ಪಶ್ಚಿಮ ಬಂಗಾಳ: ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಬಂಗಾಳಿ ಎರಡನೇ ಕಡ್ಡಾಯ ಭಾಷೆ

Date:

ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಬಂಗಾಳಿ ಭಾಷೆಯನ್ನು ಎರಡನೇ ಭಾಷೆಯಾಗಿ ಕಡ್ಡಾಯಗೊಳಿಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಸಂಪುಟ ಸೋಮವಾರ(ಆಗಸ್ಟ್ 7) ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯು ಖಾಸಗಿ ಶಾಲೆಗಳ ವಿರುದ್ಧದ ದೂರುಗಳನ್ನು ಪರಿಶೀಲಿಸಲು ಶಿಕ್ಷಣ ಆಯೋಗವನ್ನು ಸ್ಥಾಪಿಸಲು ತನ್ನ ಒಪ್ಪಿಗೆ ನೀಡಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಬಂಗಾಳಿಯನ್ನು ಎರಡನೇ ಭಾಷೆಯಾಗಿ ಕಲಿಯಲು ಆಯ್ಕೆಗಳಿದ್ದರೂ, ಹೆಚ್ಚಿನ ವಿದ್ಯಾರ್ಥಿಗಳು ಹಿಂದಿ ಅಥವಾ ಇತರ ಭಾಷೆಗಳಿಗೆ ಆದ್ಯತೆ ನೀಡುತ್ತಾರೆ. ಇದರ ಪರಿಣಾಮವಾಗಿ, ವಿದ್ಯಾರ್ಥಿಗಳು ಬೆಂಗಾಳಿ ಭಾಷೆಯನ್ನು ಸರಿಯಾಗಿ ಕಲಿಯುತ್ತಿಲ್ಲ. ಆದಕಾರಣ ರಾಜ್ಯದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಬಂಗಾಳಿ ಭಾಷೆಯನ್ನು ಎರಡನೇ ಭಾಷೆಯಾಗಿ ಕಡ್ಡಾಯಗೊಳಿಸಲು ರಾಜ್ಯ ಸಚಿವ ಸಂಪುಟವು ನಿರ್ಧರಿಸಿದೆ. ಆರೋಗ್ಯ ಆಯೋಗದ ಮಾದರಿಯಲ್ಲಿ ನಿವೃತ್ತ ನ್ಯಾಯಾಧೀಶರನ್ನು ಮುಖ್ಯಸ್ಥರನ್ನಾಗಿ ಶಿಕ್ಷಣ ಆಯೋಗವನ್ನು ಸ್ಥಾಪಿಸಲಾಗುವುದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಂಕ್ರಾಮಿಕ ಸಮಯದಲ್ಲಿ, ಖಾಸಗಿ ಶಾಲೆಗಳು ಬೋಧನಾ ಶುಲ್ಕವನ್ನು ಅತಿಯಾಗಿ ಹೆಚ್ಚಿಸಿರುವ ಬಗ್ಗೆ ನಮಗೆ ಹಲವಾರು ದೂರುಗಳು ಬಂದವು. ಅಲ್ಲದೆ, ಪಠ್ಯಕ್ರಮ ಮತ್ತು ಪರೀಕ್ಷೆಗಳನ್ನು ನಡೆಸಿದ ರೀತಿಯ ಬಗ್ಗೆಯೂ ದೂರುಗಳಿವೆ. ಈ ಆಯೋಗವು ಇವೆಲ್ಲ ಸಮಸ್ಯೆಗಳನ್ನು ಪರಿಶೀಲಿಸುತ್ತದೆ” ಎಂದು ಅಧಿಕಾರಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಗುಜರಾತ್‌ | ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಎಎಪಿ ಮೈತ್ರಿ

ಬಂಗಾಳಿಯನ್ನು ಎರಡನೇ ಭಾಷೆಯಾಗಿ ಕಡ್ಡಾಯಗೊಳಿಸುವ ನಿರ್ಧಾರವನ್ನು ಸ್ವಾಗತಿಸಿದ ‘ಬಂಗಾಳ ಪೊಕ್ಕೋ’ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಬ್ರತ್ಯಾ ಬಸು ಅವರನ್ನು ಅಭಿನಂದಿಸಿದೆ.

“ಬಂಗಾಳದ ಜನರು ಈ ನಿರ್ಧಾರಕ್ಕಾಗಿ ಬಹಳ ಸಮಯದಿಂದ ಕಾಯುತ್ತಿದ್ದರು” ಎಂದು ಬಂಗಾಳಿ ಭಾಷೆಯ ಪ್ರಚಾರಕ್ಕಾಗಿ ಕೆಲಸ ಮಾಡುವ ಸಂಘಟನೆಯ ಸಂಘಟನಾ ಕಾರ್ಯದರ್ಶಿ ಕೌಸಿಕ್ ಮೈತಿ ಹೇಳಿದರು.

ರಾಜ್ಯದಲ್ಲಿ ಏಳು ಹೊಸ ಜಿಲ್ಲೆಗಳ ರಚನೆ ಕುರಿತು ಮುಂದಿನ ಮೂರು ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವ ಸಮಿತಿ ರಚನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಸಭೆಯಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಂಪುಟ ತೆಗೆದುಕೊಂಡ ನಿರ್ಧಾರಗಳು ಸೇರಿದಂತೆ ರಾಜ್ಯ ಸರ್ಕಾರದ ಎಲ್ಲ ನಿರ್ಧಾರಗಳ ಅನುಷ್ಠಾನಕ್ಕೆ 15 ದಿನಗಳ ಗಡುವನ್ನು ನಿಗದಿಪಡಿಸಿದರು. ಅನುಷ್ಠಾನದ ಕುರಿತು ಮುಖ್ಯಮಂತ್ರಿ ಕಚೇರಿಗೆ ವರದಿ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...