವಶ್ಯಕತೆ ಇದ್ದೇ ಇರುತ್ತದೆ ಎಂದು ಹರ್ಭಜನ್ ಹೇಳಿದ್ದಾರೆ.

“ಪ್ರತಿ ಆಟಗಾರರು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ, ಯಾರು ಆಯ್ಕೆಯಾಗುತ್ತಾರೆ ಎಂಬುದು ವಿಭಿನ್ನ ಅಂಶವಾಗಿದೆ. ಆಯ್ಕೆಯು ಅವರ ಫಾರ್ಮ್ ಮತ್ತು ತಂಡಕ್ಕೆ ಅವರ ಅಗತ್ಯವಿದೆಯೇ ಎಂಬುದನ್ನು ಅವಲಂಬಿಸಿರುತ್ತದೆ. ಅಪೆಕ್ಸ್ ಕ್ರಿಕೆಟ್ ಬೋರ್ಟ್‌ನಲ್ಲಿ ಅವರು ಸ್ಥಾನ ಪಡೆಯದೇ ಇರುವುದರ ಅರ್ಥ, ಅವರ ಹಾದಿಯ ಅಂತ್ಯವೆಂದಲ್ಲ” ಎಂದು ಹರ್ಭಜನ್ ವಿವರಿಸಿದ್ದಾರೆ.

“ಅವರನ್ನು ಹೊರಗಿಟ್ಟಿರುವುದು ಅವರಿಗೆ ಕಲಿಕೆಗೆ ಸಮಯ ನೀಡುತ್ತದೆ. ನಾನು ಇದನ್ನು ರಚನಾತ್ಮಕ ರೀತಿಯಲ್ಲಿ ನೋಡುತ್ತೇನೆ. ಇಲ್ಲಿಂದ ಅವರು ಉತ್ತಮ ಆಟಗಾರರಾಗಿ ಹೊರಹೊಮ್ಮಬಹುದೆಂದು ನಾನು ಭಾವಿಸುತ್ತೇನೆ. ಆದರೆ, ನಾವು ಇನ್ನೂ ಅವರ ಮನಸ್ಸಿನಲ್ಲಿ ಏನಾಗುತ್ತಿದೆ ಎಂಬುದನ್ನು ತಿಳಿಯಲಾಗಿಲ್ಲ. ಇಬ್ಬರೂ ಅದ್ಭುತ ಕ್ರಿಕೆಟಿಗರು. ಭವಿಷ್ಯದಲ್ಲಿ ಅವರು ಭಾರತಕ್ಕಾಗಿ ಸಾಕಷ್ಟು ಪಂದ್ಯಗಳನ್ನು ಗೆಲ್ಲುತ್ತಾರೆ” ಎಂದು ಹರ್ಭಜನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...