‘ಘೀಬ್ಲಿ ಟ್ರೆಂಡ್‌’ ಬಳಸುವ ಮುನ್ನ ಎಚ್ಚರ; ಪೊಲೀಸರು ಕೊಟ್ಟ ಸಂದೇಶವಿದು – ಓದಿ…

Date:

ಕಳೆದ ಒಂದು ವಾರದಲ್ಲಿ ‘ಘೀಬ್ಲಿ ಟ್ರೆಂಡ್‌’ನ ಆ್ಯನಿಮೇಟೆಡ್ ಚಿತ್ರಗಳು ಸಾಮಾಜಿಕ ಜಾಲತಾಣಗಳನ್ನು ತುಂಬಿಕೊಂಡಿವೆ. ನೆಟ್ಟಿಗರು ತಮ್ಮ ಚಿತ್ರಗಳನ್ನು ‘ಘೀಬ್ಲಿ ಟ್ರೆಂಡ್‌’ನ ಆ್ಯನಿಮೇಟೆಡ್ ಚಿತ್ರವಾಗಿ ಮಾರ್ಪಡಿಸಿಕೊಂಡು, ತಮ್ಮ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈಗ ‘ಘೀಬ್ಲಿ ಟ್ರೆಂಡ್‌’ನ ಆ್ಯನಿಮೇಟೆಡ್ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ ಆಗುತ್ತಿವೆ. ಉಳಿದವರನ್ನು ಬಳಸುವಂತೆ ಪ್ರೇರೇಪಿಸುತ್ತಿವೆ.

ಆರಂಭದಲ್ಲಿ ಐಟಿ ತಂತ್ರಜ್ಞಾನದಲ್ಲಿ ಗಮನ ಸೆಳೆದಿದ್ದ ‘ಚಾಟ್‌ಜಿಪಿಟಿ‘ಯಲ್ಲಿ ಹೊಸದಾಗಿ ‘ಘೀಬ್ಲಿ ಟ್ರೆಂಡ್‌’ಅನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನು ಬಳಸಿ ತಮ್ಮ ಚಿತ್ರಗಳನ್ನು ಆ್ಯನಿಮೇಟೆಡ್‌ ಚಿತ್ರಗಳಾಗಿ ಕೆಲವೇ ಸೆಕೆಂಡುಗಳಲ್ಲಿ ಮಾರ್ಪಡಿಸಬಹುದಾಗಿದೆ. ಈ ‘ಘೀಬ್ಲಿ ಟ್ರೆಂಡ್‌’ನ ಅಬ್ಬರ-ಹಾವಳಿಯ ನಡುವೆ ಗೋವಾ ಪೊಲೀಸರು ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ‘ಘೀಬ್ಲಿ ಟ್ರೆಂಡ್‌’ ಬಳಸುವ ಬಗ್ಗೆ ಎಚ್ಚರಿಕೆ ಇರಲಿ ಎಂದು ಮನವಿ ಮಾಡಿದ್ದಾರೆ.

ಗೋವಾ ಪೊಲೀಸರ ಎಚ್ಚರಿಕೆ ಸಂದೇಶ ಹೀಗಿದೆ: “ನಿಮ್ಮ (ಸಾರ್ವಜನಿಕರು) ಫೋಟೊಗಳನ್ನು ‘ಘೀಬ್ಲಿ ಟ್ರೆಂಡ್‌’ ಆ್ಯನಿಮೇಟೆಡ್ ಚಿತ್ರಗಳನ್ನಾಗಿ ಬದಲಾಯಿಸುವ ಮುನ್ನ ಎಚ್ಚರಿಕೆ ಇರಲಿ. ಇದು ಮನರಂಜನೆಯ ಭಾಗವಾಗಿರಬಹುದು. ಆದರೆ, ನಿಮ್ಮ ವೈಯಕ್ತಿಕ ಚಿತ್ರಗಳನ್ನು ನಿರ್ದಿಷ್ಟ ಆ್ಯಪ್‌ಗಳಲ್ಲಿ ಅಪ್‌ಲೋಡ್‌ ಮಾಡಿದಾಗ ನಿಮ್ಮ ಫೋಟೊಗಳು ಸೈಬರ್‌ ವಂಚಕರ ದುರುಪಯೋಗಕ್ಕೆ ಒಳಗಾಗಬಹುದು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ಫೋಟೊಗಳು ವಂಚಕರ ಕೈಸೇರಿದ್ದು, ದುರುಪಯೋಗ ಅಥವಾ ವಂಚನೆಯಾಗುತ್ತಿದ್ದಲ್ಲಿ, ತಕ್ಷಣವೇ 1930ಗೆ ಕರೆ ಮಾಡಿ ಮಾಹಿತಿ ನೀಡಿ” ಎಂದು ಗೋವಾ ಪೊಲೀಸರು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...