ಬಿಲಾವಲ್ ಭುಟ್ಟೊ ಭಯೋತ್ಪಾದಕ ಉದ್ಯಮದ ವಕ್ತಾರ: ಜೈಶಂಕರ್ ಟೀಕೆ

Date:

  • ಎಸ್‌ಸಿಒ ವಿದೇಶಾಂಗ ಸಚಿವರ ಸಮಾವೇಶದಲ್ಲಿ ಎಸ್‌ ಜೈಶಂಕರ್‌ ಹೇಳಿಕೆ
  • ಚೀನಾ, ಭಾರತದಲ್ಲಿ ಸೇನಾ ಹಿಂತೆಗೆತ ಮುಂದುವರಿಯಬೇಕು ಎಂದ ಜೈಶಂಕರ್‌

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ಜರ್ದಾರಿ ಅವರು ಭಯೋತ್ಪಾದಕತೆ ಉದ್ಯಮದ ಉತ್ತೇಜಕ, ಸಮರ್ಥಕ ಹಾಗೂ ವಕ್ತಾರ ಎಂದು ವಿದೇಶಾಂಗ ಸಚಿವ ಜೈಶಂಕರ್ ಶುಕ್ರವಾರ (ಮೇ 5) ಟೀಕಿಸಿದರು.

ಗೋವಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ವಿದೇಶಾಂಗ ಸಚಿವರ ಸಮಾವೇಶದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಎಸ್‌ ಜೈಶಂಕರ್‌ ಪ್ರತಿಕ್ರಿಯಿಸಿದರು.

ಭಯೋತ್ಪಾದನೆ ವಿರುದ್ಧ ಹೋರಾಟ ಸಂಬಂಧ ಭಾರತ ಮತ್ತು ಪಾಕಿಸ್ತಾನ ನಡುವಿನ ಮಾತುಕತೆ ಸಾಧ್ಯತೆ ಪ್ರಶ್ನೆಗೆ ಅವರು ಈ ಉತ್ತರ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಯೋತ್ಪಾದನೆ ಸಂತ್ರಸ್ತರು ಎಂದು ಹೇಳಿಕೊಳ್ಳುವವರು ಭಯೋತ್ಪಾದನೆಯಲ್ಲಿ ತೊಡಗಿರುವವರ ಜೊತೆ ಕುಳಿತು ಭಯೋತ್ಪಾದನೆ ಬಗ್ಗೆ ಚರ್ಚಿಸುವುದಿಲ್ಲ” ಎಂದು ಜೈಶಂಕರ್‌ ಬಿಲಾವಲ್‌ ಭುಟ್ಟೊ ವಿರುದ್ಧ ವಾಗ್ದಾಳಿ ನಡೆಸಿದರು.

“ಭಯೋತ್ಪಾದನೆ ಹೆಚ್ಚುತ್ತಿರುವ ಅಪಾಯದ ಕುರಿತು ಉತ್ತೇಜನೆ, ಸಮರ್ಥಿಸುವ ಅದರ ವಕ್ತಾರ ಬಿಲಾವಲ್‌ ಅವರ ನಿಲುವಿನ ಬಗ್ಗೆ ಎಸ್‌ಸಿಒ ಸಮಾವೇಶದಲ್ಲಿ ತಿಳಿಸಲಾಗಿದೆ” ಎಂದು ಎಸ್‌ ಜೈಶಂಕರ್‌ ಹೇಳಿದರು.

“ಶಾಂಘೈ ಸಹಕಾರ ಸಂಘಟನೆಯ ಸದಸ್ಯ ರಾಷ್ಟ್ರದ ವಿದೇಶಾಂಗ ಸಚಿವರಾಗಿ ಬಿಲಾವಲ್‌ ಭುಟ್ಟೊ ಅವರು ಭಾರತಕ್ಕೆ ಬಂದಿದ್ದಾರೆ. ಇದು ಅವರ ಬಹುಪಕ್ಷೀಯ ರಾಜತಾಂತ್ರಿಕತೆಯ ಭಾಗ. ಅವರ ಭೇಟಿ ಬಗ್ಗೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ” ಎಂದು ಎಸ್‌ ಜೈಶಂಕರ್‌ ಸ್ಪಷ್ಟಪಡಿಸಿದರು.

ಭಾರತ- ಚೀನಾ ನಡುವಿನ ಗಡಿ ಸಮಸ್ಯೆ ಕುರಿತು ಮಾತನಾಡಿದ ಜೈಶಂಕರ್, “ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆ ನೆಲೆಸಿದಾಗ ಮಾತ್ರ ಭಾರತ ಮತ್ತು ಚೀನಾ ನಡುವಿನ ಬಾಂಧವ್ಯ ಸಹಜಸ್ಥಿತಿಗೆ ಬರಲು ಸಾಧ್ಯ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಸಮಿತಿ

ಎಸ್‌ಸಿಒ ಸಮಾವೇಶಕ್ಕೂ ಮುನ್ನ ಚೀನಾ ವಿದೇಶಾಂಗ ಸಚಿವ ಕ್ವಿನ್‌ ಗಾಂಗ್‌ ಅವರೊಂದಿಗೆ ಎಸ್‌ ಜೈಶಂಕರ್‌ ಮಾತುಕತೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. “ಭಾರತ ಹಾಗೂ ಚೀನಾ ಗಡಿಯಲ್ಲಿ ಸಹಜಸ್ಥಿತಿ ಇಲ್ಲ. ಈ ಬಗ್ಗೆ ನಾವು ಮುಕ್ತವಾಗಿ ಚರ್ಚಿಸಿದ್ದೇವೆ. ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆ ನೆಲೆಸಬೇಕಾದರೆ ಗಡಿಯಲ್ಲಿ ಸೇನೆಯನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಮುಂದುವರಿಯಬೇಕು” ಎಂದು ಜೈಶಂಕರ್‌ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...