ಮಧ್ಯಪ್ರದೇಶ | ಪ್ರೇಮಿಗಳಿಗೆ ಗುಂಡು ಹಾರಿಸಿ ಮೊಸಳೆಯಿರುವ ನದಿಗೆ ಎಸೆದ ಹೆತ್ತವರು

Date:

ವಿರೋಧದ ನಡುವೆಯೂ ಪ್ರೀತಿ ಮುಂದುವರೆಸಿದ ಪ್ರೇಮಿಗಳನ್ನು ಗುಂಡಿಕ್ಕಿ ಕೊಂದ ಪೋಷಕರು ಮೊಸಳೆಯಿರುವ ನದಿಗೆ ಎಸೆದ ಆಘಾತಕಾರಿ ಘಟನೆ ಮಧ್ಯ ಪ್ರದೇಶ ದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣ ಸಂಬಂಧಿಸಿದಂತೆ ಮಧ್ಯ ಪ್ರದೇಶ ರಾಜ್ಯದ ಮೊರೆನಾ ಜಿಲ್ಲೆಯ ಅಂಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ವಾರಗಳ ಹಿಂದೆ ಯುವತಿಯ ಪೋಷಕರು ಈ ಕೃತ್ಯ ಎಸಗಿದ್ದು, ಯುವತಿಯ ಪೋಷಕರಿಗೆ ಅವರ ಕೆಲವು ಸಂಬಂಧಿಕರೂ ಸಹಾಯ ಮಾಡಿದ್ದರು ಎಂಬ ವಿಚಾರ ಬಯಲಾಗಿದೆ.

ಮಧ್ಯ ಪ್ರದೇಶ ದ ಮೊರೆನಾ ಜಿಲ್ಲೆಯ ರತ್ನಬಸೈ ಗ್ರಾಮದ 18 ವರ್ಷ ವಯಸ್ಸಿನ ಯುವತಿ ಶಿವಾನಿ ತೋಮರ್, ತಮ್ಮ ಪಕ್ಕದ ಗ್ರಾಮವಾದ ಬಲುಪುರ ನಿವಾಸಿ 21 ವರ್ಷದ ರಾಧೆಶ್ಯಾಂ ತೋಮರ್ ಎಂಬಾತನನ್ನು ಪ್ರೀತಿಸುತ್ತಿದ್ದರು. ಒಂದೇ ಜಾತಿಯವರಾಗಿದ್ದರೂ ಇಬ್ಬರ ಪ್ರೀತಿಗೆ ಕುಟುಂಬಸ್ಥರು ಒಪ್ಪಿಗೆ ಕೊಟ್ಟಿರಲಿಲ್ಲ. ಇಷ್ಟಾದರೂ ಹೆತ್ತವರ ಮಾತು ಕೇಳದೆ ಪ್ರೇಮಿಗಳು ತಮ್ಮ ಪ್ರೇಮ ಮುಂದುವರೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಖುಷ್ಬು ವಿರುದ್ಧ ‘ಹಳೆಯ ಪಾತ್ರೆ’ ಹೇಳಿಕೆ; ಡಿಎಂಕೆ ವಕ್ತಾರ ಉಚ್ಚಾಟನೆ

ಇದರಿಂದ ಆಕ್ರೋಶಗೊಂಡ ಯುವತಿಯ ಪೋಷಕರು ಯುವಕ ಮತ್ತು ಯುವತಿ ಇಬ್ಬರು ಒಟ್ಟಿಗೆ ಇದ್ದಾಗ ಅವರನ್ನು ಸೆರೆ ಹಿಡಿದು ಇಬ್ಬರ ಮೇಲೂ ಗುಂಡು ಹಾರಿಸಿ ಕೊಂದಿದ್ದಾರೆ. ಬಳಿಕ ಇಬ್ಬರ ಶವಕ್ಕೂ ಭಾರವಾದ ಕಲ್ಲುಗಳನ್ನು ಕಟ್ಟಿ, ಮೊಸಳೆಗಳು ಹೆಚ್ಚಾಗಿರುವ ಚಂಬಲ್ ನದಿಯಲ್ಲಿ ಶವಗಳನ್ನು ಎಸೆದಿದ್ದಾರೆ. ಈ ವಿಷಯವನ್ನು ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ಧಾರೆ.

ಈ ನದಿಯಲ್ಲಿ ಮೊಸಳೆಗಳ ಓಡಾಟ ವಿಪರೀತ ಇರುವ ಕಾರಣ, ಶವಗಳನ್ನು ಮೊಸಳೆಗಳು ತಿನ್ನಲಿ ಎಂದು ಆರೋಪಿಗಳು ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ.

2 ವಾರಗಳ ಬಳಿಕ ಈ ಕೊಲೆ ಕೃತ್ಯ ಬೆಳಕಿಗೆ ಬಂದ ಕೂಡಲೇ ಮಧ್ಯ ಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಈಜುಗಾರರನ್ನು ಸಂಪರ್ಕ ಮಾಡಿದ ಪೊಲೀಸರು, ಇಬ್ಬರ ಮೃತದೇಹವನ್ನು ಪತ್ತೆ ಮಾಡಬೇಕೆಂದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜೂನ್ 3 ರಿಂದ ಇಬ್ಬರು ನಾಪತ್ತೆಯಾಗಿದ್ದರು. ಯುವಕ ರಾಧೆಶ್ಯಾಂ ತೋಮರ್‌ನ ಕುಟುಂಬಸ್ಥರು ಶಿವಾನಿ ತೋಮರ್‌ ಪೋಷಕರ ವಿರುದ್ಧ ದೂರು ನೀಡಿದ್ದರು. ಈ ಸಂದರ್ಭದಲ್ಲಿ ಶಿವಾನಿ ತೋಮರ್ ಕುಟುಂಬಸ್ಥರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ ವೇಳೆ ಅಮಾನುಷ ಕೃತ್ಯ ಬಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...