ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹ ರಾವ್, ಚರಣ್ ಸಿಂಗ್, ವಿಜ್ಞಾನಿ ಸ್ವಾಮಿನಾಥನ್‌ಗೆ ಭಾರತ ರತ್ನ ಪ್ರಶಸ್ತಿ

Date:

ಕೇಂದ್ರ ಸರ್ಕಾರ ಮತ್ತೆ ಮೂವರಿಗೆ ಭಾರತ ರತ್ನ ಘೋಷಿಸಿದೆ. ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹರಾವ್‌, ಚರಣ್‌ ಸಿಂಗ್‌ ಹಾಗೂ ಹಸಿರು ಕ್ರಾಂತಿಯ ಹರಿಕಾರ ಎಂ ಎಸ್‌ ಸ್ವಾಮಿನಾಥನ್‌ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿದೆ.

ಕಳೆದ ವಾರ ಬಿಜೆಪಿ ನಾಯಕ ಎಲ್‌ ಕೆ ಅಡ್ವಾನಿ ಅವರಿಗೆ  ಭಾರತ ರತ್ನ ಘೋಷಿಸಲಾಗಿತ್ತು. 15 ದಿನಗಳ ಹಿಂದೆ ಹಿಂದುಳಿದ ವರ್ಗಗಳ ನಾಯಕ, ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್‌ ಅವರಿಗೆ ಭಾರತದ ಅತ್ಯುನ್ನತ ಪ್ರಶಸ್ತಿ ಘೋಷಿಸಲಾಗಿತ್ತು.

ಪಿ ವಿ ನರಸಿಂಹರಾವ್‌ ಅವರಿಗೆ ಘೋಷಣೆಯಾಗಿರುವ ಬಗ್ಗೆ ಮೊಮ್ಮಗ ಎನ್‌ ವಿ ಸುಬ್ಬಯ್ಯ, ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದವರಾದ ಚರಣ್ ಸಿಂಗ್ 1979 ಜುಲೈನಿಂದ ಜನವರಿ 1980ರ ಜನವರಿ 14ರವರೆಗೆ ಜನತಾ ಪಕ್ಷದ ಸರ್ಕಾರದಿಂದ ಭಾರತದ ಪ್ರಧಾನಿಯಾದ್ದರು. 1967 ಮತ್ತು 1970ರ ಅವಧಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿಯು ಸೇವೆ ಸಲ್ಲಿಸಿದ್ದರು.

ಅವಿಭಜಿತ ಆಂಧ್ರ ಪ್ರದೇಶದ ಕರೀಮ್‌ನಗರದ ಪಿ ವಿ ನರಸಿಂಹರಾವ್ ಜೂನ್‌ 21 1991 ರಿಂದ ಮೇ 16 1996ರ ವರೆಗೆ ಕಾಂಗ್ರೆಸ್‌ನಿಂದ ಪ್ರಧಾನಿಯಾಗಿದ್ದರು. ಪ್ರಧಾನಿಯಾಗುವ ಮುನ್ನ 1970ರ ದಶಕದಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

ಭಾರತ ರತ್ನ ಘೋಷಣೆಯಾಗಿರುವ ಮತ್ತೋರ್ವ ಹಸಿರು ಕ್ರಾಂತಿಯ ಪಿತಾಮಹ ಎಂ ಎಸ್‌ ಸ್ವಾಮಿನಾಥನ್‌ ಅವರು ಆಗಸ್ಟ್ 7, 1925 ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದ್ದರು. ಅವರು ಕೃಷಿ ವಿಜ್ಞಾನಿ, ಸಸ್ಯ ತಳಿಶಾಸ್ತ್ರಜ್ಞ, ಆಡಳಿತಗಾರ ಮತ್ತು ಮಾನವತಾವಾದಿಯಾಗಿದ್ದರು.

ಭಾರತದ ಕಡಿಮೆ ಆದಾಯದ ರೈತರು ಹೆಚ್ಚು ಉತ್ಪಾದಿಸಲು ಸಹಾಯ ಮಾಡುವ ಹೆಚ್ಚಿನ ಇಳುವರಿ ನೀಡುವ ಭತ್ತದ ತಳಿಗಳನ್ನು ಅಭಿವೃದ್ಧಿಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಕಳೆದ ವರ್ಷ ಸೆ.28ರಂದು ತಮ್ಮ 98ನೇ ವಯಸ್ಸಿನಲ್ಲಿ ಮೃತಪಟ್ಟಿದ್ದರು.

ಕಳೆದ ಒಂದು ತಿಂಗಳಲ್ಲಿ ಕೇಂದ್ರ ಸರ್ಕಾರ ಐವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದೆ.

ಈ ಸುದ್ದಿ ಓದಿದ್ದೀರಾ ? ಈ ದಿನ ಸಂಪಾದಕೀಯ | ಬೇಸಿಗೆ ಬೇಗ ಬಂದಿದೆ; ಜೀವಜಲಕ್ಕೆ ತತ್ವಾರ ತಂದಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...