ಬಿಹಾರದ ಹುಡುಗಿಯರು 25 ಸಾವಿರಕ್ಕೆ ವಿವಾಹಕ್ಕೆ ಲಭ್ಯ: ಉತ್ತರಾಖಂಡ ಬಿಜೆಪಿ ಸಚಿವೆ ರೇಖಾ ಆರ್ಯ ಪತಿಯ ವಿವಾದಾತ್ಮಕ ಹೇಳಿಕೆ

Date:

ಬಿಹಾರದ ಹುಡುಗಿಯರು ಕೇವಲ 20 ರಿಂದ 25 ಸಾವಿರ ರೂಪಾಯಿಗೆ ವಿವಾಹಕ್ಕೆ ಲಭ್ಯ ಎಂದು ಹೇಳಿಕೆ ನೀಡುವ ಮೂಲಕ ಉತ್ತರಾಖಂಡ ಸಚಿವೆ ರೇಖಾ ಆರ್ಯ ಅವರ ಪತಿ ವಿವಾದ ಹುಟ್ಟುಹಾಕಿದ್ದಾರೆ. ಈ ಹೇಳಿಕೆಯನ್ನು ಪಕ್ಷಬೇಧ ಮರೆತು ಎಲ್ಲ ಬಿಹಾರ ರಾಜಕಾರಣಿಗಳು ಖಂಡಿಸಿದ್ದು, ಬಿಹಾರ ರಾಜ್ಯ ಮಹಿಳಾ ಆಯೋಗ ಈ ಹೇಳಿಕೆ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಅವರಿಗೆ ನೋಟಿಸ್ ನೀಡಿದೆ.

ಇಂಡಿಯಾ ಮೈತ್ರಿಕೂಟದ ಮುಖಂಡರು ಸಚಿವೆಯ ಪತಿ ನೀಡಿರುವ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದು, ಎನ್ ಡಿಎ ಮಿತ್ರ ಪಕ್ಷಗಳು ಕೂಡಾ ಕಟು ಶಬ್ದಗಳಲ್ಲಿ ಈ ಹೇಳಿಕೆಯನ್ನು ತಿರಸ್ಕರಿಸಿವೆ.

ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ರೇಖಾ ಆರ್ಯ ಅವರ ಪತಿ ಗಿರಿಧರ್ ಲಾಲ್ ಸಾಹು ಯುವಕರ ಗುಂಪಿನೊಂದಿಗೆ ಮಾತನಾಡುವ ವೇಳೆ ಅವರ ವೈವಾಹಿಕ ಸ್ಥಿತಿ ಬಗ್ಗೆ ವಿಚಾರಿಸುತ್ತಾ, ಬಿಹಾರದ ಹುಡುಗಿಯರ ಜತೆಗೆ ಕಡಿಮೆ ವೆಚ್ಚದಲ್ಲಿ ವಿವಾಹ ಸಂಬಂಧ ಏರ್ಪಡಿಸಬಹುದು ಎಂದು ಹೇಳುತ್ತಿರುವ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹೇಳಿಕೆಯನ್ನು ವಿವಿಧ ರಾಜಕೀಯ ಮುಖಂಡರು ಮತ್ತ ಜಾಲತಾಣ ಬಳಕೆದಾರರು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಕ ವಸ್ತು ಉತ್ಪಾದನೆಗಿಳಿದ ಹೊರರಾಜ್ಯ ಮಾಫಿಯಾ ಗ್ಯಾಂಗ್‌; ಕರ್ನಾಟಕದ ಕಳಂಕ!

ಹೇಳಿಕೆಯನ್ನು ಖಂಡಿಸಿರುವ ಆರ್ ಜೆಡಿ ವಕ್ತಾರ ಚಿತ್ತರಂಜನ್ ಗಗನ್, ಸಚಿವೆಯನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತು ಪತಿಯನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿಗೆ ಸ್ವಲ್ಪವಾದರೂ ನೈತಿಕತೆ ಹಾಗೂ ಘನತೆ ಇದ್ದರೆ, ಪಕ್ಷ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ತಕ್ಷಣವೇ ನಾಯಕರ ವಿರುದ್ಧ ಕ್ರಮ ಕೈಗೊಳ್ಲಬೇಕು ಎಂದು ಅವರು ಒತ್ತಾಯಿಸಿದರು.

ಬಿಹಾರದ ಮಹಿಳೆಯರನ್ನು ಹರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಕಾರ್ಯಾಧ್ಯಕ್ಷ ನಿತಿನ್ ನಬೀನ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ. ಬಿಹಾರ ಮಹಿಳೆಯರು ಮಾರಾಟಕ್ಕಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಾಜೇಶ್ ರಾಥೋಡ್ ಹೇಳಿದ್ದಾರೆ.

ಆಡಳಿತಾರೂಢ ಎನ್ ಡಿಎ ಮುಖಂಡರು ಕೂಡಾ ಹೇಳಿಕೆಯನ್ನು ಟೀಕಿಸಿದ್ದಾರೆ. ಹೇಳಿಕೆ ನೀಡಿರುವ ಸಚಿವೆಯ ಪತಿ ಬಹಿರಂಗವಾಗಿ ಕ್ಷಮೆಯಾಚಿಸದಿದ್ದಲ್ಲಿ ಅವರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಜೆಡಿಯು ಸಂಸದ ರಾಮಪ್ರೀತ್ ಮಂಡಲ್ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...