ಮಣಿಪುರದಿಂದ ಆರಂಭವಾದ ಭಾರತ್ ನ್ಯಾಯ ಯಾತ್ರೆ: 66 ದಿನಗಳ ಕಾಲ ನಡೆಯುವ ಅಭಿಯಾನ

Date:

ಕಳೆದ ವರ್ಷ ಭಾರತದ ದಕ್ಷಿಣದಿಂದ ಉತ್ತರಕ್ಕೆ ದೇಶಾದ್ಯಂತ ಯಶಸ್ವಿಯಾಗಿದ್ದ 4 ಸಾವಿರ ಕಿ.ಮೀ.ನ ಭಾರತ್ ಜೋಡೋ ಪಾದಯಾತ್ರೆಯ ನಂತರ ಇಂದಿನಿಂದ ಪೂರ್ವದಿಂದ ಪಶ್ಚಿಮಕ್ಕೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭವಾಗಲಿದೆ.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ದೇಶದ ವಿವಿಧ ರಾಜ್ಯಗಳ ನೂರಾರು ನಾಯಕರು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ದೆಹಲಿಯಿಂದ ಮಣಿಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ದೀಪೆಂದರ್ ಹೂಡ, ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ಹಿಂದೆ ಸರಿಯುವುದಿಲ್ಲ. ಭಾರತ್ ಜೋಡೋ ನ್ಯಾಯ ಯಾತ್ರೆ ಭಾರತದ ಜನರ ನ್ಯಾಯಕ್ಕಾಗಿ ಹೋರಾಟವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಣಿಪುರದಿಂದ ಮುಂಬೈವರೆಗೂ 6,713 ಕಿ.ಮೀ ದೂರದವರೆಗೂ ಸಂಚರಿಸಲಿರುವ ಯಾತ್ರೆಯು 67 ದಿನಗಳ ಕಾಲ ನಡೆಯಲಿದೆ ಉತ್ತರ ಪ್ರದೇಶ, ಮಧ್ಯ ಪ್ರದೇಶ, ಪಶ್ಚಿಮ ಬಂಗಾಳ,ಅಸ್ಸಾಂ ಸೇರಿದಂತೆ ಒಟ್ಟು 15 ರಾಜ್ಯಗಳ 85 ಜಿಲ್ಲೆಗಳಲ್ಲಿ ಸಾಗಲಿದೆ. ಮಣಿಪುರದ ಥೌಬಲ್‌ನಿಂದ ಉದ್ಘಾಟನೆಗೊಂಡು ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

‘ನ್ಯಾಯಾಕ್ಕಾಗಿ ಹೋರಾಟ’ ಎಂಬ ಘೋಷಣೆಯೊಂದಿಗೆ ಸಂಚರಿಸಲಿರುವ ಭಾರತ್ ನ್ಯಾಯ ಯಾತ್ರೆಯಲ್ಲಿ ಕಾರ್ಯಕರ್ತರು ಹಾಗೂ ನಾಗರಿಕರು ಸೇರಿದಂತೆ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ನ್ಯಾಯ ಯಾತ್ರೆಯು ಒಟ್ಟು 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಮಾರ್ಚ್‌ನಲ್ಲಿ ಅಭಿಯಾನವು ಸಮಾಪ್ತಿಗೊಳ್ಳುತ್ತದೆ.

ಇಂದು(ಜನವರಿ 14) ಪೂರ್ತಿ ಮಣಿಪುರ ರಾಜ್ಯದಲ್ಲಿಯೇ ಯಾತ್ರೆ ಸಂಚರಿಸಲಿದ್ದು, 107 ಕಿ.ಮೀ ಅಂತರದೊಂದಿಗೆ 4 ಜಿಲ್ಲೆಗಳನ್ನು ಒಳಗೊಳ್ಳಲಿದೆ. ನಾಳೆ ಯಾತ್ರೆ ನಾಗಾಲ್ಯಾಂಡ್‌ಗೆ ತೆರಳಲಿದೆ.

‘ಪ್ರಧಾನಿ ಅವರು ‘ಅಮೃತ ಕಾಲ’ದ  ಬಗ್ಗೆ ಸುಳ್ಳಿನ ಕನಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ, ಹತ್ತು ವರ್ಷಗಳಲ್ಲಿ ದೇಶದಲ್ಲಿ ‘ಅನ್ಯಾಯದ ಕಾಲ’ ನಡೆಯುತ್ತಿದೆ. ರಾಹುಲ್ ಗಾಂಧಿ ಅವರ ಸಂದೇಶವು ಜನರಿಗೆ ತಲುಪುತ್ತದೆ ಎಂಬ ವಿಶ್ವಾಸ ನಮ್ಮದು’ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...