ಬಂಗಾಳ ಚುನಾವಣೆ | ‘ಜನತಾ ಪ್ರಣಾಳಿಕೆ’ ಅಭಿಯಾನ ನಡೆಸುತ್ತಿದೆ ಬಿಜೆಪಿ

Date:

ಕೆಲವೇ ವಾರಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅಧಿಕಾರ ಉಳಿಸಿಕೊಳ್ಳಲು ಆಡಳಿತಾರೂಢ ಟಿಎಂಸಿ, ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಹಾಗೂ ತಮ್ಮ ನೆಲೆಯನ್ನು ಹುಡುಕಿಕೊಳ್ಳಲು ಕಾಂಗ್ರೆಸ್‌ ಮತ್ತು ಎಡಪಕ್ಷಗಳು ಕಸರತ್ತು ನಡೆಸುತ್ತಿವೆ. ಚುನಾವಣಾ ಸಿದ್ದತೆಯಲ್ಲಿ ತೊಡಗಿವೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ, ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ಪಕ್ಷವು ‘ಬಂಗಾಳ ಮತ್ತೆ ಗೆಲ್ಲುತ್ತದೆ’ (ಆಬಾರ್ ಜಿತ್ಬೇ ಬಂಗ್ಲಾ) ಅಭಿಯಾನ ನಡೆಸುತ್ತಿದೆ. ಇದೀಗ, ಬಿಜೆಪಿ ಕೂಡ ‘ಜನತಾ ಪ್ರಣಾಳಿಕೆ’ ಅಭಿಯಾನ ಆರಂಭಿಸಿದೆ.

ಬಿಜೆಪಿ ಮೂಲಗಳ ಪ್ರಕಾರ, ಬಂಗಾಳದ ಎಲ್ಲ ಜಿಲ್ಲೆಗಳಲ್ಲಿಯೂ ಪಕ್ಷದ ಮುಖಂಡರು ಮತದಾರರಿಂದಿಗೆ ಚರ್ಚಿಸಲಿದ್ದಾರೆ. ಬಿಜೆಪಿ ಮುಖಂಡರು ಪ್ರತಿ ಗ್ರಾಮ, ಪಟ್ಟಣ ಹಾಗೂ ನಗರಗಳಲ್ಲಿ ಜನರಿಂದ ಸಲಹೆಗಳನ್ನು ಪಡೆಯಲಿದ್ದಾರೆ. ಮತದಾರರಿಂದ ನೇರವಾಗಿ  ಪಡೆದ ಪ್ರತಿಕ್ರಿಯೆಗಳ ಆಧಾರದ ಮೇಲೆ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುತ್ತಿದೆ. ಪ್ರಣಾಳಿಕೆಯು ಮಾರ್ಚ್ ಮೊದಲ ವಾರದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

“ಈಗಾಗಲೇ ಕೆಲವು ಭಾಗಗಳಿಂದ ಪ್ರತಿಕ್ರಿಯೆಗಳು ಬಂದಿವೆ. ಅವುಗಳು ಪ್ರಮಾಣಿಕವಾಗಿವೆ. ಜನರು ರಾಜಕೀಯ ಘೋಷಣೆಗಳನ್ನು ನೀಡುತ್ತಿಲ್ಲ. ಬದಲಾಗಿ ತಮ್ಮ ದೈನಂದಿನ ಹೋರಾಟಗಳು ಮತ್ತು ಜೀವನದ ಅನುಭವಗಳ ಬಗ್ಗೆ ಹೇಳುತ್ತಿದ್ದಾರೆ” ಎಂದು ಬಿಜೆಪಿ ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರೇ ನೆರವಾಗಿ ಸಲಹೆಗಳನ್ನು ನೀಡಲು ಬಿಜೆಪಿ ಜಿಲ್ಲಾ ಕಚೇರಿಗಳಲ್ಲಿ ಸಲಹಾ ಪಟ್ಟಿಗೆಗಳನ್ನು ತೆರೆಯಲಾಗಿದೆ. ಇಮೇಲ್‌ ಮೂಲಕವೂ ಸಲಹೆಗಳನ್ನು ಕಳಿಸಲು ಅವಕಾಶವಿದೆ. ವಿದ್ಯಾರ್ಥಿಗಳು, ಗೃಹಿಣಿಯರು ಹಾಗೂ ದಿನಗೂಲಿ ಕಾರ್ಮಿಕರು ಈ ಅಭಿಯಾನದಲ್ಲಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.

ಈ ಲೇಖನ ಓದಿದ್ದೀರಾ?: ಬಹುತ್ವದ ಬುಡಕ್ಕೇ ಕೊಡಲಿಪೆಟ್ಟು: ಸಮಾಜವನ್ನು ಆವರಿಸುತ್ತಿರುವ ಅಸಹಿಷ್ಣುತೆಯ ಕಾರ್ಮೋಡ

ಈವರೆಗೆ ಬಂದಿರುವ ಸಲಹೆಗಳಲ್ಲಿ ಪ್ರಮುಖ ಅಂಶಗಳನ್ನು ಪಟ್ಟಿ ಮಾಡಲಾಗಿದೆ ಎಂದಿರುವ ಬಿಜೆಪಿ, ಕೆಲವು ಅಂಶಗಳನ್ನು ಬಿಡುಗಡೆ ಮಾಡಿದೆ.

* ಭ್ರಷ್ಟಾಚಾರದ ಆರೋಪಗಳು.
* ಭಯಮುಕ್ತ ಸಮಾಜ ಮತ್ತು ಕಟ್ಟುನಿಟ್ಟಾದ ಕಾನೂನು ಸುವ್ಯವಸ್ಥೆಗಾಗಿ ಬೇಡಿಕೆ.
* ಬಂಗಾಳದೊಳಗೆ ಉದ್ಯೋಗ ಸೃಷ್ಟಿ ಮತ್ತು ಕೈಗಾರಿಕಾ ಅಭಿವೃದ್ಧಿ.
* ಸಿಂಡಿಕೇಟ್ ನಿಯಂತ್ರಣ ಮತ್ತು ಸ್ಥಳೀಯ ಬೆದರಿಕೆಗಳ ಆರೋಪ.
* ರಾಜಕೀಯ ಮಧ್ಯವರ್ತಿಗಳಿಲ್ಲದೆ ಕಲ್ಯಾಣ ಯೋಜನೆಗಳ ನೇರ ಜಾರಿ.
* ಯುವಜನರು ಬೇರೆ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಡೆಯಲು ಅವಕಾಶಗಳ ಸೃಷ್ಟಿ.
* ಸಮಾಜದ ಎಲ್ಲ ವರ್ಗಗಳಿಗೆ ಘನತೆ, ಭದ್ರತೆ ಮತ್ತು ಗೌರವ.

“ಅನೇಕ ಕಡೆಗಳಲ್ಲಿ ಈ ಅಭಿಯಾನವು ರಾಜಕೀಯ ಚಟುವಟಿಕೆಗಿಂತ ಸಾರ್ವಜನಿಕ ಅಹವಾಲು ಆಲಿಕೆಯಂತೆ ಭಾಸವಾಯಿತು. ಜನರು ಮಾತನಾಡಿದರು, ನಾವು ಆಲಿಸಿದೆವು. ಅವುಗಳಲ್ಲಿ, ಮಹಿಳಾ ಸುರಕ್ಷತೆ ಮತ್ತು ಸ್ಥಳೀಯ ಉದ್ಯೋಗಾವಕಾಶ ಕುರಿತು ಹೆಚ್ಚು ಬೇಡಿಕೆಗಳಿವೆ” ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...