ರಾಮೇಶ್ವರಂ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು: ಆಹಾರ ಗುಣಮಟ್ಟ ಇಲಾಖೆ ದಾಳಿ

Date:

ಬೆಂಗಳೂರು ಮೂಲದ ಹೋಟೆಲ್‌ ರಾಮೇಶ್ವರಂ ಕೆಫೆ ಹೈದರಾಬಾದ್‌ನ ಮೇದಾಪುರ್‌ ಶಾಖೆಯ ಮೇಲೆ ಆಹಾರ ಗುಣಮಟ್ಟ ಇಲಾಖೆ ದಾಳಿ ನಡೆಸಿದ್ದು, ಅವಧಿ ಮೀರಿದ ಆಹಾರ ಪದಾರ್ಥಗಳು, ಯಾವುದೇ ಕಂಪನಿಯ ಗುರುತು ಇಲ್ಲದ ಆಹಾರ ಪಾದಾರ್ಥಗಳು ಕಂಡುಬಂದಿವೆ.

ಆಹಾರ ಗುಣಮಟ್ಟ ಇಲಾಖೆಯು ನಡೆಸಿದ ದಾಳಿಯಲ್ಲಿ ಅವಧಿ ಮೀರಿದ 100 ಕೆಜಿ ಉದ್ದಿನ ಬೇಳೆ, 10 ಕೆ ಜಿ ಮೊಸರು ಹಾಗೂ 8 ಲೀಟರ್‌ ಹಾಲು ಪತ್ತೆಯಾಗಿದೆ. ದಾಳಿಯ ಸಂದರ್ಭದಲ್ಲಿ 450 ಕೆಜಿ ಯಾವುದೇ ಕಂಪನಿಯ ಲೇಬಲ್‌ ಹೊಂದಿರದ ಕಚ್ಚಾ ಅಕ್ಕಿ, 20 ಕೆಜಿ ಅಲಸಂದೆ ಕಾಳು ಹಾಗೂ 300 ಕೆಜಿ ಬೆಲ್ಲವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ದಾಳಿ ನಡೆಸುವ ಸಂದರ್ಭದಲ್ಲಿ ರಾಮೇಶ್ವರ ಕಫೆಯಲ್ಲಿ ಆಹಾರ ನಿರ್ವಹಣೆಗಾಗಿ ವೈದ್ಯಕೀಯ ದೇಢೀಕರಣ ಪ್ರಮಾಣಪತ್ರ ಕೂಡ ಸಲ್ಲಿಸಲಾಗಿಲ್ಲ. ಕಸದ ಡಬ್ಬಿಯನ್ನು ಕೂಡ ಸರಿಯಾಗಿ ಮುಚ್ಚಿರಲಾಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

ಆಹಾರ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಇಂದು ಹೈದರಾಬಾದ್‌ನ ಹಲವು ಕಡೆಗಳಲ್ಲಿರುವ ಹೋಟಲ್‌ಗಳ ಮೇಲೆ ದಾಳಿ ನಡೆಸಿದ್ದು, ಬಹುತೇಕ ಹೆಸರುವಾಸಿಯಾದ ಹೋಟಲ್‌ಗಳಲ್ಲಿ ಸ್ವಚ್ಛತೆ ಗುಣಮಟ್ಟವನ್ನು ಕಾಯ್ದುಕೊಂಡಿರಲಿಲ್ಲ. ಸ್ವಚ್ಛತೆ ಕಾಯ್ದುಕೊಳ್ಳದ ಹೋಟಲ್‌ಗಳ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ.

ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಈ ವರ್ಷದ ಜನವರಿಯಲ್ಲಿ ಹೈದರಾಬಾದ್‌ನ ಮೇದಾಪುರ ಪ್ರದೇಶದಲ್ಲಿ ತನ್ನ ಶಾಖೆಯನ್ನು ಆರಂಭಿಸಿತ್ತು.

ಇತ್ತೀಚಿಗೆ ಮಾರ್ಚ್‌ 1 ರಂದು ಬೆಂಗಳೂರಿನ ಕುಂದಲಹಳ್ಳಿ ಶಾಖೆಯ ರಾಮೇಶ್ವರಂ ಕಫೆಯಲ್ಲಿ ಬಾಂಬ್‌ ಸ್ಫೋಟವುಂಟಾಗಿ 10 ಮಂದಿ ಗಾಯಗೊಂಡಿದ್ದರು. ಘಟನೆಗೆ ಕಾರಣರಾದವರನ್ನು ಎನ್‌ಐಎ ಬಂಧಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...