ಬಿಹಾರ | ಉದ್ಘಾಟನೆಗೂ ಮುನ್ನ ನದಿಯಲ್ಲಿ ಕೊಚ್ಚಿ ಹೋದ 12 ಕೋಟಿ ರೂ. ವೆಚ್ಚದ ಸೇತುವೆ

Date:

ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ನದಿಯಲ್ಲಿ ಕೊಚ್ಚಿ ಹೋಗಿದೆ. ಕಳಪೆ ಕಾಮಗಾರಿ ಈ ದುರಂತಕ್ಕೆ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೇತುವೆ ಕೊಚ್ಚಿ ಹೋಗುತ್ತಿರುವ ದೃಶ್ಯ ವೈರಲ್‌ ಆಗಿರುವ ವಿಡಿಯೋದಲ್ಲಿ ಸೆರೆಯಾಗಿದೆ. ಸೇತುವೆ ನಿರ್ಮಿಸಿ ಒಂದು ವರ್ಷವೂ ಕಳೆದಿರಲಿಲ್ಲ. ಉದ್ಘಾಟನೆಯನ್ನು ಕೂಡ ನೆರವೇರಿರಲಿಲ್ಲ.ಗುತ್ತೆಗೆದಾರ ಹಾಗೂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ಉಂಟಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸಿಕ್ತಿ ಕ್ಷೇತ್ರದ ಶಾಸಕ ವಿಜಯ್ ಮಂಡಲ್ ಮಾತನಾಡಿ, ಈ ಸೇತುವೆಯನ್ನು ಜಿಲ್ಲೆಯ ಗ್ರಾಮೀಣ ಕಾಮಗಾರಿ ಇಲಾಖೆ ಸಿದ್ಧಪಡಿಸಿದೆ. ನೆಲದ ಮೇಲೆಯೇ ಕಂಬಗಳನ್ನು ಹೂತು ಸಿದ್ಧಪಡಿಸಲಾಗಿದೆ. ಕೂಡು ರಸ್ತೆ ಕೂಡ ನಿರ್ಮಾಣವಾಗಿಲ್ಲ. ಸುಮಾರು 100 ಮೀಟರ್ ಉದ್ದದ ಈ ಸೇತುವೆಗೆ ಸುಮಾರು 12 ಕೋಟಿ ರೂ. ವೆಚ್ಚವಾಗಿದ್ದು, ಉದ್ಘಾಟನೆಯೂ ಆಗಿರಲಿಲ್ಲ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪೊಲೀಸ್ ಭಾಷೆಯಲ್ಲಿ ದರ್ಶನ್ ವಿಚಾರಣೆ: ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಿರುವ ಆರೋಪಿ ನಟ?

ಸೇತುವೆ ನಿರ್ಮಾಣದಲ್ಲಿ ಗುಣಮಟ್ಟವಿಲ್ಲದ ವಸ್ತುಗಳ ಬಳಕೆಯನ್ನು ಜನರು ಮಾಧ್ಯಮಗಳ ಗಮನಕ್ಕೆ ತಂದಿದ್ದಾರೆ. ಇತ್ತೀಚೆಗೆ ಸೇತುವೆಯ ಮಾರ್ಗವನ್ನು ಪುನಃಸ್ಥಾಪಿಸಲು ಇಲಾಖೆಯಿಂದ ಪ್ರಯತ್ನಗಳು ಪ್ರಾರಂಭವಾಗಿದ್ದವು, ಆದರೆ ಅದಕ್ಕೂ ಮೊದಲು ಸೇತುವೆಯೇ ಕುಸಿದಿದೆ.

ಬಿಹಾರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸೇತುವೆ ಕುಸಿತದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಕಳೆದ ವರ್ಷ ಜೂನ್‌ನಲ್ಲಿ ಸುಲ್ತಂಗಂಜ್‌ನಲ್ಲಿ ಗಂಗಾ ನದಿಗೆ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಕುಸಿದಿತ್ತು. ಅದರ ನಂತರ, ಈ ವರ್ಷದ ಮಾರ್ಚ್‌ನಲ್ಲಿ ಸುಪೌಲ್‌ನಲ್ಲಿ ಕೋಸಿ ನದಿಗೆ ನಿರ್ಮಿಸಲಾಗಿದ್ದ ಸೇತುವೆಯ ಸ್ಲ್ಯಾಬ್ ಕಳಚಿ ಬಿದ್ದಿತ್ತು. ಈ ವೇಳೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು.

ಅದೇ ಸಮಯದಲ್ಲಿ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಬಂಕಾದ ಬೆಲ್‌ಹಾರ್‌ನಲ್ಲಿ ಲೋಹಗರ್ ನದಿಯ ಮೇಲೆ ನಿರ್ಮಿಸಲಾಗಿದ್ದ ಸೇತುವೆ ಪ್ರವಾಹಕ್ಕೆ ಸಿಕ್ಕಿ ಕುಸಿದಿತ್ತು. ಇದರಿಂದಾಗಿ ಸುಮಾರು 50ಕ್ಕೂ ಹೆಚ್ಚು ಗ್ರಾಮಗಳ ಜನರ ಸಂಚಾರ ಬಂದ್ ಆಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...