ಉತ್ತರ ಪ್ರದೇಶ| ಮತದಾನ ನಡೆದ ಒಂದು ದಿನದ ಬಳಿಕ ಬಿಜೆಪಿ ಅಭ್ಯರ್ಥಿ ನಿಧನ

Date:

ಉತ್ತರ ಪ್ರದೇಶದಲ್ಲಿ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು ಇದಾದ ಒಂದು ದಿನದ ಬಳಿಕವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಕುನ್ವರ್ ಸರ್ವೇಶ್ ಸಿಂಗ್ ಶನಿವಾರ ನಿಧನರಾಗಿದ್ದಾರೆ.

ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುನ್ವರ್ ಸಿಂಗ್ ಅವರು ಶುಕ್ರವಾರ ಮತದಾನ ಮಾಡಿದ್ದರು. 72 ವರ್ಷ ಪ್ರಾಯದ ಕುನ್ವರ್ ಅವರು ಅನಾರೋಗ್ಯ ಕಾರಣ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಇದನ್ನು ಓದಿದ್ದೀರಾ? ವಿಪಕ್ಷಗಳನ್ನು ಹಿಂದು ವಿರೋಧಿ ಎಂದು ಬಿಂಬಿಸುವುದೇ ಮೋದಿ ಪ್ರಮುಖ ತಂತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಅಭ್ಯರ್ಥಿಯ ನಿಧನಕ್ಕೆ ಹೃದಯಾಘಾತ ಕಾರಣ ಎಂದು ಹೇಳಲಾಗಿದೆ. ಆದರೆ ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ ಸಿಂಗ್ ಅವರು ಕುನ್ವರ್ ಸಿಂಗ್ ಅವರ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ.

“ಮೊರಾದಾಬಾದ್ ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯ ಮೂಲವಾಗಿದ್ದ ಮತ್ತು ಮೊರಾದಾಬಾದ್‌ನ ಮಾಜಿ ಸಂಸದ, ಭಾರತೀಯ ಜನತಾ ಪಕ್ಷದ ಕಠಿಣ ಪರಿಶ್ರಮದ ನಾಯಕ ಕುನ್ವರ್ ಸರ್ವೇಶ್ ಸಿಂಗ್ ಅವರ ಅಕಾಲಿಕ ನಿಧನವು ಅತ್ಯಂತ ದುಃಖ ಮತ್ತು ನೋವಿನ ಸಂಗತಿಯಾಗಿದೆ” ಎಂದು ಭೂಪೇಂದ್ರ ಚೌಧರಿ ಸಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಸರ್ವೇಶ್ ಸಿಂಗ್ ಅವರು ಗೋಲೋಕ್ ನಿವಾಸಿಯಾಗಿದ್ದು ಅವರ ಸಾವು ಮೊರಾದಾಬಾದ್‌ಗೆ ಮಾತ್ರವಲ್ಲದೆ ಉತ್ತರ ಪ್ರದೇಶದ ಬಿಜೆಪಿ ಕುಟುಂಬಕ್ಕೂ ತುಂಬಲಾರದ ನಷ್ಟವಾಗಿದೆ. ಅವರ ಬೆಂಬಲಿಗರಿಗೆ ಮತ್ತು ಕುಟುಂಬ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡುವಂತೆ ಭಗವಂತ ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ. ನನ್ನ ಸಂತಾಪಗಳು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಉತ್ತರ ಪ್ರದೇಶ | ಚಪ್ಪಲಿ ಹಾರ ಹಾಕಿಕೊಂಡು ಮತಯಾಚಿಸಿದ ಅಭ್ಯರ್ಥಿ

ಕುನ್ವರ್ ಸರ್ವೇಶ್ ಸಿಂಗ್ ಅವರು ಮೊರಾದಾಬಾದ್‌ನ ಠಾಕುರ್‌ದ್ವಾರ ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಬಿಜೆಪಿಯ ಶಾಸಕರಾಗಿದ್ದು 1991, 1993, 1996, 2002 ಮತ್ತು 2012 ರಲ್ಲಿ ಯುಪಿ ವಿಧಾನಸಭೆ ಸದಸ್ಯರಾಗಿದ್ದರು. 2014ರಲ್ಲಿ ಮೊರಾದಾಬಾದ್‌ನಿಂದ ಸಂಸದರಾಗಿ ಆಯ್ಕೆಯಾದ ಅವರು 2019ರಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ವಿಫಲರಾದರು. ಸಮಾಜವಾದಿ ಪಕ್ಷದ ಅಭ್ಯರ್ಥಿ ಡಾ.ಎಸ್.ಟಿ.ಹಸನ್ ವಿರುದ್ಧ ಸೋಲು ಕಂಡರು.

ಇನ್ನು “ಬಿಜೆಪಿ ಅಭ್ಯರ್ಥಿಯ ನಿಧನವು ಚುನಾವಣಾ ಪ್ರಕ್ರಿಯೆಗೆ ಅಡ್ಡಿಯಾಗುವುದಿಲ್ಲ. ಜೂನ್ 4 ರಂದು ನಿಗದಿಯಂತೆ ಮೊರಾದಾಬಾದ್‌ನ ಮತ ಎಣಿಕೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿ ಗೆದ್ದರೆ ಮಾತ್ರ ಉಪಚುನಾವಣೆ ನಡೆಯಲಿದೆ” ಎಂದು ಡಿಎಂ ಮಾನವೇಂದ್ರ ಸಿಂಗ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...