ಬಿಲ್ಕಿಸ್ ಬಾನೊ ಪ್ರಕರಣ | ಗುಜರಾತ್, ಕೇಂದ್ರಕ್ಕೆ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

Date:

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ನ್ಯಾ ಬಿ ವಿ ನಾಗರತ್ನ ಹಾಗೂ ನ್ಯಾ. ಉಜ್ವಲ್ ಭುಯಾನ್‌ ಅವರಿದ್ದ ವಿಭಾಗೀಯ ಪೀಠ ಆದೇಶವನ್ನು ಕಾಯ್ದಿರಿಸಿದೆ.

ಆಗಸ್ಟ್‌ನಲ್ಲಿ ಆರಂಭವಾದ 11 ದಿನಗಳ ಸುದೀರ್ಘ ವಿಚಾರಣೆಯ ನಂತರ ನ್ಯಾಯಮೂರ್ತಿಗಳು ಆದೇಶವನ್ನು ಕಾಯ್ದಿರಿಸಿದರು.

ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಹಾಗೂ ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಅಕ್ಟೋಬರ್ 16 ರೊಳಗೆ ಸಲ್ಲಿಸುವಂತೆ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಪ್ರತಿವಾದಿಗಳಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳನ್ನು ಸಲ್ಲಿಸಲು ಗುಜರಾತ್ ರಾಜ್ಯದ ವಕೀಲರನ್ನು ಕೇಳಿದ್ದೇವೆ. ಮೂಲ ದಾಖಲೆಗಳು ಗುಜರಾತಿಯಲ್ಲಿವೆ ಎಂದು ಸಲ್ಲಿಸಲಾಗಿದೆ. ಆದ್ದರಿಂದ ಇಂಗ್ಲಿಷ್ ಭಾಷಾಂತರಗಳು ಸೋಮವಾರದೊಳಗೆ ಮೂಲ ದಾಖಲೆಗಳೊಂದಿಗೆ ಸಹ ಒದಗಿಸಬೇಕು. ಕೇಂದ್ರ ಸರ್ಕಾರವು ಕೂಡ ಮೂಲ ದಾಖಲೆಗಳನ್ನು ಒದಗಿಸಬೇಕು” ಎಂದು ನ್ಯಾಯಾಧೀಶರು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ ಮೇಲೇಕೆ ಮೋದಿ ಪ್ರೀತಿ: ಸುಬ್ರಹ್ಮಣ್ಯನ್ ಸ್ವಾಮಿ ಪ್ರಶ್ನೆ

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ 11 ಅಪರಾಧಿಗಳನ್ನು ಅವರು ನಡೆಸಿದ ಅಮಾನುಷ ಅಪರಾಧಕ್ಕಾಗಿ ಮರಳಿ ಜೈಲಿಗೆ ಕಳುಹಿಸಬೇಕು ಎಂದು ಬಿಲ್ಕಿಸ್‌ ಪರ ವಕೀಲೆ ಶೋಭಾ ಗುಪ್ತಾ ಸುಪ್ರೀಂ ಕೋರ್ಟಿನ ಮುಂದೆ ತಮ್ಮ ವಾದ ಮಂಡಿಸಿದರು.

ಅವರನ್ನು ಬಿಡುಗಡೆಗೊಳಿಸುವ ಮುನ್ನ ಅಪರಾಧದ ಸ್ವರೂಪವನ್ನು, ಅದು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಸರ್ಕಾರ ಪರಿಗಣಿಸಬೇಕಿತ್ತು ಎಂದು ಬಿಲ್ಕಿಸ್‌ ಬಾನೊ ಅವರ ವಕೀಲೆ ಹೇಳಿದರು.

ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಲ್ಕಿಸ್ ಬಾನೊ ಮಾತ್ರವಲ್ಲದೆ, ಸಿಪಿಎಂ ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಲಖನೌ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ರೂಪ್ ರೇ ವರ್ಮಾ ಸೇರಿದಂತೆ ಹಲವರು ಪಿಐಎಲ್ ಸಲ್ಲಿಸಿದ್ದಾರೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರೂ ಅಪರಾಧಿಗಳಿಗೆ ನೀಡಲಾದ ವಿನಾಯಿತಿ ಮತ್ತು ಅವರ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ದಾರೆ.

2002ರಲ್ಲಿ ಸಂಭವಿಸಿದ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ಭುಗಿಲೆದ್ದ ಕೋಮುಗಲಭೆಯಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುತ್ತಿದ್ದ ಬಿಲ್ಕಿಸ್ ಬಾನೊ ಅವರ ಕುಟುಂಬದ ಮೇಲೆ ದಾಳಿ ನಡೆದಿತ್ತು. ಆ ಸಮಯದಲ್ಲಿ ಐದು ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಜೊತೆಗೆ ಬಾನೊ ಕುಟುಂಬದ ಏಳು ಜನರನ್ನು ಹತ್ಯೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...