ಜೈಲಿಗೆ ತಳ್ಳಿದರೂ ಜನರ ಪರವಾಗಿ ಹೋರಾಟ; ವಯನಾಡಿನಲ್ಲಿ ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

Date:

  • ಸಂಸದ ಸ್ಥಾನದ ರದ್ದಾದ ನಂತರ ವಯನಾಡಿನಲ್ಲಿ ಸಭೆ ನಡೆಸಿದ ರಾಹುಲ್ ಗಾಂಧಿ
  • ಸಹೋದರನ ಜೊತೆಗೆ ಬಹಿರಂಗ ಸಭೆಯಲ್ಲಿ ಭಾಗವಹಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ

ಬಿಜೆಪಿ ನನ್ನ ಮನೆ ಕಿತ್ತಕೊಂಡು ಜೈಲಿಗೆ ತಳ್ಳಲಿ, ಆದರೆ ವಯನಾಡು ಜನರನ್ನು ಪ್ರತಿನಿಧಿಸುವುದನ್ನು ಹಾಗೂ ಅವರ ಪರವಾಗಿ ಹೋರಾಟ ನಡೆಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಮೊದಲ ಬಾರಿಗೆ ಕೇರಳದ ವಯನಾಡಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದರು.

“ಬಿಜೆಪಿಯವರು ನನ್ನ ಸಂಸದನ ಸ್ಥಾನ, ವಾಸ್ತವ್ಯ ಮತ್ತು ಸ್ಥಾನಮಾನ ಕಿತ್ತುಕೊಂಡಿರಬಹುದು, ಜೈಲಿಗೆ ಕೂಡ ಹಾಕಬಹುದು. ಆದರೆ ನನ್ನನ್ನು ವಯನಾಡಿನ ಜನತೆಯಿಂದ ದೂರಮಾಡಲು ಸಾಧ್ಯವಾಗದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಲ್ಕು ವರ್ಷಗಳ ಹಿಂದೆ ನಾನು ಇಲ್ಲಿಗೆ ಬಂದು ಸಂಸದನಾಗಿದ್ದೇನೆ. ಕೇರಳವು ನನ್ನನ್ನು ಕುಟುಂಬದ ಭಾಗವಾಗಿ ಮತ್ತು ಅವರ ಮಗ ಎಂದು ಭಾವಿಸಿದೆ. ಸಂಸದ ಎಂದರೆ ಕೇವಲ ಜನರ ಪ್ರತಿನಿಧಿಯಲ್ಲ. ಸಾರ್ವಜನಿಕರ ಭಾವನೆಗಳು, ಕಷ್ಟಗಳು ಹಾಗೂ ಅವರ ಅಗತ್ಯಗಳನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ರಾಹುಲ್ ಗಾಂಧಿ ತಿಳಿಸಿದರು.

ತಾನು ಕೆಲವು ವರ್ಷಗಳಿಂದ ಬಿಜೆಪಿ ವಿರುದ್ಧ ಹೋರಾಡುತ್ತಿದ್ದೇನೆ ಎಂದು ಒತ್ತಿ ಹೇಳಿದ ರಾಹುಲ್‌ ಗಾಂಧಿ, “ಎದುರಾಳಿಯು ಸತ್ಯ ಹಾಗೂ ಜನರಿಗೆ ಹೊರತುಪಡಿಸಿ ಪೊಲೀಸರಿಗಾಗಲಿ ಅಥವಾ ಮತ್ಯಾರಿಗಾಗಲಿ ಹೆದರುವುದಿಲ್ಲ ಎಂದು ಆಡಳಿತ ನಡೆಸುವವರು ತಿಳಿದುಕೊಳ್ಳಬೇಕು. ಅವರು ಸತ್ಯದ ಪರ ಮಾತನಾಡಿದ್ದಕ್ಕಾಗಿ ನನ್ನ ಮೇಲೆ ಹೆಚ್ಚು ಆಕ್ರಮಣ ಮಾಡುತ್ತಾರೆ. ಆದರೂ ಕೊನೆಯವರೆಗೂ ಸತ್ಯ ಮಾತನಾಡುವುದನ್ನು ನಿಲ್ಲಿಸುವುದಿಲ್ಲ” ಎಂದು ಹೇಳಿದರು.

“ವಯನಾಡಿನಲ್ಲಿ ಎಷ್ಟು ಜನರು ಪ್ರವಾಹದಲ್ಲಿ ಮನೆ ಕಳೆದುಕೊಂಡರು ಮತ್ತು ಅವರು ಹೇಗೆ ಸಂಕಷ್ಟಕ್ಕೆ ಒಳಗಾದರು ಎಂಬುದನ್ನು ನಾನು ನೋಡಿದ್ದೇನೆ. ಜನರ ಕಷ್ಟಕ್ಕಿಂತ ನಾನು ಖಾಲಿ ಮಾಡಿರುವ ಮನೆ ಮುಖ್ಯವಲ್ಲ. ಜನರ ಏಳಿಗೆ, ದೇಶದ ಹಿತಾಸಕ್ತಿಯೇ ನನಗೆ ಮುಖ್ಯ” ಎಂದು ತಿಳಿಸಿದರು

ಈ ಸುದ್ದಿ ಓದಿದ್ದೀರಾ?: ‘ಭಾರತೀಯ ಮುಸ್ಲಿಮರು ಸ್ಥಿತಿವಂತರು’; ನಿರ್ಮಲಾ ಹೇಳಿಕೆಗೆ ವಾಸ್ತವ ಚಿತ್ರಣ ತೆರೆದಿಟ್ಟ ಪತ್ರಕರ್ತರು

ಗೌತಮ್‌ ಅದಾನಿ ರಕ್ಷಣೆಗೆ ನಿಂತ ಸರ್ಕಾರ

ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, “ಬಿಜೆಪಿಯವರಿಗೆ ಉತ್ತರಿಸಲು ಸಾಧ್ಯವಾಗದ ಪ್ರಶ್ನೆಯನ್ನು ಕೇಳಿದ್ದಕ್ಕಾಗಿ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಲಾಯಿತು. ಗೌತಮ್ ಅದಾನಿಯನ್ನು ರಕ್ಷಿಸಲು ಇಡೀ ಸರ್ಕಾರ ಪ್ರಯತ್ನಿಸುತ್ತಿದೆ. ಪ್ರಧಾನಿಯವರು ಅದಾನಿಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳುಗೆಡವುತ್ತಿದೆ. ಪ್ರಧಾನಿಯವರು ಪ್ರತಿದಿನ ತಮ್ಮ ಡ್ರೆಸ್ಸಿಂಗ್ ಶೈಲಿಯನ್ನು ಬದಲಾಯಿಸುತ್ತಿದ್ದಾರೆ ವಿನಾ ಸಾಮಾನ್ಯ ಜನರ ಜೀವನಶೈಲಿಯಲ್ಲಿ ಯಾವುದೇ ಬದಲಾವಣೆ ತರಲು ಪ್ರಯತ್ನಿಸುತ್ತಿಲ್ಲ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...