ಬಿಹಾರ | ಅಪಾಯ ಮಟ್ಟ ಮೀರಿದ ನದಿಗಳು; ಪ್ರವಾಹದಲ್ಲಿ ಸಿಲುಕಿದ 150 ಕಾರ್ಮಿಕರು

Date:

ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಗಾಹಾದಲ್ಲಿ ಸುಮಾರು 150 ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಸಿಕ್ಕಿಬಿದ್ದ 150 ಕಾರ್ಮಿಕರಲ್ಲಿ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಇದುವರೆಗೆ ಸುಮಾರು 40 ಜನರನ್ನು ರಕ್ಷಿಸಿವೆ, ಇದರಲ್ಲಿ ವೃದ್ಧರು, ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಕಾರ್ಮಿಕರು ಗದ್ದೆಗಳಲ್ಲಿ ಕೆಲಸ ಮಾಡಲು ಗಂಡಕ್ ನದಿಯನ್ನು ದಾಟುತ್ತಿದ್ದಾಗ ನದಿಯ ನೀರಿನ ಮಟ್ಟವು ಇದ್ದಕ್ಕಿದ್ದಂತೆ ಏರಿದ್ದು ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಮಾಹಿತಿ ಪಡೆದ ಸ್ಥಳೀಯ ಆಡಳಿತವು ಎಸ್‌ಡಿಆರ್‌ಎಫ್ ತಂಡಗಳನ್ನು ಸ್ಥಳಕ್ಕೆ ರವಾನಿಸಿದ್ದು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಿಹಾರ| ಮತ್ತೆ ಮೂರು ಸೇತುವೆ ಕುಸಿತ; 15 ದಿನಗಳಲ್ಲಿ ಒಂಬತ್ತು ಪ್ರಕರಣ!

ಈ ಬಗ್ಗೆ ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಅಧಿಕಾರಿಯೊಬ್ಬರು, “ರಾಜ್ಯ ಆಡಳಿತದಿಂದ ನಾಲ್ಕು ದೋಣಿಗಳನ್ನು ನಿಯೋಜಿಸಲಾಗಿದೆ. ಎಸ್‌ಡಿಆರ್‌ಎಫ್ ತಂಡವು ರಕ್ಷಣಾ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದೆ” ಎಂದು ಹೇಳಿದ್ದಾರೆ.

ಜನರು ತಾಳ್ಮೆಯಿಂದಿರಲು, ಸುರಕ್ಷಿತ ಸ್ಥಳದಲ್ಲಿ ನಿಲ್ಲಲು ತಿಳಿಸಲಾಗಿದೆ. ಎಸ್‌ಡಿಆರ್‌ಎಫ್ ತಂಡವು ದೋಣಿಗಳು ಮತ್ತು ಇತರ ರಕ್ಷಣಾ ಸಾಧನಗಳೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿದ್ದು, ಸಿಕ್ಕಿಬಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಮಾಡುತ್ತಿದೆ.

ಕಳೆದ 24 ಗಂಟೆಗಳಲ್ಲಿ ಬಿಹಾರದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ನದಿಗಳಾದ ಕೋಸಿ, ಮಹಾನಂದ, ಬಾಗಮತಿ, ಗಂಡಕ್, ಕಮಲಾ ಬಾಲನ್ ಮತ್ತು ಕಮಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ಜಲಸಂಪನ್ಮೂಲ ಇಲಾಖೆ ಹೊರಡಿಸಿದ ಬುಲೆಟಿನ್ ತಿಳಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...