ಬಿಹಾರದಲ್ಲಿ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಒಬ್ಬರ ಕೊಲೆ

Date:

ಬಿಹಾರದ ಪಾಟ್ನಾದ ಹಿಂದೂನಿ ಬದರ್ ಪಟ್ಟಣದಲ್ಲಿ ದಲಿತ ಸಮುದಾಯದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ನಡೆಸಿದ ನಂತರ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ದಲಿತ ಸಮುದಾಯದ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರವೆಸಗಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಓರ್ವ ಬಾಲಕಿ ಕೊಲೆಯಾಗಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಬಾಲಕಿ ಜೀವನ್ಮರಣದ ಹೋರಾಟದಿಂದಿಗೆ ಪಾಟ್ನಾದ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಕುಟುಂಬಸ್ಥರ ಹೇಳಿಕೆಯ ಪ್ರಕಾರ, ಇಬ್ಬರು ಬಾಲಕಿಯರು ಸೋಮವಾರ (ಜನವರಿ 8) ಹಸುವಿನ ಸಗಣಿ ಬೆರಣಿಯನ್ನು ತರಲು ಹೋದವರು ವಾಪಸ್‌ ಬರಲಿಲ್ಲ. ಈ ಬಗ್ಗೆ ಪುಲ್ವಾರಿ ಶರೀಫ್ ಠಾಣೆಗೆ ದೂರು ದಾಖಲಿಸಲಾಗಿತ್ತು. ನಂತರದಲ್ಲಿ ಒಬ್ಬ ಬಾಲಕಿ ಮೃತಪಟ್ಟಿರುವುದು ಹಾಗೂ ಇನ್ನೊಬ್ಬಳು ಬಾಲಕಿ ಗಂಭೀರವಾಗಿ ಗಾಯಗೊಂಡಿರುವುದನ್ನು ಗ್ರಾಮದ ಹೊರಗೆ ಗಮನಿಸಿದರು. ತಕ್ಷಣವೇ ಪೊಲೀಸರಿಗೆ ಸುದ್ದಿ ಮುಟ್ಟಿಸಲಾಯಿತು. ಪೊಲೀಸರು ಆಗಮಿಸಿ ಮೃತದೇಹವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

“ಮೃತಪಟ್ಟ ಬಾಲಕಿ 8 ರಿಂದ 10 ವರ್ಷ ವಯಸ್ಸಿನವಳಾಗಿದ್ದು, ಬದುಕುಳಿದಿರುವ ಬಾಲಕಿ 12 ವರ್ಷ ಪ್ರಾಯದವಳು. ಇಬ್ಬರು ಗ್ರಾಮದ ಹೊರಗೆ ಬೆತ್ತಲೆಯಾಗಿ ಬಿದ್ದಿದ್ದರು. ಘಟನೆಯ ಬಗ್ಗೆ ಪೋಕ್ಸೋ ಕಾಯಿದೆ ಸೇರಿದಂತೆ ಐಪಿಸಿಗೆ ಸಂಬಂಧಿಸಿದ ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ಸಾವಿನ ಬಗ್ಗೆ ನಿಖರವಾದ ಕಾರಣಗಳನ್ನು ಪತ್ತೆ ಹಚ್ಚುತ್ತಿದ್ದು, ಘಟನಾ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ

ಗ್ರಾಮಸ್ಥರ ಪ್ರತಿಭಟನೆ

ಘಟನೆಯ ನಂತರ ಗ್ರಾಮದೆಲ್ಲಡೆ ಸುದ್ದಿ ಹರಡಿ ಅಮಾನುಷ ಕೃತ್ಯ ನಡಸಿದವರನ್ನು ಗಲ್ಲಿಗೇರಿಸಬೇಕೆಂದು ಸಾರ್ವಜನಿಕರು ಪುಲ್ವಾರಿ ಶರೀಫ್ ಠಾಣೆಯೆದುರು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಇನ್ನೂ ಪತ್ತೆ ಹಚ್ಚಿ ಬಂಧಿಸಲಾಗಿಲ್ಲದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಟೈರ್‌ಗಳನ್ನು ಸುಟ್ಟು ಮುಖ್ಯ ರಸ್ತೆಯನ್ನು ಬಂದ್‌ ಮಾಡಿದರು. ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಪುಲ್ವಾರಿ ಶರೀಫ್ ಠಾಣೆಯ ಪೊಲೀಸರನ್ನು ಘೇರಾವ್ ಮಾಡಲು ಯತ್ನಿಸಿದರು.

ನಮ್ಮ ಹೆಣ್ಣು ಮಕ್ಕಳು ಕಾಣೆಯಾಗಿರುವ ಬಗ್ಗೆ ದೂರು ನೀಡಲು ಹೋದಾಗ ಪೊಲೀಸರು ಸಹಕರಿಸದೆ ಗ್ರಾಮದಲ್ಲೇ ಹುಡುಕುವಂತೆ ನಮ್ಮ ಮಾತನ್ನು ನಿರ್ಲಕ್ಷಿಸಿದರು. ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದರೆ ಈ ಅಮಾನುಷ ಕೃತ್ಯವನ್ನು ತಡೆಯಬಹುದಿತ್ತು ಎಂದು ಸಂತ್ರಸ್ತ ಬಾಲಕಿಯರ ತಾಯಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...